ಐವರ್ನಾಡು : ಸ್ವಚ್ಛತಾ ಕಾರ್ಯಕ್ರಮ ಹಾಗೂ ಮ್ಯಾರಥಾನ್

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ದೇರಾಜೆ ಗೆಳೆಯರ ಬಳಗ (ರಿ)ಐವರ್ನಾಡಿನ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಬಾಂಜಿಕೋಡಿವರೆಗೆ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದ ನಂತರ ದೇರಾಜೆ ಗೆಳೆಯರ ಬಳಗದ ವತಿಯಿಂದ ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ...

ಮಂಡೆಕೋಲು ಬೈಲು ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ಮಂಡೆಕೋಲು ಗ್ರಾಮದ ಮಂಡೆಕೋಲು ಬೈಲು ರಸ್ತೆ ಗೆ ಶಾಸಕರ ವಿಶೇಷ ಅನುದಾನ ರೂ. 10 ಲಕ್ಷದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು
Ad Widget

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನ ವಿದ್ಯಾರ್ಥಿ ವಿನೀತ್ ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಥಮ ಬಿಬಿಎ ವಿದ್ಯಾರ್ಥಿ ವಿನೀತ್ ಕೆ ಇವರು ಎಸ್ಎಂಎಸ್ ಕಾಲೇಜ್ ಬ್ರಹ್ಮಾವರದಲ್ಲಿ ಜ.7ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜ್ ಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಇವರು ಪುತ್ತೂರಿನ ನೆಹರು ನಗರದ ನರೇಶ್ ಕೆ ಹಾಗೂ ಶ್ರೀಮತಿ ಸುಮಿತ್ರ ಇವರ ಪುತ್ರರಾಗಿರುತ್ತಾರೆ.

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನಾಳೆ ಬಿಡುಗಡೆ ಸಾಧ್ಯತೆ ಇದೆ. ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಇದೀಗ ಸುಪ್ರೀಂ ಕೋರ್ಟ್ ಇಂದು...

ಎಡಮಂಗಲ: ಅಸ್ತಿ ಪಂಜರ ಪತ್ತೆ

ಎಡಮಂಗಲ ಗ್ರಾಮದ ನಡುಮನೆ ಎಂಬಲ್ಲಿ ಅಸ್ತಿ ಪಂಜರ ಪತ್ತೆ ಯಾಗಿದೆ. ಸ್ಥಳೀಯ ಮನೆಯ ಕೆಲಸದ ಆಳುಗಳು ಸೊಪ್ಪು ತರಲು ಹೋದಾಗ ಮನುಷ್ಯನ ಅಸ್ತಿ ಪಂಜರ ಕಂಡು ವಿಷಯ ತಿಳಿಸಿದರೆನ್ನಲಾಗಿದೆ. ವಿಷಯ ತಿಳಿದ ಮನೆಯವರು ಬೆಳ್ಳಾರೆ ಪೋಲೀಸ್ ಇಲಾಖೆಗೆ ಮಾಹಿತಿ ತಿಳಿಸಿ, ಪೋಲೀಸರು ಆಗಮಿಸಿ ಅನಾಥ ಅಸ್ತಿ ಪಂಜರ ತನಿಖೆ ನಡೆಸುತ್ತಿದ್ದಾರೆ. ಮರದಲ್ಲಿ ಕತ್ತಿ ಕಂಡುಬಂದಿದ್ದು, ಸುಮಾರು...

