ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಕಿಶೋರ್ ಕುಮಾರ್ ಬಿ.ಆರ್.ಅವರಿಗೆ ಡಾಕ್ಟರೇಟ್ ಪದವಿ

ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ಕಿಶೋರ್ ಕುಮಾರ್ ಬಿ.ಆರ್., ಸಿವಿಲ್ ಇಂಜಿನಿಯರಿAಗ್‌ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು“ “Lateritic Soil-Fly Ash-Lime-Cement Interaction Studies for Optimization of Their Proportions”ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2022-23 ನೇ ಸಾಲಿನಲ್ಲಿ ನಡೆದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆಗೈದಿದ್ದಾರೆ. ಎಂ.ಟೆಕ್: ಡಿಜಿಟಲ್ ಎಲೆಕ್ಟಾçನಿಕ್ಸ್ &ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಹನ ಎಸ್.ಎಂ. ೨ನೇ ರ‍್ಯಾಂಕ್, ಎಂ.ಟೆಕ್ ಕನ್‌ಸ್ಟçಕ್ಷನ್ ಟೆಕ್ನಾಲಜಿ - ಸಿವಿಲ್ ಇಂಜಿನಿಯರಿAಗ್ ವಿಭಾಗದವಿದ್ಯಾರ್ಥಿನಿ ನಿಸರ್ಗ ವೈ.ಕೆ. ೨ನೇ...
Ad Widget

ಅರಂತೋಡು ; ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ, ಸವಾರ ಗಂಭೀರ!

ಯಮಹ ಏರೋಕ್ಸ್ ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ ನಡೆದ ಘಟನೆ ಅರಂತೋಡು ನಯರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಸ್ಕೂಟರ್ ಸವಾರ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಣಾಮ ಮಾರುತಿ 800 ಕಾರು ಹಾಗೂ ಯಮಹ ಏರೋಕ್ಸ್ ದ್ವಿಚಕ್ರ ವಾಹನ ಜಖಂ ಗೊಂಡಿದೆ.

ಡಾ.ಚಂದ್ರಶೇಖರ ದಾಮ್ಲೆಯವರಿಗೆ ರೋಟರಿ ಕ್ಲಬ್ ಸುಳ್ಯ ಸಿಟಿ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿ

ರೋಟರಿ ಕ್ಲಬ್ ಸುಳ್ಯ ಸಿಟಿ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿ – 2024ಕ್ಕೆ ಶಿಕ್ಷಣ ತಜ್ಞ, ಸಾಹಿತಿ, ಸಂಶೋಧಕ, ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವ ಡಾ.ಚಂದ್ರಶೇಖರ ದಾಮ್ಲೆಯವರನ್ನು ಆಯ್ಕೆ ಮಾಡಲಾಗಿದೆ. ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಗಿರೀಶ್ ನಾರ್ಕೋಡು ಮಾ.14ರಂದು ರೋಟರಿ ಕ್ಲಬ್ ಸುಳ್ಯ ಸಿಟಿಯ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181ರ ಗವರ್ನರ್...

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ   ಮಹಾಶಿವರಾತ್ರಿ ಉತ್ಸವ

ಮಾ.8ರಂದು ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಉತ್ಸವವವು  ಜರುಗಿತು.  ಬೆಳಿಗ್ಗೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ದೇವರಗುಂಡಿಯಿಂದ ತೀರ್ಥ ತಂದು ಏಕದಶ ರುದ್ರಾಭಿಷೇಕ, ತಂತ್ರಿವರ್ಯರಿಂದ ಪಂಚವಿಂಶತಿ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ರಾತ್ರಿ ದೇವರಿಗೆ ರಂಗಪೂಜೆ, ಉತ್ಸವ ಬಲಿ ಜರುಗಿತು.ಈ ಸಂದರ್ಭದಲ್ಲಿ ದೇವಳದ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ...

