- Wednesday
- April 29th, 2026
ಗುತ್ತಿಗಾರು ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಗೆ ಪಿ.ಎಂ.ಶ್ರೀ ಅನುದಾನದಿಂದ 17 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕೊಠಡಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಹಾಗೂ ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಶೌಚಾಲಯ ಮತ್ತು ನೂತನ ಬೊರ್ ವೇಲ್ ಅನ್ನು ಉದ್ಘಾಟಿಸಿದರು. ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟ್...
ಕೊಯನಾಡು ಸಮೀಪ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಕೂಟಿ ಢಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಇದೀಗ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಕೊಯನಾಡು ದೇವಸ್ಥಾನದ ಸಮೀಪ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಯಿತಾದರೂ ಸ್ಕೂಟಿ ಸವಾರ ಕೊಯನಾಡು...
ಹಲವು ದಿನಗಳಿಂದ ಮೋಡ ಕವಿದ ವಾತಾರಣವಿದ್ದು ಸುಳ್ಯ ತಾಲೂಕಿನ ವಿವಿಧೆಡೆ ಇಂದು ಮಳೆ ಸುರಿದಿದೆ. ಸುಳ್ಯ ಗುತ್ತಿಗಾರು ಸಂಪಾಜೆ, ಜಾಲ್ಸೂರು ಸೇರಿದಂತೆ ವಿವಿಧೆಡೆ ಬಾರಿ ಮಳೆಯಾಗಿದೆ. ಸುಳ್ಯ ಜಾತ್ರೆಯ ಸಂತೆ ವ್ಯಾಪಾರಸ್ಶರು ಮಳೆಯಿಂದ ತೊಂದರೆಗೆ ಸಿಲುಕಿದರು. ಅಕಾಲಿಕ ಮಳೆ ಸಂಕಷ್ಟದಲ್ಲಿರುವ ಕೃಷಿಕರಿಗೆ ಮತ್ತೆ ಬರೆ ಎಳೆದಂತಾಗಿದೆ. ವಿದ್ಯುತ್ ಕಡಿತಗೊಂಡಿದ್ದು ಸುಳ್ಯದಲ್ಲಿ ಕತ್ತಲೆ ಆವರಿಸಿದೆ.
ಗ್ರಾಮ ಪಂಚಾಯತ್ ಅರಂತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕಾಗಿ ಅನ್ವಾರುಲ್ ಹುದಾ ಯಂಗ್ ಮ್ಯಾನ್ಸ್ ಎಸ್ಸೋಸಿಯೇಷನ್ ವತಿಯಿಂದ ರೂಪಾಯಿ 5,000 ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಮಾಜಿ ಉಪಾಧ್ಯಕ್ಷರಾದ ಹರಿಣಿ ದೇವರಾಜೆ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ, ಅನ್ವರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಷನ್...
ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಇಂದು(ಜ.13) ಧನು ಪೂಜೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯರವರು ಆಗಮಿಸಿ ಧನು ಪೂಜೆಯ ವಿಶೇಷ ಪ್ರಸಾದವನ್ನು ಸ್ವೀಕರಿಸಿದರು.ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ,...
ಸುಮಾರು 400 ವರ್ಷಗಳ ಇತಿಹಾಸವನ್ನು ಹೊಂದಿರುವ ಸರ್ವಧರ್ಮಿಯರಿಂದ ಗೌರವಿಸಲ್ಪಡುವ ಪೇರಡ್ಕ - ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮ ಸಮಾರೋಪ ಸಮಾರಂಭಮತ್ತು ದಲ್ಲಿ ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್ ಉಡುಪಿ, ಇತ್ತೀಚೆಗೆ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ರಿಗೆ ಸಂಪುಟ ದರ್ಜೆ ಸ್ಥಾನ ಮಾನ...
ಸುಳ್ಯ ಜಾತ್ರಾ ಪ್ರಯುಕ್ತ ಜ.10 ರಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ “ವಿಜಯ್ ಮ್ಯೂಸಿಕಲ್ ನೈಟ್-2026” ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿತು.ಕಾರ್ಯಕ್ರಮದ ಸಂಚಾಲಕರಾದ ರಾಷ್ಟ್ರಮಟ್ಟದ ಗಾನಗಂಧರ್ವ ಪ್ರಶಸ್ತಿ ಪುರಸ್ಕೃತರಾದ ವಿಜಯಕುಮಾರ್ ಸುಳ್ಯ ಇವರ ಸಾರಥ್ಯದಲ್ಲಿ ಮತ್ತು ವಿವಿಧ ಜಿಲ್ಲೆಯ ಪ್ರಖ್ಯಾತ ಗಾಯಕ, ಗಾಯಕಿಯರು ಹಾಡಿ ಮನ ರಂಜಿಸಿದರು. ವಿಶೇಷ ಆಕರ್ಷಣೆಯಾಗಿ ನೃತ್ಯ ವೈವಿಧ್ಯ ನಡೆಯಿತು. ನಿರೂಪಕ...
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್ ಸಂಸ್ಥೆಯು ತನ್ನ ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದ ಶಾಖೆಗಳಲ್ಲಿ ವಜ್ರಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ “ಗ್ಲೋ ಫೆಸ್ಟ್” ಅನ್ನು ಡಿ.15ರಂದು ಆಯೋಜಿಸಿದ್ದು, ಇನ್ನು ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಳ್ಳುವ ಈ ಫೇಸ್ಟ್ ನಲ್ಲಿ ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಯೊಂದಿಗೆ ವಜ್ರಾಭರಣಗಳನ್ನು ಖರೀದಿಸುವ ಸುವರ್ಣ ಅವಕಾಶ...
“ಬಲಿಷ್ಠ ರಾಷ್ಟ್ರ ನಿರ್ಮಾಣದ ಕನಸು ಕಂಡ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಚಿಂತನೆಗಳನ್ನು ಯುವ ಸಮುದಾಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿದ್ದು ಇತರರಿಗೂ ಜಾಗೃತಿ ಮೂಡಿಸುವ ಕಾರ್ಯ ಮಾಡಿದಾಗ ಯಾವುದೇ ರೋಗದ ನಿಯಂತ್ರಣ ಸಾಧ್ಯ” ಎಂದು ಸುಳ್ಯ ಅರೋಗ್ಯ ಇಲಾಖೆಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ...
ಯುವರಕ್ತ ನಿಧಿ ಬೆಳ್ಳಾರೆ ಇದರ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವು ಬೆಳ್ಳಾರೆ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ಜ.11ರಂದು ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಐ.ಪಿ.ಎಸ್ ಅಧಿಕಾರಿ ಹಾಗೂ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕ ಇದರ ಉಪಾಧ್ಯಕ್ಷರಾದ ಭಾಸ್ಕರ್ ರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು “ಇಂತಹ ಒಂದು ಗ್ರಾಮೀಣ ಭಾಗದಲ್ಲಿ ಮೊದಲ ಬಾರಿ ರಕ್ತ...
Loading posts...
All posts loaded
No more posts
