ಉಬರಡ್ಕ : ವಿದ್ಯುತ್ ಲೈನ್ ಗೆ ತಾಗುತ್ತಿರುವ ಮರದ ರೆಂಬೆ ತೆರವು

ವಿದ್ಯುತ್ ಲೈನ್ ಗಳಿಗೆ ತಾಗುತ್ತಿರುವ ಮರದ ರೆಂಬೆ , ಹಬ್ಬಿರುವ ಬಳ್ಳಿಗಳನ್ನು ತೆರವು ಕಾರ್ಯ ನಡೆಯಿತು.   ಆದಿತ್ಯವಾರಗಳಂದು ನಡೆದ ಶ್ರಮದಾನದಲ್ಲಿ ಉಬರಡ್ಕ ಗ್ರಾಮದ ಹುಳಿಯಡ್ಕ, ಕುತ್ತಮೊಟ್ಟೆ, ಯಾವಟೆ ಹಾಗೂ ಹೂಪಾರೆ ಭಾಗದ ಬಳಕೆದಾರರು ಮೆಸ್ಕಾಂ ಸಿಬ್ಬಂದಿಗಳ ಜತೆ ಸಹಕಾರ ನೀಡಿದರು.

ಎಣ್ಮೂರು ಪ್ರೌಢ ಶಾಲಾ ನೂತನ ಎಸ್ಡಿಎಂಸಿ ರಚನೆ; ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಎ ಆಯ್ಕೆ

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.29ರಂದು ನೂತನ ಎಸ್ಡಿಎಂಸಿ ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಅಲೆಂಗಾರ ಆಯ್ಕೆಯಾದರು. ಎಸ್ಡಿಎಂಸಿ ಸದಸ್ಯರಾಗಿ ಶ್ರೀ ಶರ್ಮಾ ಕುಮಾರ್, ಶ್ರೀ ಮೇದಪ್ಪ ಗೌಡ ಎಂ, ಶ್ರೀ ಸುವರ್ಣ ಜಾಕೆ, ಶ್ರೀ ಪುರುಷೋತ್ತಮ ಆಚಾರ್ಯ, ಶ್ರೀಮತಿ ನಯನಾ ರೈ, ಶ್ರೀಮತಿ ನಳಿನಾಕ್ಷಿ, ಶ್ರೀಮತಿ ನೆಬಿಸಾ, ಶ್ರೀಮತಿ ನಳಿನಿ ಆಯ್ಕೆಯಾದರು. ಮುಖ್ಯ...
Ad Widget

ಸಂಸದರಾದ ಬಳಿಕ ಸುಳ್ಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ – ಬಿಜೆಪಿಯ ಪ್ರಮುಖರಿಂದ ಸ್ವಾಗತ

https://youtu.be/lwYVo8S4pMs?si=fK7ylWkvHO7o5x-- ದ.ಕ.ಸಂಸದರಾಗಿ ಆಯ್ಕೆಯಾದ ಕ್ಯಾ.ಬ್ರಜೇಶ್ ಚೌಟರವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಪಕ್ಷದ ಕಛೇರಿಗೆ ಆಗಮಿಸಿದ ಅವರನ್ನು ಮಂಡಲ ಸಮಿತಿ ಹಾಗೂ ಪ್ರಮುಖ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್. ಅಂಗಾರ, ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ,...

ಸಾಹೇಬ್ರು ಬಂದವೇ’ ನಾಟಕದಲ್ಲಿ ಅಭಿನಯಿಸಿದ್ದ ಸುಸ್ಮಿತಾ ನೀನಾಸಂ ಗೆ ಆಯ್ಕೆ

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2020 ರಲ್ಲಿ ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಪ್ರಸ್ತಕ( 2024-25) ಸಾಲಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ.ಪ್ರತಿಯೊಬ್ಬ...

ಸಾವಿತ್ರಿ ಪೈಕ ನಿಧನ

ಗುತ್ತಿಗಾರು ಗ್ರಾಮದ ಪೈಕ ಮನೆ ದಿ.ಪೈಕ ಸುಬ್ಬಯ್ಯ ಗೌಡರ ಧರ್ಮಪತ್ನಿ ಸಾವಿತ್ರಿ ಇವರು ಜೂ. 30 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ದಯಾನಂದ, ಹರಿಶ್ಚಂದ್ರ, ಪುತ್ರಿ ಭಾರತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗಾಂಧಿನಗರ ಕೆಪಿಎಸ್ ನ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ವತಿಯಿಂದ ಬ್ಯಾಗ್ ಕೊಡುಗೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ರೈಟ್ ಟು ಲಿವ್ ಕೋಟೆ ಫೌಂಡೇಶನ್ ನ ವೀರೇಶ್ ಸೊಂಡೆ,...

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ ಶ್ರೀ ಪ್ರಶಾಂತ್ ವಾಲ್ತಾಜೆ ಮತ್ತು ಶ್ರೀಮತಿ ಚೈತ್ರ ರವರ ಪುತ್ರಿ. ಅಮರ...

ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ರಾಹುಲ್ ಗಾಂಧಿ ಹೆಸರಿನಲ್ಲಿ ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ ಇಲ್ಲಿ ರಾಹುಲ್ ಗಾಂಧಿಯವರ ಹೆಸರಿನಲ್ಲಿ ಶಿವಪೂಜೆ ಹಾಗೂ...

ಜುಲೈ 01 ರಂದು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಪದಗ್ರಹಣ ಕಾರ್ಯಕ್ರಮ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಚಾರ್ಟರ್ ನೈಟ್ ಸಮಾರಂಭವು ಜುಲೈ 01 ಸೋಮವಾರದಂದು ಏನೇಕಲ್ಲು ಸಂತೃಪ್ತಿ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿರುವುದು.ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ದ್ವಿತೀಯ ಉಪರಾಜ್ಯಪಾಲರಾದ ಹೆಚ್. ಎಂ. ತಾರಾನಾಥ್ ನೆರವೇರಿಸಿಕೊಡಲಿರುವರು. ಚಾರ್ಟರ್ ನೈಟ್ ಕಾರ್ಯಕ್ರಮವನ್ನು...

ಸುಳ್ಯ ಸಿ ಎ ಬ್ಯಾಂಕ್ ಆಂತರಿಕ ಲೆಕ್ಕಪರಿಶೋಧಕ ಶಿವಪ್ರಸಾದ್ ಎಸ್ ನಿವೃತ್ತಿ

ಜೂ. 29ರಂದು ಸುಳ್ಯ ಸಿ ಎ ಬ್ಯಾಂಕ್ ಆಂತರಿಕ ಲೆಕ್ಕಪರಿಶೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಶಿವಪ್ರಸಾದ್ ಎಸ್ ಇವರ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ ಎ ಬ್ಯಾಂಕ್ ನ ಶ್ರೀ ಎ ಎಸ್ ವಿಜಯಕುಮಾರ್ ಸಭಾಭವನದಲ್ಲಿ ಇಂದು ನಡೆಯಿತು. ಶಿವಪ್ರಸಾದ್ ಎಸ್ ಇವರು 1991 ರಲ್ಲಿ ಸಿ ಎ ಬ್ಯಾಂಕ್ ನಲ್ಲಿ ಗುಮಾಸ್ತನಾಗಿ ಸೇರ್ಪಡೆಗೊಂಡು...
Loading posts...

All posts loaded

No more posts

error: Content is protected !!