Ad Widget

ಮಾ.04-ಮಾ.05: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 20ನೇ ವರ್ಷದ ಏಕಾಹ ಭಜನೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.04 ಶುಕ್ರವಾರ ಸೂರ್ಯೋದಯದಿಂದ ಮಾ.05 ಶನಿವಾರ ಸೂರ್ಯೋದಯದವರೆಗೆ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಹಾಗೂ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 20ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಭಾಗಿಗಳಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ...

ಮಾ.01: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರುದ್ರ ಪಾರಾಯಣ, ಹಾಲು-ಸೀಯಾಳ ಅಭಿಷೇಕ

ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01ರಂದು ಮಹಾಶಿವರಾತ್ರಿ ಪ್ರಯುಕ್ತ ರಾತ್ರಿ ಗಂಟೆ 7.00ರಿಂದ ರುದ್ರ ಪಾರಾಯಣ, ಹಾಲು-ಸೀಯಾಳ ಅಭಿಷೇಕ ನಡೆಯಲಿರುವುದು. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಿನಂತಿಸಿದ್ದಾರೆ.
Ad Widget

ದೇವರಗದ್ದೆ:ಮೊಗೇರ್ಕಳ ಮತ್ತು ಕೊರಗಜ್ಜ ದೈವದ ನೇಮೋತ್ಸವ

ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಫೆ.15 ಮತ್ತು ಫೆ.16ರಂದು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಸಂಜೆ ಕುಕ್ಕೆಶ್ರೀ...

ಶ್ರದ್ಧಾ-ಭಕ್ತಿಯ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.12ರಂದು ಬೆಳಗ್ಗೆ ಉಗ್ರಾಣ ಮುಹೂರ್ತ ನಡೆದು ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ, ರಾತ್ರಿ ಧ್ವಜಾರೋಹಣ ನಡೆಯಿತು. ಬಳಿಕ...

ಬೆಳ್ಳಾರೆ: ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಶ್ರೀ ದೇವರ ದರ್ಶನ ಬಲಿ, ರಾತ್ರಿ ಅಗ್ನಿಗುಳಿಗ ದೈವದ ನೇಮೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರುಗುತ್ತಿದ್ದು, ಇಂದು(ಫೆ.16) ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ದೇವಸ್ಥಾನದಲ್ಲಿ ಪೂರ್ವಾಹ್ನ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟು ಬಲಿ ನಡೆದು ಶ್ರೀ ದೇವರ ಅವಭೃಥ ಸ್ನಾನ ನಡೆಯಿತು. ಬಳಿಕ ದರ್ಶನ...

ಫೆ.12-ಫೆ.18: ಎಡಮಂಗಲ ಜಾತ್ರೋತ್ಸವ- ಶ್ರೀ ದೇವರ ಬಲಿ ಉತ್ಸವ, ಮಹಾರಥೋತ್ಸವ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಂದು ಆರಂಭಗೊಂಡಿದ್ದು, ಫೆ.15 ಮಂಗಳವಾರದಂದು ಬೆಳಗ್ಗೆ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ಬಲಿಯೊಂದಿಗೆ ಕೋಲಾಟ...

ಭಕ್ತಿ, ಸಡಗರದ ಕಾಂಚೋಡು ಜಾತ್ರೋತ್ಸವ ಸಂಪನ್ನ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದು ಫೆ.14ರಂದು ಸಂಪನ್ನಗೊಂಡಿತು. ಜಾತ್ರೋತ್ಸವದ ಅಂಗವಾಗಿ ಫೆ.11ರಂದು ಸಂಜೆ ತಂತ್ರಿಗಳವರ ಆಗಮನದ ಬಳಿಕ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇವರಿಂದ ಚೆಂಡೆವಾದನದೊಂದಿಗೆ ಹಸಿರುವಾಣಿಯನ್ನು...

ಬೆಳ್ಳಾರೆ: ಅಜಪಿಲ ಜಾತ್ರಾ ಸಂಭ್ರಮ- ಜಾತ್ರೋತ್ಸವದ ಅಂಗವಾಗಿ ಶ್ರೀ ದೇವರ ನೃತ್ಯ ಬಲಿ

ಫೆ.16ರಂದು ಹಗಲು ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಅಗ್ನಿಗುಳಿಗ ದೈವದ ನೇಮೋತ್ಸವ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗುತ್ತಿದ್ದು, ಫೆ.14 ಸೋಮವಾರದಂದು ಬೆಳಗ್ಗೆ ಗಣಪತಿ ಹವನ, ಉಷಾಃಪೂಜೆ,...

ಬೆಳ್ಳಾರೆ ವಿಹಿಂಪ ವತಿಯಿಂದ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಮನವಿ

ವಿಶ್ವ ಹಿಂದೂ ಪರಿಷತ್ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿ ಶ್ರೀಮತಿ ಸುಹಾನ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಸುರೇಶ್ ಶೆಟ್ಟಿ ಪನ್ನೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ...

ಫೆ.12-ಫೆ.18: ಎಡಮಂಗಲ ಜಾತ್ರೋತ್ಸವ- ವೈಭವದ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಂದು ಆರಂಭಗೊಂಡಿದ್ದು, ಫೆ.14 ಸೋಮವಾರದಂದು(ಇಂದು) ಬೆಳಗ್ಗೆ ಬಲಿ ಹೊರಟು ಉತ್ಸವ "ಶ್ರೀ ದೇವರ ದರ್ಶನ ಬಲಿ", ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು...
Loading posts...

All posts loaded

No more posts

error: Content is protected !!