Ad Widget

ಡಿ.24: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.24 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ...

ಡಿ.16-ಜ.14: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ಗುರುವಾರದಿಂದ ಮೊದಲ್ಗೊಂಡು ಜ.14 ಶುಕ್ರವಾರದ ತನಕ ಧನುಪೂಜೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 05.15 ಕ್ಕೆ ಸರಿಯಾಗಿ ಧನುಪೂಜೆ ಆರಂಭಗೊಳ್ಳಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.250 ರ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳಾದ ಸುಹಾನ.ಪಿ ತಿಳಿಸಿದ್ದಾರೆ.
Ad Widget

ಡಿ.08 – ಡಿ.12: ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳವರ (ನೀಲೇಶ್ವರ) ನೇತೃತ್ವದಲ್ಲಿ ಡಿ.08 ಬುಧವಾರದಿಂದ ಷಷ್ಠಿ ಮಹೋತ್ಸವ ಆರಂಭಗೊಳ್ಳಲಿದ್ದು ಡಿ.12 ಆದಿತ್ಯವಾರದ ತನಕ ಜರುಗಲಿದೆ. ಡಿ.08 ಬುಧವಾರದಂದು ಪಂಚಮಿ ಪ್ರಯುಕ್ತ ಸಂಜೆ 06.30ರಿಂದ ವಾಸ್ತು ರಕ್ಷೋಘ್ನಾದಿ ಶುದ್ಧಿ ಕಾರ್ಯ, ಆಸ್ತಿಕ ಬಂಧುಗಳು, ಸಂಘ ಸಂಸ್ಥೆಗಳು ಹಾಗೂ ಕಾಂಚೋಡು...

ಡಿ.14 ಹಾಗೂ ಡಿ.15: ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ಹಾಗೂ ಡಿ.15ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ಬೆಳಿಗ್ಗೆ ಗಂಟೆ 7.30ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ಗಂಟೆ...

ಮಠತ್ತಡ್ಕ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಪೆರುವಾಜೆ ಗ್ರಾಮದ ಮಠತ್ತಡ್ಕ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಪೂರ್ವಭಾವಿಯಾಗಿ ನ.27ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರಾದ ನರಹರಿ ಭಟ್ ಮಠತ್ತಡ್ಕ ಹಾಗೂ ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

ಡಿ.13ರಂದು ವಿಹಿಂಪ ಬಜರಂಗದಳ ವತಿಯಿಂದ ಸುಳ್ಯದಲ್ಲಿ ಶೌರ್ಯ ಸಂಚಲನ ಕಾರ್ಯಕ್ರಮ – ಬೆಳ್ಳಾರೆ ವಾಲ್ಮೀಕಿ ಶಾಖೆಯಿಂದ ಇಂದು ಕರಪತ್ರ ಬಿಡುಗಡೆ

ವಿಶ್ವಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿಸುಳ್ಯ ಪ್ರಖಂಡ ವತಿಯಿಂದ ಗೀತಾ ಜಯಂತಿ ಅಂಗವಾಗಿ ಐತಿಹಾಸಿಕ ಹಿಂದುತ್ವದ ಭದ್ರಕೋಟೆ ಸುಳ್ಯದಲ್ಲಿ ಡಿ.13ರಂದು ಜರುಗಲಿರುವ ಶೌರ್ಯ ಸಂಚಲನ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ವಾಲ್ಮೀಕಿ ಶಾಖೆ ವತಿಯಿಂದ ಇಂದು(ನ.25) ನಡೆಯಿತು. ಕಾರ್ಯಕ್ರಮವು ಸಂಜೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ಉದ್ಯಮಿ ರಾಜೇಶ್...

