- Sunday
- September 20th, 2026
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2027ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಸಿದ್ಧ ಕಲಾವಿದರಾದ ಉಬರಡ್ಕ ಉಮೇಶ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.ಮೂಲತಃ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ...
ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ "ಆರೋಗ್ಯಕರ ಪಾದಕ್ಕಾಗಿ ಕಾಲು ನಡಿಗೆ" ಎಂಬ ವಿಶೇಷ ಜಾಥಾ ಕಾರ್ಯಕ್ರಮವನ್ನು ಆ. 7ರಂದು ಬೆಳಿಗ್ಗೆ 8 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ....
ಕನಕಮಜಲು : ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಕಳೆ ಗಿಡಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್,...
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿಯ ದಾರುಲ್ ಹುದಾ ವಿದ್ಯಾಸಂಸ್ಥೆಯ ಕ್ಯಾಂಪಸಿನಲ್ಲಿ ಸಾದಾತ್ ಆಂಡ್ ನೇರ್ಚೆಯು ಜು 29,30,31 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜು 29 ರಂದು ಅಸ್ವರ್ ನಮಾಝಿನ ಬಳಿಕ ಸಯ್ಯಿದ್ ಮುಸ್ತಫಾ ಪೂಕೋಯ ತಂಙಲ್ ಮಂಬಾಡ್ ನೇತೃತ್ವದಲ್ಲಿ ಬೆಳ್ಳಾರೆ ಮಖಾಂ ಝಿಯಾರತ್ ನಡೆಯಲಿದೆ.ಸಂಜೆ 5 ಘಂಟೆಗೆ ಉಮರಾ ಮುಖಂಡ ಲತ್ವೀಫ್ ಹಾಜಿ ಹರ್ಲಡ್ಕ ಧ್ವಜಾರೋಹಣವನ್ನು...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ನೂತನ ಅಧ್ಯಕ್ಷ ಆರೀಫ್ ಬಿ.ಎಂ. ನೇತೃತ್ವದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. 25ರಂದು ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸಿನ ದೇವಿ ಹೈಟ್ಸಿನ ಅನುಗ್ರಹ ಸಭಾಂಗಣದಲ್ಲಿ ಜರುಗಿತು. ಪಾಸ್ಟ್ ಡಿಸ್ಟ್ರಿಖ್ಟ್ ಗವರ್ನರ್ ರೋ. ಎ. ಆರ್. ರವೀಂದ್ರ ಭಟ್ ಪದಗ್ರಹಣ ನಡೆಸಿಕೊಟ್ಟರು. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧೀಕ್ಷಕರಾಗಿ ಸೇವೆ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:28-07-2026 ಮಂಗಳವಾರ 🪐**01,🐏ಮೇಷ ರಾಶಿ🐏*📃,ಪ್ರಯಾಣದಿಂದ ಲಾಭವಾಗಲಿದೆ. ಆದರೆ, ಹಿಂದಿನ ವಿಷಯಗಳಿಂದ ಮನಸ್ಸು ತೊಂದರೆಗೊಳಗಾಗಬಹುದು. ಬೆಲೆಬಾಳುವ ವಸ್ತುಗಳು ಮತ್ತು ವಾಹನಗಳನ್ನು ಖರೀದಿಸುತ್ತೀರಿ,ಗಮನಿಸಿ:-ನಿರುದ್ಯೋಗಿಗಳಿಗೆ ಶುಭಸುದ್ದಿದೊರೆಯುತ್ತದೆ,ಪರಿಹಾರ:-ವಿಷ್ಣು ಸಹಸ್ರ ನಾಮ ಜಪಿಸಿ,*02,🐂ವೃಷಭ ರಾಶಿ🐂*📃,ಇಂದು ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳನ್ನು ಪಡೆಯುತ್ತೀರಿ.ಇದರ ಲಾಭವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಹೊಸ ಸಾಲದ ಪ್ರಯತ್ನಗಳು...
ಸುಳ್ಯ: ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಹಾಗೂ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಮಹಿಳಾ ಘಟಕದ ಎರಡನೇ ವರ್ಷದ ಸಂಭ್ರಮದ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲತಾಶ್ರೀ ಸುಪ್ರೀತ್ ಮೊಂಟಡ್ಕ, "ಕಷ್ಟದಲ್ಲಿರುವ ವ್ಯಕ್ತಿಯ ನೋವನ್ನು ಸಂಪೂರ್ಣವಾಗಿ ಪರಿಹರಿಸಲು ಸಾಧ್ಯವಾಗದಿದ್ದರೂ,...
“ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು. ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ನಮ್ಮ ದೇಶಕ್ಕೆ ಜಯವಾಯಿತು” ಎಂದು ಸುಳ್ಯ ಶ್ರೀ ಶಾರದಾ ಪಿಯು ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹೇಳಿದರು. ಅವರು ಸುಳ್ಯ ನೆಹರು ಮೆಮೋರಿಯಲ್...
Loading posts...
All posts loaded
No more posts
