ಬೆಳ್ಳಾರೆ: ಸುಳ್ಯದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು! 

ಸುಳ್ಯದ ವಿದ್ಯಾರ್ಥಿಯೊಬ್ಬ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ವರದಿಯಾಗಿದೆ. ಮೃತರನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ  ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಎಡಮಂಗಲ ಸರಕಾರಿ ಪ್ರೌಢಶಾಲೆಗೆ ಶೇ.100

ಎಸ್. ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡಬ ತಾಲೂಕಿನ ಎಡಮಂಗಲ ಸರಕಾರಿ ಪ್ರೌಢಶಾಲೆಯಿಂದ ಪರೀಕ್ಷೆಗೆ ಹಾಜರಾದ 9 ಹುಡುಗಿಯರು ಮತ್ತು 2 ಹುಡುಗರಲ್ಲಿ ಎಲ್ಲಾ 11 ಮಂದಿಯೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಾಗಿದೆ. ಎಡಮಂಗಲದ ಕೇಶವನ್ ಮತ್ತು ಸಿಂಧು ದಂಪತಿಯ ಪುತ್ರಿ ಅಮೃತ ಕೇಶವನ್ 558 ಅಂಕಗಳೊಂದಿಗೆ ಶಾಲೆಗೆ ಪ್ರಥಮ  ಮತ್ತು ಎಡಮಂಗಲದ ಶೇಖರ ಮತ್ತು ಕುಸುಮಾ...
Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಜೆಕ್ಟ್ “ಎಕ್ಸ್ಪೋ–2024”

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಎಕ್ಸ್ಪೋ–2024” ಮೇ 09-ರಂದು ನಡೆಯಿತು. “ಎಕ್ಸ್ಪೋ–2024” ಪ್ರಾಜೆಕ್ಟ್ ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಐ.ಟಿ.ಐ. ಭಾಗಮಂಡಲ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀಕಾಂತ್ ಕೆ.ಬಿ. ನೆರವೇರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಿಕೊಂಡರೆ ಹೊಸ ಅವಕಾಶಗಳು...

ಹಳೆಗೇಟು : ತೆಂಗಿನ ಮರ ಬಿದ್ದು ವಿದ್ಯುತ್ ಕಂಬ ಹಾನಿ

ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಹಳೆಗೇಟು ಅಡ್ಕ ಬಳಿ ವಿದ್ಯುತ್ ತಂತಿಯ ಮೇಲೆ ತೆಂಗಿನ ಮರ ಮುರಿದು ವಿದ್ಯುತ್ ಕಂಬ ಮುರಿದಿದೆ.ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 (EPL2024) ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ,ಮೇ. 10 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ ನಡೆಯಿತು. ವಿನುಪ್ ಮಲ್ಲಾರ, ನಿರ್ದೇಶಕರು TAPCMS ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು...

ವಿಶ್ವ ದಾದಿಯರ ದಿನ ಮೇ – 12

ಪ್ರತಿ ವರ್ಷ “ಮೇ 12ರಂದು ವಿಶ್ವ ದಾದಿಯರ ದಿನ” ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನ ಖ್ಯಾತ ದಾದಿಪ್ಲಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನವೂ ಹೌದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು ಸ್ಮರಿಸುವ ಸಲುವಾಗಿ “ವಿಶ್ವ ದಾದಿಯರ ದಿನ” ಎಂದು ಜಗತ್ತಿನಾದ್ಯಂತ ಮೇ 12ರಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. 2018ರ ಆಚರಣೆಯ ಧ್ಯೇಯ ವಾಕ್ಯವೆಂದರೆ “ಆರೋಗ್ಯ...

ದೊಡ್ಡತೋಟ-ಮರ್ಕಂಜ  : ಗಾಳಿ ಮಳೆಗೆ ಮರ ಬಿದ್ದು ವಿದ್ಯುತ್ ಕಂಬ ಮುರಿತ – ರಸ್ತೆ ಬ್ಲಾಕ್

ಸಂಜೆ ಸುರಿದ ಗಾಳಿಗೆ ಮಳೆಗೆ ದೊಡ್ಡತೋಟ ಮರ್ಕಂಜ ರಸ್ತೆಯ ಬೆಟ್ಟ ಎಂಬಲ್ಲಿ ರಸ್ತೆಗೆ ಮರ ಬಿದ್ದು, ವಿದ್ಯುತ್ ಕಂಬ ಮುರಿದ ಘಟನೆ ವರದಿಯಾಗಿದೆ.

ನಡುಗಲ್ಲು: ಮರಕತ ಬಳಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗೆ!

ಇಂದು ಸಂಜೆ ಸುರಿದ ಗಾಳಿ ಮಳೆಗೆ ನಡುಗಲ್ಲು ಆಸುಪಾಸು ಮರಕತ ಮತ್ತಿತರ ಕಡೆ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.

ಸುಳ್ಯ : ಗುಡುಗು ಸಹಿತ ಭಾರಿ ಮಳೆ-  ವಿದ್ಯುತ್ ವ್ಯತ್ಯಯ

ಸುಳ್ಯ ತಾಲೂಕಿನಾದ್ಯಂತ ಇಂದು ಸಂಜೆ ಸುರಿದ ಮಳೆಗೆ ಇಳೆ ತಂಪಾಗಿದೆ. ಗುಡುಗು ಹಾಗೂ ಗಾಳಿ ಮಳೆಗೆ ವಿವಿಧೆಡೆ ಕೃಷಿ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದೆ. 33 ಕೆವಿ ಮಾಡಾವು - ಕಾವು - ಸುಳ್ಯ ವಿದ್ಯುತ್ ಲೈನ್ ಫಾಲ್ಟ್ ಆಗಿದ್ದು ಸುಳ್ಯದಾದ್ಯಂತ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಡಬ: ಸಿಡಿಲು ಬಡಿದು ಓರ್ವ ಸಾವು; ಇಬ್ಬರು ಗಂಭೀರ !

ಕೆಲಸ ಮುಗಿಸಿ ಶೆಡ್ ನಲ್ಲಿ ಕುಳಿತಿದ್ದ ಕಾರ್ಮಿಕರಿಗೆ ಸಿಡಿಲು ಬಡಿದು ಓರ್ವ ಕಾರ್ಮಿಕ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ  ಇಂದು ನಡೆದಿದೆ.ಕಾರ್ಮಿಕರು ಮರಳು ತೆಗೆಯುವ ಕೆಲಸ ಮಾಡುತ್ತಿದ್ದು, ನದಿ ಬದಿಯ ಶೆಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಶೆಡ್‌ಗೆ ಸಿಡಿಲು ಬಡಿದಿದೆ  ಎಂದು ಹೇಳಲಾಗಿದೆ.ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಚೈನ್‌ಪುರ್ ಮೂಲದ...
Loading posts...

All posts loaded

No more posts

error: Content is protected !!