- Saturday
- September 12th, 2026
ಸುಬ್ರಹ್ಮಣ್ಯ ಆಗಸ್ಟ್ 28 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವರಮಹಾಲಕ್ಷ್ಮಿ ಪೂಜೆಯನ್ನು ಸಡಗರ ಭಕ್ತಿ ಭಾವದಿಂದ ಆಚರಿಸಲಾಯಿತು. ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಹೊಸಳಿಗಮ್ಮ ದೈವದ ಗುಡಿಯಲ್ಲಿ ಪ್ರಾರ್ಥನೆ ಮಾಡಿ ನಂತರ ಶ್ರೀ ದೇವಳದ ಎದುರುಗಡೆ ಹರಿಯುತ್ತಿರುವ ದರ್ಪಣ ತೀರ್ಥ ನದಿ ತಟದಲ್ಲಿ ಪೂಜಾ ವಿಧಿ ವಿಧಾನಗಳನ್ನು ಪುರೋಹಿತರು...
ಪೆರುವಾಜೆ : ಮೂರು ತಾಲೂಕುಗಳ 22 ಗ್ರಾಮಗಳ ಮಾಗಣೆ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶುಕ್ರವಾರ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ 1,000ಕ್ಕೂ ಅಧಿಕ ಮಂದಿ ಪೂಜೆ ಸಮರ್ಪಿಸಿದರು. ಪೂರ್ವಾಹ್ನ ದೇವಸ್ಥಾನದ ಸನ್ನಿಧಿಯಲ್ಲಿ ಪೂಜಾ ಕಾರ್ಯಕ್ರಮ ಆರಂಭಗೊಂಡಿತು. ಮಾತೆಯರು ಪಾಲ್ಗೊಂಡು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ದೇವಿಯನ್ನು...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಳೆ(ಆ.29) “ಸೋಣ ಶನಿವಾರ” ಆಚರಿಸಲಾಗುವುದು ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ : “ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕೊಂಡೊಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು. ಆರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ, ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಸೆ.13 ರಿಂದ 15ರವರೆಗೆ ನಡೆಯಲಿರುವ “ಶ್ರೀ ಗಣೇಶೋತ್ಸವ”ದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.25ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ಮಾಜಿ ಆಡಳಿತ ಮೊಕ್ತೇಸರರಾದ ಡಾ| ಚಂದ್ರಶೇಖರ ಕಿರಿಭಾಗ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ...
ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹರಿಹರ, ಬಾಳುಗೋಡು, ಐನೆಕಿದು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಆ.28 ಶುಕ್ರವಾರದಂದು ಪೂರ್ವಾಹ್ನ 8:30ಕ್ಕೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ “ಶ್ರೀ ವರಮಹಾಲಕ್ಷ್ಮೀ ಪೂಜೆ” ನಡೆಯಲಿದ್ದು, ಆ ಪ್ರಯುಕ್ತ ಭಕ್ತಾದಿಗಳು ಪೂಜಾ ವಿಧಿಯಲ್ಲಿ ಪಾಲ್ಗೊಂಡು ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಸರ್ಪಸಂಸ್ಕಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 03 ಮತ್ತು 04 ರಂದು ಹಾಗೂ ದಶಮಿ-ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ 06 ಮತ್ತು...
ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಯುವಜನ ಸೇವಾ ಸಂಸ್ಥೆ ಇಲ್ಲಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ರೂ.10 ಲಕ್ಷ ಮೊತ್ತದಲ್ಲಿ ನಿರ್ಮಾಣಗೊಂಡ ಭೋಜನ ಶಾಲೆಯ ವಿಸ್ತೃತ ಕಟ್ಟಡ ಅನ್ನಪೂರ್ಣದ ಲೋಕಾರ್ಪಣಾ ಸಮಾರಂಭ ಆ.22ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಕು.ಭಾಗೀರಥಿ ಮುರುಳ್ಯ ಅನ್ನಪೂರ್ಣದ ಲೋಕಾರ್ಪಣೆಗೈದರು. ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ...
ಶ್ರೀ ಕೃಷ್ಣ ಭಜನಾ ಮಂದಿರ, ಸೋಣಂಗೇರಿ ಇದರ ವತಿಯಿಂದ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಮಾಜಿ ಸಚಿವರಾದ ಎಸ್. ಅಂಗಾರ ಅವರು ಬಿಡುಗಡೆಗೊಳಿಸಿದರು. ಬಳಿಕ ಮಂದಿರದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ರವೀಂದ್ರನಾಥ ನಡುಮನೆ, ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್(ರಿ.)...
ಸುಬ್ರಹ್ಮಣ್ಯ : "ಭಗವದ್ಗೀತೆಯು ಜೀವನ ಮೌಲ್ಯಗಳ ಸಾರವನ್ನು ಹೊಂದಿದೆ. ಭಗವದ್ಗೀತೆಯ ಸಂದೇಶವು ಮನುಷ್ಯನ ಜೀವನಕ್ಕೆ ದಾರಿದೀಪವಾಗಿದೆ. ಗೀತೆಯನ್ನು ಓದಿ ಅರ್ಥೈಸಿಕೊಂಡು ಅವುಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳ ಆಚರಣೆಗಳು ಶಾಂತಿ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ನಡೆಯಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಾನೂನು ಮತ್ತು ಶಿಸ್ತನ್ನು ಪಾಲಿಸುವ...
Loading posts...
All posts loaded
No more posts
