ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮ

ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ದಿನಾಂಕ 10-09-2023ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅನೇಕ...

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ

ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್....
Ad Widget

ಬೆಳ್ಳಾರೆ ಕೆಪಿಎಸ್‌ಗೆ ನೂತನ ಪ್ರಾಂಶುಪಾಲರ ಆಗಮನ

ಸುಳ್ಯ:ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದ ಜನಾರ್ದನ ನೆಕ್ಕಿಲ ಅವರು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 20 ವರ್ಷ ಉಪನ್ಯಾಸಕರಾಗಿ, ಬಳಿಕ ಸುಳ್ಯ ಸ.ಪ.ಪೂ. ಕಾಲೇಜಿಗೆ ವರ್ಗಾವಣೆಗೊಂಡಿದ್ದರು. 2018ರಲ್ಲಿ ಪ್ರಾಂಶುಪಾಲರಾಗಿ ಭಡ್ತಿ ಹೊಂದಿದ ಬಳಿಕ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿಗೆ ನಿಯೋಜನೆಗೊಂಡಿದ್ದರು....

ಸುಳ್ಯ ಬಾಲಗೋಕುಲ ಪ್ರಶಿಕ್ಷಣ ವರ್ಗ.

ಸುಳ್ಯ ನಿವೇದಿತಾ ‌ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ)/ಸುಳ್ಯತಾಲೂಕು ಇದರ ವತಿಯಿಂದ‌ ಬಾಲಗೋಕುಲ ಪ್ರಶಿಕ್ಷಣ ವರ್ಗವು ಸುಳ್ಯದ ಅಮೃತ ಭವನ ಸಭಾಭವನದಲ್ಲಿ ನಡೆಯಿತು.ಬಾಲಗೋಕುಲ ಪ್ರಶಿಕ್ಷಣ ವರ್ಗವನ್ನು ಜಿಲ್ಲಾ ಪ್ರಮುಖರಾದ ವಸಂತ ಕಾಟಿಪಳ್ಳ ನಡೆಸಿಕೊಟ್ಟರು ವೇದಿಕೆಯಲ್ಲಿ ಟ್ರಸ್ಟ್ ನ ಅದ್ಯಕ್ಷರಾದ‌ ಇಂದಿರಾ ರಾಜಶೇಖರ್ ಉಪಸ್ಥಿತರಿದ್ದರು. ಮಾತಾಜಿಯರಾದ ರೋಹಿಣಿ ಎಲಿಮಲೆ ವಿದ್ಯಾಲಕ್ಷ್ಮಿ ಪುತ್ತೂರು, ವಿಮಲ ಸವಣೂರು ಬಾಲಗೋಕುಲ ನಡೆಸುವ...

ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – ಬಾಳಿಲ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಸೆ.08ರಂದು ನಡೆದ ಎಣ್ಮೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯು ಅತ್ಯುತ್ತಮ ಪ್ರದರ್ಶನ ನೀಡಿ ಕಿರಿಯ ವಿಭಾಗ ಹಾಗೂ ಹಿರಿಯ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತದೆ.

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕಬಡ್ಡಿ ಪಂದ್ಯಾಟ – ಬಾಲಕರ ವಿಭಾಗದಲ್ಲಿ ಗುತ್ತಿಗಾರು ಪ್ರಥಮ, ಬಾಲಕಿಯರ ವಿಭಾಗದಲ್ಲಿ ಮೊರಾರ್ಜಿ ಪಂಜ ಪ್ರಥಮ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ.9 ರಂದು ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸ.ಹಿ.ಪ್ರಾ.ಶಾಲೆ ಗುತ್ತಿಗಾರು, ದ್ವಿತೀಯ ಸ್ಥಾನ ಸೈಂಟ್ ಜೋಸೆಫ್ ಸುಳ್ಯ ಪಡೆದುಕೊಂಡಿತ್ತು. ಬಾಲಕಿಯ ವಿಭಾಗದಲ್ಲಿ ಪ್ರಥಮ ಸ್ಥಾನ...

