- Saturday
- March 7th, 2026
ನಾಲ್ಕೂರು ಗ್ರಾಮದ ಪಂಜಿಪಳ್ಳ ನಿವಾಸಿ ದಿವ್ಯ ಚಿದ್ಗಲ್ಲು ಎಂಬುವವರ ಚಿನ್ನದ ಸರ ಜ.20ರಂದು ಕಳೆದು ಹೋಗಿತ್ತು. ಕಳೆದು ಸರ ಪತ್ತೆ ಮಾಡಿಕೊಡುವಂತೆ ಉಜಿರಡ್ಕ ಕೊರಗಜ್ಜ ದೈವದಲ್ಲಿ ಪ್ರಾರ್ಥಿಸಿದ ಕೂಡಲೇ ಕಳೆದು ಹೋದ ಚಿನ್ನದ ಸರ ಪತ್ತೆಯಾಗಿದ್ದು, ನಂಬಿದವರಿಗೆ ಕೊರಗಜ್ಜ ದೈವ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ.
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಜ.16 ರಿಂದ ಆರಂಭಗೊಂಡಿದ್ದು, ಜ.19 ರಂದು ಬ್ರಹ್ಮರಥೋತ್ಸವ ಹಾಗೂ ಬೆಡಿ ಪ್ರದರ್ಶನ ನಡೆಯಿತು.ಜ.19 ರಂದು ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ...
ಕೋಡಿಬೈಲು ಕುಟುಂಬದ “ಧರ್ಮದೈವ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ”ಯು ಜ.17 ಮತ್ತು 18ರಂದು ಯೇನೆಕಲ್ಲು ಗ್ರಾಮದ ಕೋಡಿಬೈಲು ತರವಾಡು ಮನೆಯಲ್ಲಿ ನಡೆಯಿತು.ಜ.17ನೇ ಶನಿವಾರದಂದು ಸಂಜೆ ದೈವಗಳ ಭಂಡಾರ ತೆಗೆದು ನಂತರ ರಾತ್ರಿ ಕಲ್ಲುರ್ಟಿ ಮತ್ತು ಜಾವತೆ ದೈವಗಳ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆದು ನಂತರ ಕೊರತ್ತಿ, ವರ್ಣಾರ ಪಂಜುರ್ಲಿ, ವ್ಯಾಘ್ರ ಚಾಮುಂಡಿ, ಕುಪ್ಪೆ ಪಂಜುರ್ಲಿ...
ಅಜ್ಜಾವರ : ಮೇದಿನಡ್ಕದಲ್ಲಿ ಪೂರ್ವ ಸಂಪ್ರದಾಯದಂತೆ ನಡೆದುಕೊಂಡು ಬಂದ ಪೊಂಗಲ್ ಆಚರಣೆಯು ಶ್ರೀ ರಾಮ ಭಜನಾ ಮಂದಿರದಲ್ಲಿ ಜ.15 ರಂದು ಪೊಂಗಲ್ ಆಚರಣೆಯೊಂದಿಗೆ ವಿಜ್ರಂಭಣೆಯಿಂದ ಸಮಾಪನಗೊಂಡಿತು. ಬೆಳಗ್ಗೆ 8:30ಕ್ಕೆ ಶ್ರೀ ರಾಮಚಂದ್ರನಿಗೆ ವಿಶೇಷ ಅಲಂಕಾರ ಪೂಜೆ, ಪ್ರಸಾದ ವಿತರಣೆ ನಡೆಯಿತು. ತದ ನಂತರ ಮನೆ ಮನೆ ಭಜನಾ ಸಂಕೀರ್ತನೆ, ತ್ರಿಶೂಲ ದೀಪದೊಂದಿಗೆ ಶ್ರೀ ರಾಮ ದೇವರ...
ಪಂಜ : ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ನೂತನ ಅರ್ಚಕರಾಗಿ ಸುಬ್ರಹ್ಮಣ್ಯ ಶರ್ಮ ನೇಮಕಗೊಂಡಿದ್ದಾರೆ.ಇವರಿಗೆ ದೇಗುಲದ ವತಿಯಿಂದ ಪ್ರಾರ್ಥನೆ ಮಾಡಿ ಪ್ರಸಾದ ನೀಡಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಾಯಿಲಪ್ಪ ಗೌಡ ಎಮ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ ಬಳ್ಳ, ಹಾಗೂ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವವು ಫೆ.08, 09 ಹಾಗೂ 10 ರಂದು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.14 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಅರ್ಚಕ ರಾಮಚಂದ್ರ ಪಿ.ಜಿ.ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ, ವೈದಿಕ ಮುಖ್ಯಸ್ಥ ರಾಜಾರಾಮ...
ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಕರ ಸಂಕ್ರಮಣದಂದು ನಡೆಯುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕುಕ್ಕೆಲಿಂಗ ಜಾತ್ರೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವರ ವೈಭವದ ಸಂಕ್ರಾತಿ ರಥೋತ್ಸವ ಜರುಗಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಉತ್ಸವದ ವಿದಿವಿಧಾನ ನೆರವೇರಿಸಿದರು. ಮುಂಜಾನೆ ರಥಬೀದಿಗೆ ಆಗಮಿಸಿದಾಗ...
ಸುಬ್ರಹ್ಮಣ್ಯ : ಕೇಳರಳದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರ ಅನುಕೂಲತೆಗಾಗಿ ಸಹಾಯವಾಣಿ ಕೇಂದ್ರವನ್ನು ಕರ್ನಾಟಕ ಸರಕಾರ ತೆರೆದಿದೆ. ಇದರಿಂದಾಗಿ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ವಿಶೇಷ ಮಾಹಿತಿ ಮತ್ತು ತುರ್ತು ಸಂದರ್ಭದಲ್ಲಿ ಸಹಕಾರ ದೊರಕಲಿದೆ.ಶಬರಿ ಮಲೆಯಲ್ಲಿ ನಡೆಯುವ ಮಂಡಲ ಪೂಜೆ ಮತ್ತು ಮಕರವಿಳಕ್ಕು ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಹೆಚ್ಚಿನ ಭಕ್ತರು ಯಾತ್ರೆ ಕೈಗೊಳ್ಳುವ...
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.16 ರಿಂದ ಜ.21 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ.16 ರಂದು ಹಸುರು ಹೊರೆಕಾಣಿಕೆ ಮೆರವಣಿಗೆ : ಜ.16 ರಂದು ಬೆಳಗ್ಗೆ 10 ಗಂಟೆಗೆ ಜಾತ್ರೆಯ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.16ರಿಂದ ಜ.14 ರವರೆಗೆ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಿತು. ಜ.14ರಂದು ಮಕರ ಸಂಕ್ರಮಣದ ದಿನ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಮತ್ತು ಧನುಪೂಜೆ ಸಮಾಪ್ತಿ ನಡೆದು ಮದ್ಯಾಹ್ನ ದೇವಸ್ಥಾನದಲ್ಲಿ ಶ್ರೀ ಹರಿಹರೇಶ್ವರ ದೇವರಿಗೆ ಮಹಾಪೂಜೆ ನಡೆದು, ನಂತರ ಶ್ರೀ ವನಶಾಸ್ತವೇಶ್ವರ ಕಟ್ಟೆಯಲ್ಲಿ ದೇವರಿಗೆ ವಾರ್ಷಿಕ...
Loading posts...
All posts loaded
No more posts
