ರಾಜ್ಯಾದ್ಯಂತ ಡೆಂಗ್ಯೂ ಜ್ವರ ಆರ್ಭಟ – ಜನತೆ ಎಚ್ಚೆತ್ತುಕೊಳ್ಳದಿದ್ದರೇ ಕಾದಿದೆ ಅಪಾಯ

ರಾಷ್ಟ್ರಾದ್ಯಂತ ಡೆಂಗೆ ಜಾಗ್ರತಿ ದಿನ (ಮೇ 16) ಆಚರಿಸಿದ ಬೆನ್ನಲ್ಲೇ ಡೆಂಗ್ಯೂ ಜ್ವರ ರಾಜ್ಯಾದ್ಯಂತ ಉಲ್ಭಣಿಸಿದೆ. ಮಕ್ಕಳು ಸೇರಿದಂತೆ ಹಲವಾರು ಜನ ಕೂಡ ಸಾವಿನ ಕದ ತಟ್ಟಿದ್ದಾರೆ.‌ ಸಾವಿರಾರು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಸರಕಾರ ಹಾಗೂ ಜನತೆ ಎಚ್ಚೆತ್ತುಕೊಳ್ಳಬೇಕಿದೆ. ಜ್ವರ ಬಂದಾಗ ನಿರ್ಲಕ್ಚ್ಯ ಮಾಡದೇ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಡೆಂಗೆ...

ಖ್ಯಾತ ಜ್ಯೋತಿಷಿ  ಭೀಮರಾವ್ ವಾಷ್ಠರ್ ಅವರು ಕರ್ನಾಟಕ ರಾಜ್ಯ ಅಲೆಮಾರಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಬೆಂಗಳೂರು (ರಿ ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯದ ಖ್ಯಾತ ಜ್ಯೋತಿಷಿ,  ಸಾಹಿತಿ, ಚಿತ್ರ ನಿರ್ದೇಶಕ, ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ (ಗೊಂಧಳಿ) ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ...
Ad Widget

ಸುರಕ್ಷಾ ದಂತ ಚಿಕಿತ್ಸಾಲಯದ ವತಿಯಿಂದ ಸಸಿ ವಿತರಣೆ

ಸುರಕ್ಷಾ ದಂತ ಚಿಕಿತ್ಸಾ ಲಯದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ೨೭ನೆಯ ಸಂಸ್ಥಾಪನಾ ದಿನಾಚರಣೆ   ಅಂಗವಾಗಿ ಜು.3ರಂದು   ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಸುಮಾರು ೫೦ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.  ಶ್ರೀ ವಿದ್ಯಾಧರ್ ಅವರಿಗೆ ನೆಲ್ಲಿಕಾಯಿ ಮತ್ತು ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ...

ಮಡಪ್ಪಾಡಿ ಆತ್ಮಹತ್ಯೆಗೈದ ಕೃಷಿಕನ ಮನೆಗೆ ದಿನೇಶ್ ಗುಂಡೂರಾವ್ ಭೇಟಿಗೆ ಸಮಯ ನಿಗದಿ

ಮಡಪ್ಪಾಡಿ: ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಅರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಖಾಸಗಿ ಕಾರ್ಯಕ್ರಮದ ಬಳಿಕ ಮಡಪ್ಪಾಡಿಯಲ್ಲಿ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಗೈದ ರೈತನ ಮನೆಗೆ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್...

ಸುಬ್ರಹ್ಮಣ್ಯ : ನಿಟ್ಟೆ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

ಪ್ರಪಂಚದ ಸಮತೋಲನವನ್ನು ಕಾಪಾಡಲು ಪ್ರಕೃತಿಯೇ ಅತಿ ಮುಖ್ಯ : ಶ್ರೀ ಶ್ರೀ ವಿದ್ಯಾ ಪ್ರಸನ್ನ ಸ್ವಾಮೀಜಿ ನಿಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಅಧೀನದಲ್ಲಿರುವ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಆವರಣದ ಪರಿಸರದಲ್ಲಿ ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇವುಗಳ...

ಸುಬ್ರಹ್ಮಣ್ಯ ಸ್ಥಾನ ಘಟ್ಟದಲ್ಲಿ ಭಕ್ತಾದಿಗಳಿಗೆ ತೀರ್ಥ ಸ್ಥಾನಕ್ಕೆ ಪರ್ಯಾಯ ವ್ಯವಸ್ಥೆ

ಮಳೆಗಾಲದ ಸಮಯದಲ್ಲಿ ಕುಮಾರಧಾರ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸ್ಥಾನಘಟ್ಟದಲ್ಲಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ಸುಮಾರು ಒಂದು ವಾರದಿಂದೀಚೆ ಭಕ್ತಾದಿಗಳಿಗೆ ತೀರ್ಥ ಸ್ಥಾನಕ್ಕೆ ಅವಕಾಶವಿರಲಿಲ್ಲ. ಇದೀಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ತೀರ್ಥ ಸ್ಥಾನ ಮಾಡಲು ಕುಮಾರಧಾರ ಸ್ಥಾನಗಟ್ಟದಲ್ಲಿ ದೇವಳದ ವತಿಯಿಂದ  ನೀರಿನ ಡ್ರಮ್ ಗಳನ್ನು ಇಟ್ಟು ಅವಕಾಶ...

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ದಿನಾಂಕ 06-07-2024 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 06-07-2024...

ವಿದ್ಯಾರ್ಥಿ ಸಂಘಗಳು ನಾಯಕತ್ವದ ಜ್ಞಾನ ಬೋಧಿಸುವ ಪುಸ್ತಕಗಳು –
ಎಸ್‌ಎಸ್‌ಪಿಯುನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಅಂಪೈರ್ ರಾಜಾ ಸುಬ್ರಹ್ಮಣ್ಯ ಅಭಿಮತ

ಸುಬ್ರಹ್ಮಣ್ಯ: ಗ್ರಾಮೀಣ ಪ್ರದೇಶದಲ್ಲಿ ನಾಯಕತ್ವಗಳು ಹುಟ್ಟಿಕೊಳ್ಳುತ್ತದೆ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಘಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ.ನಾಯಕನ ಗುಣ-ಲಕ್ಷಣ, ಶಿಸ್ತು, ಸ್ಪೂರ್ತಿ ಇತ್ಯಾದಿಗಳು ವಿದ್ಯಾರ್ಥಿ ಸರಕಾರದಿಂದ ದೊರಕುವತ್ತವೆ. ಜ್ಞಾನಗಳಾಗಿವೆ. ಪ್ರಜಾಪ್ರಭುತ್ತೀಯ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿ ಸರಕಾರಗಳು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಜ್ಞಾನ ಬೋಧಿಸುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಸಮಾಜಮುಖಿ ಸೇವೆ ನಡೆಸಲು...

ಹಳೆಗೇಟು ಬಳಿ ಪುಸ್ತಕ ಸಾಗಾಟದ ಲಾರಿ ಪಲ್ಟಿ .

ಸುಳ್ಯ : ಸುಳ್ಯದ ಹಳೆಗೇಟು ಬಳಿಯಲ್ಲಿ ಪುಸ್ತಕ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ವರದಿಯಾಗಿದ್ದು ಲಾರಿಯಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು . ಓರ್ವನಿಗೆ ಕೈಗೆ ಗಾಯಗಳಾಗಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
Loading posts...

All posts loaded

No more posts

error: Content is protected !!