ಜನವರಿ 3 ರಿಂದ ಕಣೆಮರಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಪ್ರತಿಷ್ಠಾ ಮಹೋತ್ಸವ

ತಾಲೂಕಿನ ಮಂಡೆಕೋಲು ಗ್ರಾಮದ ಕಣೆಮರಡ್ಕದಲ್ಲಿ ಸುಮಾರು ಐದು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ನವೀಕರಣ ಕೆಲಸ ನಡೆಯುತ್ತಿದ್ದು ಜೀರ್ಣೋದ್ದಾರ ಕಾರ್ಯಗಳನ್ನು ಪೂರ್ತಿಗೊಳಿಸಿ ಮಂದಿರದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಮುಂಬರುವ 2022ನೇ ಜನವರಿ 3 ರಿಂದ ಜನವರಿ 5 ರ ತನಕ ನಡೆಯಲಿದೆ. ಈ ಮಂದಿರವನ್ನು ಹಿರಿಯ ಅಯ್ಯಪ್ಪ ಮಾಲಾಧಾರಿ ಶ್ರೀ ಯಂ.ಕೆ...

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಪೌರ್ಣಮಿ, ಲಕ್ಷದೀಪ ಉತ್ಸವ ಹಾಗೂ ನೂತನ ಲಾಲ್ಕಿಯಲ್ಲಿ ಶ್ರೀ ದೇವರ ಮೆರವಣಿಗೆ

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನಡೆಯುತ್ತಿದ್ದು ಇಂದು ಕಾರ್ತಿಕ ಪೌರ್ಣಮಿ, ಲಕ್ಷದೀಪ ಉತ್ಸವ ನಡೆಯಿತು. ರಾತ್ರಿ ದೇವಸ್ಥಾನದಲ್ಲಿ ಶ್ರೀದೇವರ ಪೂಜೆ ನಡೆದು ಬಳಿಕ ಅಚಲಾಪುರ ಕಟ್ಟೆಯವರೆಗೆ ದೇವಸ್ಥಾನದ ವತಿಯಿಂದ ನಿರ್ಮಿಸಲಾದ ನೂತನ ಲಾಲ್ಕಿಯಲ್ಲಿ ಶ್ರೀ ದೇವರ ವೈಭವದ ಉತ್ಸವ ಮೆರವಣಿಗೆ ನಡೆಯಿತು. ಬಳಿಕ ಅಚಲಾಪುರ ಕಟ್ಟೆಯಲ್ಲಿ...

ನಾಲ್ಕೂರು :- ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಹಾಗೂ ದಾರಂದ ಮಹೂರ್ತ

ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು 2022 ರ ಜ.13 ರಿಂದ ಜ.16 ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಅ.27 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಿಲ್ಪಿ ವೆಂಕಟ್ರಮಣ ಮರ್ಕಂಜ ಅವರು ದಾರಂದ ಮಹೂರ್ತ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಗಳಿದ್ದು ವಿವಿಧ...

ಪೆರುವಾಜೆ ಶ್ರೀ ಜಲದುರ್ಗಾ ದೇವಸ್ಥಾನಕ್ಕೆ ಯತೀಶ್ ಕಾನಾವುಜಾಲು ಅವರಿಂದ ಪ್ರಿಂಟರ್ ಕೊಡುಗೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿ ಉದ್ಯೋಗದಲ್ಲಿರುವ ಯತೀಶ್ ಕಾನಾವುಜಾಲು ಅವರು ಶ್ರೀ ಕ್ಷೇತ್ರಕ್ಕೆ ಪ್ರಿಂಟರ್ ಕೊಡುಗೆಯಾಗಿ ನೀಡಿದರು. ಹಸ್ತಾಂತರ ಸಂದರ್ಭದಲ್ಲಿ ಪೆರುವಾಜೆ ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸದಸ್ಯರಾದ ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ ಪೆರುವಾಜೆ, ಕಾರ್ಯದರ್ಶಿ ವಸಂತ ಪೆರುವಾಜೆ, ಯಶವಂತ...
Loading posts...

All posts loaded

No more posts

error: Content is protected !!