ಅಡ್ಪಂಗಾಯದಲ್ಲಿ ಭವ್ಯವಾದ ಮೆರವಣಿಗೆ ಭಜನೆ ಮೂಲಕ ಮನೆಮನೆಗೆ ಅಕ್ಷತೆ ಆಮಂತ್ರಣ ತಲುಪಿಸಿದ ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲ

ರಾಷ್ಟ್ರದಾದ್ಯಂತ ಸಂಭ್ರಮದಲ್ಲಿ ಅಯೋಧ್ಯಪುರ ವಾಸಿ ಪ್ರಭು ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಟೆಯು ಜನವರಿ ೨೨ ರಂದು ನಡೆಯಲಿದ್ದು ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ಪ್ರತಿ ಮನೆಗೆ ಅಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನು ನಿರಂತರವಾಗಿ ೧ ತಿಂಗಳುಗಳ ಕಾಲ ಪೂಜಿಸಿ ಮನೆಮನೆಗೆ ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲ ಇದರ ನೇತೃತ್ವದಲ್ಲಿ ನೀಡಲಾಯಿತು. https://youtu.be/NvM7qbDRUJo?feature=shared ಈ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯೋಗಜಾಗೃತಿಗಾಗಿ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಕಾರ್ಯಕ್ರಮ

  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯಿಂದ ದಿನಾಂಕ 07-01-2024  ಭಾನುವಾರ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಮೊಹನ್ ರಾಮ್ ಎಸ್ ಸುಳ್ಳಿ, ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ  ಮತ್ತು ,ಗಣೇಶಪ್ರಸಾದ ಅನುಗ್ರಹ ಎಜುಕೇಶನ್ ಟ್ರಸ್ಟ್ ಸುಬ್ರºÀätå , ಯೋಗೀಶ್ ಆಚಾರ್ಯ, ಎಸ್.ಪಿ.ವೈ.ಎಸ್.ಎಸ್  ತಾಲೂಕು ಸಂಚಾಲಕರು ಪುತ್ತೂರು,  ಶ್ರೀಮತಿ ನಯನಾ ತಾಲೂಕು...

ಸುಬ್ರಹ್ಮಣ್ಯ : ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು. ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ...

ಪೆರುವಾಜೆ : ಬ್ರಹ್ಮರಥೋತ್ಸವ, ಜಾತ್ರೆ – ಭದ್ರತಾ ವ್ಯವಸ್ಥೆ ಕುರಿತಂತೆ ಸಭೆ : ಸ್ವಯಂಸೇವಕರ ಪಾತ್ರ ಹಿರಿದು ಶಾಸಕಿ ಭಾಗೀರಥಿ

ಪೆರುವಾಜೆ : ನೂರು ವರ್ಷಗಳ ಬಳಿಕ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಬ್ರಹ್ಮರಥೋತ್ಸವದ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದ್ದು ಭಕ್ತವೃಂದಕ್ಕೆ ಯಾವುದೇ ವ್ಯವಸ್ಥೆಗಳಲ್ಲಿ ಕುಂದು ಕೊರತೆ ಉಂಟಾಗದಂತೆ ಪ್ರತಿಯೊಬ್ಬರು ಸಮರ್ಪಣ ಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ...

ಸುಳ್ಯ ಬ್ಯಾನರ್ ಹರಿದ ಪ್ರಕರಣ ರಾಮ ಭಕ್ತರು ಹಾಗೂ ಹಿಂದು ಪರ ಸಂಘಟನೆಗಳಿಂದ ಪ್ರತಿಭಟನೆ – ಪೋಲೀಸರಿಂದ ಮನವೊಲಿಕೆ ಬಳಿಕ ಪ್ರತಿಭಟನೆ ಮುಕ್ತಾಯ

ಸುಳ್ಯ ಖಾಸಗಿ ಬಸ್ಸ್ ನಿಲ್ದಾಣದ ಬಳಿಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ಸಂಘಟನೆಗಳು 24 ಗಂಟೆಗಳ ಗಡುವು ನೀಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ತಡವಾದ ಹಿನ್ನಲೆಯಲ್ಲಿ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಪೋಲಿಸ್ ನಾಯಕರು ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ಸಾಂಕೇತಿಕ ಪ್ರತಿಭಟನೆಗೆ ಅವಕಾಶ...
Loading posts...

All posts loaded

No more posts

error: Content is protected !!