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಬುಡ್ಲೆಗುತ್ತು ಹಾಗೂ ಬೊಳ್ಳೂರು ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ರಾಧಾಕೃಷ್ಣ ಬೊಳ್ಳೂರು ರವರು ಆಯ್ಕೆ ಗೊಂಡಿರುತ್ತಾರೆ.

ಅರಂತೋಡು: ಅಂಗಡಿಮಜಲು – ರೆಂಜಾಳ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ

ಅರಂತೋಡಿನಿಂದ ಅಂಗಡಿಮಜಲು ಬಾಜಿನಡ್ಕ ಮೂಲಕ ಮರ್ಕಂಜ ಗ್ರಾಮದ  ರೆಂಜಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾ.8ರಂದು ಸಂಜೆ ಗುದ್ದಲಿಪೂಜೆ ನೆರವೇರಿಸಿದರು.ಅರಂತೋಡು ಗ್ರಾಮದ ಅಂಗಡಿಮಜಲು ಬಾಜಿನಡ್ಕ ಮೂಲಕ ಮರ್ಕಂಜ ಗ್ರಾಮದ ರೆಂಜಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ದ್ವಿಚಕ್ರ ಸೇರಿದಂತೆ ಇತರೆ ವಾಹನ ಸಂಚಾರಕ್ಕೆ  ತೊಂದರೆಯಾಗಿದ್ದು, ಈ ಭಾಗದ ನಾಗರಿಕರು ಸೇರಿ...

ಪೆರುವಾಜೆ : ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಇಂಟರ್ ಲಾಕ್ ಅಳವಡಿಕೆ ಕಾಮಗಾರಿಗೆ ಶಿಲಾನ್ಯಾಸ

ಬೆಳ್ಳಾರೆ : ದ.ಕ.ಸಂಸದ ಹಾಗೂ ಸುಳ್ಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನದಲ್ಲಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ರಸ್ತೆ ಅಗಲೀಕರಣ, ಇಂಟರ್‌ ಲಾಕ್ ಅಳವಡಿಕೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ಮಾ.8 ರಂದು ನಡೆಯಿತು.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕಿ ಭಾಗೀರಥಿ ಮುರುಳ್ಯ ಅವರು ಶಿಲಾನ್ಯಾಸ ನೆರವೇರಿಸಿದರು. ಪ್ರಾರಂಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ...

ಬೆಳ್ಳಾರೆ : ಅಟೋರಿಕ್ಷಾ ತಂಗುದಾಣ ಲೋಕಾರ್ಪಣೆ – ದ.ಕ ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ :  ಸಂಸದ ನಳಿನ್ – ಸಚಿನ್ ರೈ ಪೂವಾಜೆ ಸಹಿತ ಹಲವರಿಗೆ ಗೌರರ್ವಾಪಣೆ

ಬೆಳ್ಳಾರೆ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ದ.ಕ.ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಕಳೆದ ಹದಿನೈದು ವರ್ಷಗಳಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ನಿರ್ಮಿಸಿದ ಅಟೋರಿಕ್ಷಾ ತಂಗುದಾಣವನ್ನು ಮಾ.8 ರಂದು...

ಸುಶೀಲೆ ಬೊಮ್ಮಾರು

ಮರ್ಕಂಜ ಗ್ರಾಮದ ಬೊಮ್ಮಾರು ಶಂಕರ ಗಿರಿ ಎಸ್.ನಾರಾಯಣ ಭಟ್ ರವರ ಪತ್ನಿ ಸುಶೀಲೆ (80) ಸ್ವಗೃಹದಲ್ಲಿ ಮಾ.06 ರಂದು ನಿಧನರಾದರು. ಮೃತರು ಪತಿ, ಪುತ್ರರಾದ ಉದಯಶಂಕರ, ಕೇಶವಪ್ರಕಾಶ್ , ಪುತ್ರಿಯರಾದ ಜಯಲಕ್ಷ್ಮಿ, ಸುಮನ, ಶೋಭ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!