ಅಮ್ಮ ಚಿಣ್ಣರ ಮನೆಯಲ್ಲಿ ಕೃಷ್ಣ- ರಾಧೆಯರ ಕಲರವ : ಭಾಗವಹಿಸಿದ 48 ಸ್ಪರ್ಧಿಗಳು

ಸುಳ್ಯದ ಅಮ್ಮ ಸೇವಾ ಟ್ರಸ್ಟ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದು ಕೃಷ್ಣ ಮುದ್ದು ರಾಧಾ ಸ್ಪರ್ಧೆ ಸೆ.10 ರಂದು ಅಮ್ಮ ಚಿಣ್ಣರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಸುಳ್ಯದ ದಂತ ವೈದ್ಯೆ ಡಾ. ವಿದ್ಯಾ ಶಾರದ ನೆರವೇರಿಸಿ ಶುಭಹಾರೈಸಿದರು. ಬಹುಮಾನ ವಿತರಣೆಯನ್ನು ಸವಣೂರು ವಿದ್ಯಾರಶ್ಮಿ ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ ಕೇವಳ ನೆರವೇರಿಸಿದರು....

ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ಕುರಿತ ಧ್ವನಿಸುರುಳಿ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಕುರಿತ ಭಕ್ತಿಗೀತೆಗಳ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೆ. 10ರಂದು ನಡೆಯಿತು. ಧ್ವನಿ ಸುರಳಿಯನ್ನು ಕ್ಷೇತ್ರದ ಅಧ್ಯಕ್ಷರಾದ ಶ್ರೀನಿವಾಸ ಮಡ್ತಿಲ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಧ್ವನಿಸುರುಳಿಗೆ ಸಾಹಿತ್ಯ ಒದಗಿಸಿದ ಪೆರುಮಾಳ್ ಲಕ್ಷ್ಮಣ ಐವರ್ನಾಡು, ಗಾಯಕಿ ಪುಷ್ಪಾವತಿ ಆರ್. ಡಿ,ದೇವಸ್ಥಾನದ ಅರ್ಚಕರಾದ ಪದ್ಮನಾಭ ಭಟ್,ನವೀನ ಚಾತುಬಾಯಿ,...

ಅವೈಜ್ಞಾನಿಕವಾಗಿ ಖಾಸಗಿ ವ್ಯಕ್ತಿಗಳಿಂದ ಚರಂಡಿ ಮುಚ್ಚಿ ರಸ್ತೆ ನಿರ್ಮಾಣ – ಮಳೆನೀರು ರಸ್ತೆಯಲ್ಲಿಯೇ ಹರಿದು ಸಾರ್ವಜನಿಕರಿಗೆ ತೊಂದರೆ…

ಕಾಂತಮಂಗಲ ವೃತ್ತದ ಬಳಿಯಲ್ಲಿ ರಸ್ತೆ ನಿರ್ಮಾಣದ ವೇಳೆ ಸುಸಜ್ಜಿತ ಚರಂಡಿ ವ್ಯವಸ್ಥೆ ಮಾಡಿದ್ದರು. ಇಲ್ಲಿ ಖಾಸಗಿಯವರು ಸಂಪರ್ಕ ರಸ್ತೆ ನಿರ್ಮಾಣದ ವೇಳೆ ಚರಂಡಿ ಮುಚ್ಚಿ ರಸ್ತೆ ನಿರ್ಮಾಣ ಮಾಡಿದ್ದರಿಂದ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಕಾಂತಮಂಗಲದ ನ್ಯಾಯಬೆಲೆ ಅಂಗಡಿ ಬಳಿ ಚರಂಡಿ ಮುಚ್ಚಿ ಅವೈಜ್ಞಾನಿಕವಾಗಿ ರಸ್ತೆ ಮಾಡಿರುವುದರಿಂದ...

ಬೆಳಂದೂರು: ಪ್ರಥಮ ದರ್ಜೆ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ – ಬೇಡಿಕೆಗಳಿಗೆ ಸ್ಪಂದನೆ

ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಸೆ.9 ರಂದು ಭೇಟಿ ನೀಡಿ ಕಾಲೇಜು ಕೊಠಡಿಗಳನ್ನು ವೀಕ್ಷಣೆ ಮಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ರವರು ಹಲವು ಬೇಡಿಕೆಗಳನ್ನು ಮುಂದಿಟ್ಟರು. ಬಳಿಕ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಕಾಲೇಜಿನ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತಹಂತವಾಗಿ...
Loading posts...

All posts loaded

No more posts

error: Content is protected !!