- Thursday
- September 3rd, 2026
ದೀಕ್ಷಿತ್ ರಾವ್ ನಿತಿನ್ ಸಾಲಿಯಾನ್ ಡಿ.ಜೆ ಫ್ರೆಂಡ್ಸ್ ಕ್ಲಬ್ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಅಂಗವಾಗಿ ನಡೆಯುವ 'ಸುಳ್ಯ ದಸರಾ' ಕಾರ್ಯಕ್ರಮದ ವೈಭವ ಮೆರವಣಿಗೆಯಲ್ಲಿ ಆಕರ್ಷಣೆಯಾಗಿ 5ನೇ ವರ್ಷದ ಹುಲಿವೇಷ ಸ್ಥಬ್ದ ಚಿತ್ರ ನಿರ್ಮಾಣದ ಡಿ.ಜೆ ಫ್ರೆಂಡ್ಸ್ ಕ್ಲಬ್ ನ ಸುಳ್ಯ ನೂತನ ಪದಾಧಿಕಾರಿಗಳ ಆಯ್ಕೆಯು ಸೆ.10ರಂದು ನಡೆಯಿತು. ಸ್ಥಾಪಕಾಧ್ಯಕ್ಷ ದೀಪಕ್...
ಮೊಬೈಲಿನಿಂದ ದೂರ ಇರಿ, ಸಾಮಾಜಿಕ ಜಾಲತಾಣಗಳ ಬಳಕೆಯ ಸಂದರ್ಭದಲ್ಲಿ ಎಚ್ಚರ ವಹಿಸಿ, ಅಪರಿಚಿತ ವ್ಯಕ್ತಿಗಳ ಸಹವಾಸ ಮಾಡಬೇಡಿ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಸವಿತಾ ಮಕ್ಕಳಿಗೆ ಎಚ್ಚರಿಕೆ ಸಂದೇಶ ನೀಡಿದರು. ಇವರು ಸೆಪ್ಟೆಂಬರ್ 12ರಂದು ಬೆಳ್ಳಾರೆ ಜೆಸಿಐ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆದ ಪೋಕ್ಸೋ ಮತ್ತು ಸೈಬರ್ ಕ್ರೈಂ ಮಾಹಿತಿ ಕಾರ್ಯಾಗಾರದಲ್ಲಿ...
ಸುಳ್ಯ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದಲ್ಲಿ 24ನೇ ಬಾರಿಗೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕವು ಚಾಂಪಿಯನ್ ಆಗಿ ಹೊರಹೊಮ್ಮಿರುವುದು ವಿಶೇಷವಾಗಿದೆ.
ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇವರ ಸಹಯೋಗದಲ್ಲಿ ಪರಿಸರ ಜಾಗೃತಿಗಾಗಿ ಗಿಡ ನೆಡುವ "ಸಸ್ಯ ಶ್ಯಾಮಲಾ ಕಾರ್ಯಕ್ರಮ" ಸೆಪ್ಟೆಂಬರ್ 11 ರಂದು ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ ಶಾಸಕಿ...
ಶಾಲೆ ಮುಗಿಸಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಜಾಲ್ಸೂರು ಬಳಿ ಕೆವಿಜಿ ಆಸ್ಪತ್ರೆಯ ಆಂಬ್ಯುಲೆನ್ಸ್ ಗುದ್ದಿ ಗಾಯಗೊಂಡಿರುವ ಘಟನೆ ಸೆ.12 ರಂದು ವರದಿಯಾಗಿದೆ. ಪುತ್ತೂರು ಕಡೆಯಿಂದ ಹಿಂತಿರುಗುತ್ತಿದ್ದ ಕೆವಿಜಿ ಅಂಬ್ಯುಲೆನ್ಸ್ ನಲ್ಲಿಯೇ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.
ಜಾಲ್ಸೂರು ಗ್ರಾಮದ ಕದಿಕಡ್ಕದಲ್ಲಿ ಹಿಂಬದಿ ಬಾಗಿಲಿನ ಲಾಕ್ ಮುರಿದು ಗೋಡ್ರೇಜ್ ಒಳಗಿದ್ದ ಚಿನ್ನ ಹಾಗೂ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ. ಕದಿಕಡ್ಕದ ವಸಂತ ರೈ ಎಂಬವರ ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳವಾಗಿದ್ದು, ವಸಂತ ಅವರ ಪತ್ನಿ ಹಾಗೂ ಮಕ್ಕಳು ಕೆಲಸದ ನಿಮಿತ್ತ ಬೆಳಿಗ್ಗೆ ಮನೆಗೆ ಬಾಗಿಲು ಹಾಕಿ ತೆರಳಿದ್ದರು. ಮಧ್ಯಾಹ್ನ ಸುಮಾರು...
ಆಲೆಟ್ಟಿ ಗ್ರಾಮದ ಗುಂಡ್ಯದ ಜನನಿ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಪ್ರಥಮ ವರುಷದ ಮೊಸರು ಕುಡಿಕೆ ಉತ್ಸವದ ಅದ್ದೂರಿಯ ಶೋಭಾಯಾತ್ರೆ ಹಾಗೂ ಧಾರ್ಮಿಕ ಸಭೆಯು ಸೆ.10 ರಂದು ಆಲೆಟ್ಟಿ ಯಲ್ಲಿ ನಡೆಯಿತು. ಅಪರಾಹ್ನ ನಾರ್ಕೋಡು ಶ್ರೀ ಸದಾಶಿವ ದ್ವಾರದ ಬಳಿಯಿಂದ ಉತ್ಸವದ ಶೋಭಾಯಾತ್ರೆಗೆ ಕುಡೆಕಲ್ಲು ಮೇದಪ್ಪ ಗೌಡ, ಕಾಂಪ್ಲೆಕ್ಸ್ ಮಾಲಕ ಉದಯ ಕುಡೆಕಲ್ಲು ರವರು ಚಾಲನೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಆಶ್ಲೇಷ ನಕ್ಷತ್ರದ ಶುಭದಿನದಂದು ಶ್ರೀ ದೇವಳಕ್ಕೆ ಆಗಮಿಸಿದ ಹೈದರಾಬಾದ್ ಎ.ಎಂ.ಆರ್. ಇಂಡಿಯಾ ಲಿಮಿಟೆಡ್ನ ಎ. ಮಹೇಶ್ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ದೇವಳದ ಸುತ್ತುಪೌಳಿ ನಿರ್ಮಾಣದ ಸಂದರ್ಭದಲ್ಲಿ ತಾನು ಕಾಲಭೈರವೇಶ್ವರ ಗುಡಿಯನ್ನು ನಿರ್ಮಿಸಿ ಕೊಡುವುದಾಗಿ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ಪ್ರಭಾವಳಿಯನ್ನು ನೀಡುವುದಾಗಿ ಇಂದು...
ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಕಾಲಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲಿನಿಂದ ವರದಿಯಾಗಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಮಧ್ಯೆ ಕನಕಮಜಲು ಗ್ರಾಮ ಪಂಚಾಯತ್ ಬಳಿ ಢಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಅಪಘಾತ ನಡೆಸಿ, ನಿಲ್ಲಿಸದೇ ಪರಾರಿಯಾಗಿದ್ದಾನೆ...
ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಸಿರಿಧಾನ್ಯಗಳ ಬಳಕೆ ಇಂದು ನಿನ್ನೆಯದಲ್ಲ....
Loading posts...
All posts loaded
No more posts
