- Tuesday
- August 25th, 2026
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹಾಗೂ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಜು.09 ರಂದು ಮಂಗಳವಾರ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಮತ್ತು ವಿದ್ಯುತ್ ಮಾರ್ಗಕ್ಕೆ ತಾಗಿಕೊಂಡಿರುವ ಅಪಾಯಕಾರಿ ಸ್ವಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಇರುವುದರಿಂದ 11ಕೆ.ವಿ...
ಆಲೆಟ್ಟಿ:ಮಂಗಳೂರು ವಿಭಾಗ, ಸುಳ್ಯ ವಲಯದ ಆಲೆಟ್ಟಿ ಶಾಖೆ ವ್ಯಾಪ್ತಿಯ ಆಲೆಟ್ಟಿ ಗ್ರಾಮದ ಪೈಂಬೆಚಾಲ್ ಎಂಬಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಡುವುದರ ಮೂಲಕ ವನ ಮಹೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ಸದಸ್ಯರಾದ ಗೀತಾ ಕೋಲ್ಚಾರು ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಬ್ದುಲ್ ಪೈಜಿ...
ದ.ಕ.ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಪಾಯಕಾರಿ ಸ್ಥಿತಿಯಲ್ಲಿರುವ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಮನೆ ಗಾಯ ತೂಗುಸೇತುವೆಯ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ಅಲ್ಲಿಯ ನಿವಾಸಿಗಳಿಗೆ ಸಮಸ್ಯೆಯಾಗಿದ್ದು, ಶಾಶ್ವತ ಪರ್ಯಾಯ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರಿಗೆ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ...
ಅಜ್ಜಾವರ : ಅಜ್ಜಾವರ ಗ್ರಾಮದಲ್ಲಿ ಮಕ್ಕಳ ಕಳ್ಳರ ಹಾವಳಿ ಎಂಬ ತಲೆ ಬರಹದಲ್ಲಿ ಸಂದೇಶವೊಂದು ಭಾನುವಾರ ಇಡೀ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು ಇದು ಪೊಲೀಸ್ ಠಾಣೆ ಮೆಟ್ಟಿಲೇರಿ ೨೪ ಗಂಟೆಯ ಒಳಗಾಗಿ ಪ್ರಕರಣದ ಸತ್ಯಾಸತ್ಯತೆಯನ್ನು ಪೊಲೀಸ್ ಅಧಿಕಾರಿಗಳು ಜಾಡು ಹಿಡಿದು ಹೊರಟಾಗ ಸತ್ಯವು ಹೊರಬಿದ್ದಿದೆ ಎಂದು ತಿಳಿದು ಬಂದಿದೆ. ಇದು ನಡೆದಿರುವ ಸ್ಥಳವು ಅಜ್ಜಾವರ...
ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕುರುಂಜಿಬಾಗ್, ಸುಳ್ಯ , ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ.) ಮಂಗಳೂರು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ, ದೇವಚಳ್ಳ, ಗುತ್ತಿಗಾರು, ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ನಾಲ್ಕು ಗ್ರಾಮಗಳ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜು.10 ರಂದು ಗುತ್ತಿಗಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ...
ಮಂಗಳೂರು,: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್...
ಐನೆಕಿದು ಗ್ರಾಮದ ಕೆದಿಲ ಸಾವಿತ್ರಿ ರಾಧಾಕೃಷ್ಣ ಇವರು ಅಲ್ಪಕಾಲದ ಅಸೌಖ್ಯದಿಂದ ಜೂ.29 ರಂದು ನಿಧನರಾಗಿದ್ದಾರೆ . ಮೃತರು ಇಬ್ಬರು ಪುತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸೇತುವೆಯಿಂದ ನದಿಗೆ ಹಾರಿದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುಳಿಕುಕ್ಕು ಸೇತುವೆಯಲ್ಲಿ ಇಂದು ನಡೆದಿದೆ. ಪುಳಿಕುಕ್ಕು ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಯುವಕನೋರ್ವ ನದಿಯಲ್ಲಿ ಪೊದೆಗಳನ್ನು ಹಿಡಿದು ಇರುವುದನ್ನು ಸ್ಥಳೀಯರು ನೋಡಿ, ತಕ್ಷಣವೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಯುವಕನನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಅರಂತೋಡು ಗ್ರಾಮದ ಅಡ್ತಲೆ ಸ.ಹಿ.ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜು.07 ರಂದು ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಾಡಲಾಯಿತು. ಸಂಘದ ಅಧ್ಯಕ್ಷರಾಗಿ ಭವಾನಿಶಂಕರ ಅಡ್ತಲೆ, ಉಪಾಧ್ಯಕ್ಷರಾಗಿ ಡಿಲ್ಲಿಕುಮಾರ್ ಕಾಯರ, ಕಾರ್ಯದರ್ಶಿಯಾಗಿ ಸಂತೋಷ್ ಪಿಂಡಿಮನೆ, ಜತೆ ಕಾರ್ಯದರ್ಶಿ ಯಾಗಿ ಶಶಿಕುಮಾರ್ ಉಳುವಾರು, ಕೋಶಾಧಿಕಾರಿಯಾಗಿ ಗಿರೀಶ್ ಅಡ್ಕ, ಗೌರವ ಅಧ್ಯಕ್ಷರಾಗಿ ಮೋಹನ್ ಅಡ್ತಲೆ ಹಾಗೂ...
Loading posts...
All posts loaded
No more posts
