- Monday
- August 31st, 2026
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾದಲ್ಲಿ ಧನು ಪೂಜೆಯ ಕೊನೆಯ ದಿನವಾದ ಇಂದು ಮುಂಜಾನೆ ಗಂಟೆ 4 ರಿಂದ 5-30 ರ ವರೆಗೆ ಪಂಬೆತ್ತಾಡಿ ಪಂಚಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಸುಬ್ರಹ್ಮಣ್ಯ ಜ14: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ದಿಂದ ದೇವಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ. ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭದಲ್ಲಿ ಮಾರ್ಗದ ಇಕ್ಕಲೆಗಳಲ್ಲಿ...
ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ಇವುಗಳ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಗ್ರಾ.ಪಂ.ಅಧ್ಯಕ್ಷರಾದ ಹಿಮಕರ ಅಡ್ತಲೆಯವರಿಗೆ ನಾಗರಿಕಾ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಮನವಿ ನೀಡಿ ಒತ್ತಾಯಿಸಿದ್ದಾರೆ. ಆರಂತೋಡು – ಅಡ್ತಲೆ – ಎಲಿಮಲೆ ಲೋಕೋಪಯೋಗಿ ರಸ್ತೆ ಮತ್ತು ಅಡ್ತಲೆ – ಬೆದ್ರುಪಣೆ ಪಂಚಾಯತ್ ರಸ್ತೆ , ಅರಂತೋಡು...
ರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೆ.ಪಿ.ಎಸ್ ಬೆಳ್ಳಾರೆಯ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್, ಹೇಮಂತ್ ಕೆ.ವಿ. ಮತ್ತು ಕ್ರೀಡಾಧಿಕಾರಿಯಾದ ಪುಷ್ಪಾವತಿ ಅವರನ್ನು ಇಂದು ಬೆಳಿಗ್ಗೆ ಪಂಜದಲ್ಲಿ ಆತ್ಮೀಯಾವಾಗಿ ಸ್ವಾಗತಿಸಿ ಅಭಿನಂದಿಸಿದೆನು.
ಸೋಣಂಗೇರಿ ಪೇಟೆಯಲ್ಲಿ ಹಾಕಲಾದ ಅಯೋಧ್ಯೆ ರಾಮ ಮಂದಿರಕ್ಕೆ ಶುಭ ಕೋರುವ ಬ್ಯಾನರ್ ನಲ್ಲಿ ಹಾಕಲಾದ ಹೆಸರಿಗೆ ಮಸಿ ಬಳಿದಿರುವ ಘಟನೆ ನಡೆದಿದೆ. ಅಯೋಧ್ಯೆ ರಾಮ ಮಂದಿರಕ್ಕೆ ಶುಭಕೋರುವ ಬ್ಯಾನರ್ ಗೆ ಸುಳ್ಯ ಪೇಟೆ ಹಾಗೂ ಅಡ್ಕಾರ್ ನಲ್ಲಿ ಹಾನಿಯಾದ ಬಳಿಕ ಇದೀಗ ಸೋಣಂಗೇರಿಯಲ್ಲೂ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಬ್ಯಾನರ್ ನಲ್ಲಿ 15 ಹೆಸರುಗಳಿದ್ದು, ಒಂದು ಹೆಸರು...
ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು ಮತ್ತು ಅಲ್ಲಲ್ಲಿ ಬ್ಯಾನರ್ ಹರಿದ ಪ್ರಕರಣಗಳು ಕಂಡು ಬರುತ್ತಿದ್ದು ಪೋಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಬ್ಲಾಕ್ ಕಾಂಗ್ರೆಸ್ ನಾಯಕರು ತೀವ್ರ ಬೇಸರ ವ್ಯಕ್ತ ಪಡಿಸಿದರಲ್ಲದೆ ಕಾಂಗ್ರೆಸ್ ನಿಯೋಗವು ಇನ್ಸ್ಪೆಕ್ಟರ್ ಕಛೇರಿಗೆ ತೆರಳಿ ಸುಳ್ಯದ ಕೆಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ತನಿಖೆ ಪೂರ್ಣಗೊಳಿಸಿ ನೈಜ ಆರೋಪಿಗಳನ್ನು ಸಮಾಜಕ್ಕೆ ತಿಳಿಸಬೇಕು ಅಲ್ಲದೆ...
ಸುಳ್ಯ ಅಜ್ಜಾವರ ಮೇನಾಲದಲ್ಲಿ ಇದೀಗ ಕಾರು ಮತ್ತು ಸ್ಕೂಟರ್ ಮಧ್ಯೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ . ಸ್ಕೂಟರ್ ಅಪಘಾತದ ರಭಸಕ್ಕೆ ರಸ್ತೆಯ ಪಕ್ಕದಲ್ಲಿರುವ ರಾಜೇಶ್ ಪಣಿಕ್ಕಾರ್ ರವರ ಮನೆಯ ಅಂಗಳಕ್ಕೆ ಬಿದ್ದಿದೆ ಎಂದು ಹೇಳಲಾಗುತ್ತಿದ್ದು ಗಾಯಗೊಂಡವರನ್ನು ಶಶಿಧರ ಶಿರ್ವಾಜೆಯವರ ಪತ್ನಿ ಮತ್ತು ಮಗಳು ಎಂದು ತಿಳಿದುಬಂದಿದೆ ಇದೀಗ ಗಾಯಳುಗಳನ್ನು ಸ್ಥಳೀಯರು ಸರಕಾರಿ ಆಸ್ಪತ್ರೆಗೆ...
ಸುಳ್ಯ ಜಾತ್ರೆಗೆ ಆಗಮಿಸಿದ್ದ ಸುಳ್ಯದ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿರುವ ಬಗ್ಗೆ ತಿಳಿದು ಬಂದಿದೆ. ಸುಳ್ಯದ ಗುತ್ತಿಗಾರಿನ ಯುವಕ ತನ್ನ ಸಹಪಾಠಿಗಳೊಂದಿಗೆ ಜ.೧೨.ರಂದು ಸುಳ್ಯ ಜಾತ್ರೋತ್ಸವ ನಡೆಯವ ಜಾಗದಲ್ಲಿ ತಿಂಡಿ ತಿನ್ನುತ್ತಾ ಅನ್ಯ ಕೋಮಿನ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಕೆಲ ಯುವಕರ ತಂಡ ಹಲ್ಲೆ ನಡೆಸಿದ್ದು ವಿನಾಕಾರಣ ತನ್ನ ಮೇಲೆ...
ಗುತ್ತಿಗಾರಿನ ಬಾಕಿಲ ಬಳಿ ಓಮಿನಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಂದು ನಡೆದಿದೆ. ಹಾಲೆಮಜಲಿನ ಶಿವಪ್ರಸಾದ್ ಚಲಾಯಿಸುತ್ತಿದ್ದ ಬೈಕ್ ಗೆ ಕಾರು ಢಿಕ್ಕಿಯಾಗಿದ್ದು ಗಾಯಗೊಂಡ ಸವಾರನ್ನು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
Loading posts...
All posts loaded
No more posts
