- Wednesday
- April 29th, 2026
ಬೆಳ್ಳಾರೆ ಗ್ರಾಮದ ಗೌರಿಹೊಳೆಯ ಹತ್ತಿರ ಹಿಂದೂ ರುದ್ರಭೂಮಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಜ.5 ರಂದು ಬೆಳಿಗ್ಗೆ 9:30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ್ ಇವರಿಂದ ಶಿವಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನದ ಮೂಲಕ ರುದ್ರಭೂಮಿ ಲೋಕಾರ್ಪಣೆಗೊಳ್ಳಲಿದ್ದು, ಈ ಪುಣ್ಯ ಕಾರ್ಯದಲ್ಲಿ ಊರಿನವರು, ಸಂಘ-ಸಂಸ್ಥೆಯವರು,...
ಜಾಲ್ಸೂರು ಗ್ರಾಮದ ಹುಲಿಮನೆಯವರಾದ ವೆಂಕಟ್ರಮಣ ಗೌಡರು ಬೇಂಗಮಲೆಯಲ್ಲಿ ನೆಲೆಸಿದ್ದರು. ಅಲ್ಪಕಾಲದ ಅಸೌಖ್ಯದಿಂದ ಜ.1 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 89 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ , ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಗುತ್ತಿಗಾರು ಗ್ರಾಮದ ಬಲ್ಬೇರಿ(ಪಾಲ್ತಾಡಿ) ವಾಚಣ್ಣ ಗೌಡರ ಧರ್ಮಪತ್ನಿ ಶ್ರೀಮತಿ ಮೋಹಿನಿ ಇವರು ಹೃದಯಾಘಾತದಿಂದ ಜ.1 ರಂದು ನಿಧನರಾದರು.ಇವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರಿಯರಾದ ಶ್ರೀಮತಿ ಭವ್ಯ ಗಣೇಶ ನಾವೂರು, ಶ್ರೀಮತಿ ಉಮಾ ಚೇತನ್ ಇಟ್ಟಿಗುಂಡಿ, ಶ್ರೀಮತಿ ಉಷಾ ದಯಾನಂದ ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜ.02 ರಂದು ರಾತ್ರಿ ನಡೆದಿದೆ.ಮೃತರನ್ನು ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಯುವರಾಜ್(27) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ...
ನಾಲ್ಕೂರು ಗ್ರಾಮದ ನಡುಗಲ್ಲು ಮರಕತ ಶ್ರೀ ದುರ್ಗಾ ಭಜನಾ ಮಂಡಳಿಯ “25ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ” ಹಾಗೂ 19ನೇ ವರ್ಷದ ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸನ್ಮಾನ ಸಮಾರಂಭವು ಜ.11ರಂದು ನಡುಗಲ್ಲು ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಕ್ಷೇತ್ರದ...
ಬಾಳಿಲ ಗ್ರಾಮದ ಅತ್ತಿಕರಮಜಲು ಪಾಜಪಳ್ಳ ಮಸೀದಿಯ ವಠಾರದಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಹಝ್ರತ್ ವಲಿಯುಲ್ಲಾಹಿ ಸಯ್ಯದ್ ಹುಸೈನ್ ಆಟಕ್ಕೋಯ ತಂಙಲ್ ಅಲ್ ಮುಶೈಖಿ(ರ.ಅ)ರವರ ಹೆಸರಿನಲ್ಲಿ ಎರಡು ವರುಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ಜ 2026 ನೇ 1,2,3 ರಂದು ಬಾಳಿಲ ಅತ್ತಿಕರಮಜಲಿನ ಮುಹಿಯುದ್ದೀನ್ ಜುಮುಅ: ಮಸೀದಿಯ ವಠಾರದಲ್ಲಿ ಮಗ್ರಿಬ್ ನಮಾಝಿನ ಬಳಿಕ ನಡೆಯಲಿದ್ದು, ಪ್ರಮುಖ ವಿದ್ವಾಂಸರು...
ಸುಬ್ರಹ್ಮಣ್ಯ ಜನವರಿ 1 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯಕ್ಕೆ ತೆರಳುವ ಮಾರ್ಗದ ಬದಿಯಲ್ಲಿರುವ ಖಾಸಗಿ ಒಡೆತನದ ಸುಮಾರು ಮೂವತ್ತಕ್ಕೂ ಅಧಿಕ ಅಂಗಡಿ ಕಟ್ಟಡಗಳ ವಿವಾದ ನಡೆಯುತ್ತಿದ್ದು, ಸುಬ್ರಹ್ಮಣ್ಯದ ನೂಚಿಲ ನಿವಾಸಿ ಸಂತೋಷ್ ಕುಮಾರ್ ಎಂಬುವರು ನೀಡಿದ ದೂರಿನ ಅನ್ವಯ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಹಾಗೂ ಕಾರ್ಯದರ್ಶಿ ಮೋನಪ್ಪ.ಡಿ...
ಸುಬ್ರಹ್ಮಣ್ಯ ಜನವರಿ 1 : “ಕಡಬ ತಾಲೂಕಿನ ಇಚ್ಲಂಪಾಡಿ ನದಿ ಸಮೀಪ ಒಂದು ಕಡೆ ಮಾತ್ರ ಮರಳು ತೆಗೆಯಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಅಲ್ಲಿ ಮರಳು ದಂದೆ ಅವ್ಯಾಹತವಾಗಿ ನಡೆಯುತ್ತಿದೆ. ಉಳಿದ ಕಡೆಗಳಲ್ಲಿ ಮರಳು ತೆಗೆಯಲು ಅವಕಾಶವಿದ್ದರೂ ಜಿಲ್ಲಾಡಳಿತ ಅನುಮತಿ ನೀಡದೆ ಗ್ರಾಮೀಣ ಭಾಗದ ಬಡವರು, ಆಶ್ರಯ ಯೋಜನೆಯಲ್ಲಿ ಮನೆ ಮಾಡುವವರು ಹಾಗೂ ಮಧ್ಯಮ ವರ್ಗದವರಿಗೆ...
ಜೇಸಿಐ ಸುಳ್ಯ ಪಯಸ್ವಿನಿ(ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ...
Loading posts...
All posts loaded
No more posts
