- Saturday
- March 7th, 2026
ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗನ ಕಟ್ಟೆಗೆ ಭೂಮಿ ಪೂಜೆಯನ್ನು ಫೆ.19ರಂದು ಪುರೋಹಿತರಾದ ಶಂಕರ್ ಹೆಬ್ಬಾರ್ ರವರ ನೇತೃತ್ವದಲ್ಲಿ ಆಡಳಿತ ಮೊಕ್ತೇಸರ ಹಾಗೂ ಜೀರ್ಣೋದ್ಧಾರದ ಅಧ್ಯಕ್ಷರಾದ ಎಂ.ಬಿ ಸದಾಶಿವರವರು ನೆರವೇರಿಸಿದರು. ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು ಕಾರ್ಯದರ್ಶಿ ಹಾಗೂ ಭಕ್ತ ವೃಂದದವರು ಉಪಸ್ಥಿತರಿದ್ದರು.
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ನಡೆಯಲಿದ್ದು, ಇಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಿತು. ಬಾಳುಗೋಡು, ಐನೆಕಿದು ಹಾಗೂ ಹರಿಹರ ಪಳ್ಳತ್ತಡ್ಕ ಭಾಗಗಳಿಂದ ಹರಿಹರ ಪಳ್ಳತ್ತಡ್ಕ ಪೇಟೆಗೆ ಹಸಿರುವಾಣಿ ಬಂದು ಅಲ್ಲಿಂದ ಶ್ರೀ ದೇವಳಕ್ಕೆ ಮೆರವಣಿಗೆಯ ಮುಖಾಂತರ ಹಸಿರು...
ಹರಿಹರ ಪಳ್ಳತ್ತಡ್ಕ ಪೇಟೆಯಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯ ಲೋಕಾರ್ಪಣೆಯು ಫೆ.20 ರಂದು ನೆರವೇರಿತು. ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಹಳೆಯ ಕಾಣಿಕೆ ಹುಂಡಿ ಕೊಚ್ಚಿ ಹೋಗಿದ್ದು, ಇದೀಗ ಭಕ್ತಾದಿಗಳ ಸಹಕಾರದಿಂದ ಹೊಸ ಕಾಣಿಕೆ ಹುಂಡಿ ನಿರ್ಮಾಣಗೊಂಡಿದ್ದು, ಇಂದು(ಫೆ.20) ಲೋಕಾರ್ಪಣೆಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಾಳೆ(ಫೆ.20) ಬಾಳುಗೋಡು, ಐನೆಕಿದು ಹಾಗೂ ಹರಿಹರ ಪಳ್ಳತ್ತಡ್ಕ ಗ್ರಾಮಗಳ ಗ್ರಾಮಸ್ಥರಿಂದ ಶ್ರೀ ದೇವರಿಗೆ “ಹಸಿರು ಕಾಣಿಕೆ ಸಮರ್ಪಣೆ” ನೆರವೇರಲಿದ್ದು, ಬಾಳುಗೋಡು ಗ್ರಾಮದಿಂದ ಬೆಳಿಗ್ಗೆ...
ಸುಬ್ರಹ್ಮಣ್ಯ ಫೆಬ್ರವರಿ 16: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಮಹಾ ಶಿವರಾತ್ರಿಯ ಶುಭದಿನದಂದು ಸೋಮವಾರ ಸಂಜೆ ಗಂಟೆ 6:00 ಗಂಟೆಗೆ ಪಂಚಮಿ ರಥೋತ್ಸವ ಸಡಗರ ಸಂಭ್ರಮದಿಂದ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ಶ್ರೀ ದೇವಳದ ಗೋಪುರದ ಇದರಿಂದ ಪಂಚಮಿ ರಥೋತ್ಸವ ಆರಂಭವಾಗಿ ರಥ ಬೀದಿಯಲ್ಲಿ ಸಾಗಿ ಸವಾರಿ ಮಂಟಪದವರೆಗೆ ಬಂದು...
ಸುಬ್ರಹ್ಮಣ್ಯ ಫೆಬ್ರವರಿ 16 : ಮಹಾಶಿವರಾತ್ರಿಯ ರವಿವಾರದಂದು ಬಹಳಷ್ಟು ದೇವಸ್ಥಾನಗಳಲ್ಲಿ ಭಕ್ತರು ಜಮಾಯಿಸಿ ದೇವರ ದರ್ಶನ ಪಡೆಯುತ್ತಿದ್ದರೆ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮರುದಿನ ಅಂದರೆ ಸೋಮವಾರ ಬೆಳಗ್ಗಿನ ಜಾವದಿಂದಲೇ ಅಧಿಕ ಸಂಖ್ಯೆಯ ಭಕ್ತರು ಬಸ್ಸು ಹಾಗೂ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು.ಬೆಳ್ಳಂಬೆಳಗ್ಗೆ ಬಸ್ಸು ಹಾಗೂ ವಿವಿಧ ವಾಹನಗಳಲ್ಲಿ ಆಗಮಿಸಿದ ಭಕ್ತಾದಿಗಳು ಪವಿತ್ರ ಕುಮಾರಧಾರ ಹೊಳೆಯಲ್ಲಿ ತೀರ್ಥ ಸ್ನಾನ...
ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಹಾಗೂ 16 ರಂದು “ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ” ನಡೆಯಿತು. ಫೆ.08 ಆದಿತ್ಯವಾರದಂದು ಗೊನೆ ಮುಹೂರ್ತ ಹಾಗೂ ಫೆ.12 ಗುರುವಾರದಂದು ಸಂಕ್ರಮಣ ಪೂಜೆ ನೆರವೇರಿತು. ಒತ್ತೆಕೋಲ ಉತ್ಸವದ ಮೊದಲನೇ ದಿನವಾದ ಫೆ.15 ಆದಿತ್ಯವಾರದಂದು ಪ್ರಾತಃಕಾಲ ಅಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ ಗಣಪತಿ ಹೋಮ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ಜರುಗಲಿದ್ದು, ಫೆ.14ರಂದು ಗೊನೆ ಮುಹೂರ್ತ ನೆರವೇರಿತು.ಜಾತ್ರೋತ್ಸವದ ಮೊದಲನೇ ದಿನವಾದ ಫೆ.20ನೇ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...
Loading posts...
All posts loaded
No more posts
