ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾಸ್ಟರ್ ಫ್ಲ್ಯಾನ್ ಯೋಜನೆಯ ರೂ.604 ಕೋಟಿ ಕಾಮಗಾರಿಗೆ ಕ್ಯಾಬಿನೆಟ್ ಒಪ್ಪಿಗೆ ; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಮಾಹಿತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲ್ಯಾನ್ ಯೋಜನೆಯಲ್ಲಿ ರೂ.604 ಕೋಟಿಯಲ್ಲಿ ವಿವಿಧ ಕಾಮಗಾರಿಗಳಿಗೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾಹಿತಿ ನೀಡಿದ್ದಾರೆ.ಮೇ.7 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿರುವುದಾಗಿ ಅವರು ತಿಳಿಸಿದ್ದಾರೆ.ಮಾಸ್ಟರ್ ಪ್ಲಾನ್ ಯೋಜನೆಯಂತೆ 604...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ವಾಹನ ದಟ್ಟಣೆ

ಸುಬ್ರಹ್ಮಣ್ಯ ಮೇ 10 : ರಾಜ್ಯದ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜಾ ಹಿನ್ನೆಲೆಯಲ್ಲಿ ರವಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಹನ ದಟ್ಟನೆಯೊಂದಿಗೆ ಭಕ್ತ ಸಮೂಹವೇ ಕ್ಷೇತ್ರಕ್ಕೆ ಆಗಮಿಸಿತ್ತು. ರಾಜ್ಯದ ವಿವಿಧ ಮೂಲಗಳಿಂದ ಆಗಮಿಸಿದ ಭಕ್ತಾದಿಗಳನ್ನು ಹೊತ್ತ ವಾಹನಗಳು ಕಾಶಿ ಕಟ್ಟೆಯಿಂದಲೇ ನಿಧಾನವಾಗಿ ಚಲಿಸಿ ಕುಕ್ಕೆ ರಥಬೀದಿಯ ಸರ್ಕಲ್ ನಿಂದ ಅಲ್ಲಲ್ಲಿ ಪಾರ್ಕಿಂಗ್ ಪ್ರದೇಶಗಳಿಗೆ ತೆರಳಿದವು. ಕ್ಷೇತ್ರದಲ್ಲಿರುವ ಎಲ್ಲಾ ಪಾರ್ಕಿಂಗ್...
Ad Widget

ಸರಣಿ ರಜೆ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಸುಬ್ರಹ್ಮಣ್ಯ ಮೇ 03 : ನಿರಂತರವಾಗಿ ರಜೆಯ ಕಾರಣದಿಂದ ಹಾಗೂ ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು(ಏ.03) ರಾಜ್ಯ ಹಾಗೂ ಹೊರರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಕ್ತರ ಸುಗಮಾ ದರ್ಶನಕ್ಕಾಗಿ ಶ್ರೀ...

ಮುಳ್ಳುಬಾಗಿಲು : ಶ್ರೀ ಶಿರಾಡಿ ದೈವದ ನೇಮೋತ್ಸವ ಸಂಪನ್ನ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಹಾಗೂ 02 ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಿತು.ಮೇ.01 ರಂದು ಭಂಡಾರ ಬಂದು ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನಂತರ ಸಂಜೆ ಶ್ರೀ ಗುಳಿಗ ದೈವದ...

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಡಾ.ರೇಣುಕಾ ಪ್ರಸಾದ್ ರಿಂದ ಧನಸಹಾಯ ಹಸ್ತಾಂತರ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಎ.ಒ.ಎಲ್.ಇ "ಬಿ" ಕಮಿಟಿಯ ಚೆರ್ಮೇನ್ ಡಾ. ರೇಣುಕಾ ಪ್ರಸಾದ್ ಕುರುಂಜಿ ಅವರು ನೀಡಿದ ಧನಸಹಾಯದ ಚೆಕ್ ನ್ನು ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆಯವರು ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡರಿಗೆ ಮೇ.02 ರಂದು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಎ.ಒ.ಎಲ್.ಇ ಬಿ ಕಮಿಟಿಯ...

ಸುಬ್ರಹ್ಮಣ್ಯ ಮಠದಲ್ಲಿ ನರಸಿಂಹ ಜಯಂತಿ ಅಂಗವಾಗಿ ಭವ್ಯ ವ್ಯಾಸ ಪೂಜೆ ಹಾಗೂ ಮಹಾರಥೋತ್ಸವ

ಸುಬ್ರಹ್ಮಣ್ಯ: ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನರಸಿಂಹ ಜಯಂತಿ ಅಂಗವಾಗಿ ಮೇ.01 ರಂದು ಸುಬ್ರಹ್ಮಣ್ಯ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಪೂರ್ವಾಹ್ನ ವ್ಯಾಸ ಪೂರ್ಣಿಮ ಹಾಗೂ ವ್ಯಾಸ ಪೂಜೆ ಕಾರ್ಯಕ್ರಮಗಳು ವಿಧಿವಿಧಾನಗಳಿಂದ ನಡೆಯಿತು. ಬಳಿಕ ಮಹಾರಥೋತ್ಸವ ಭಕ್ತರ ನಡುವೆ ಭವ್ಯವಾಗಿ...

ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ(ರಿ.) ಸುಳ್ಯ ಘಟಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ಭೂಮಿ ಶಿವಗಿರಿ ಮತ್ತು ಇತರ ಪುಣ್ಯಕ್ಷೇತ್ರ ಯಾತ್ರೆ

ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಯ(ರಿ.) ಸುಳ್ಯ ಘಟಕದಿಂದ ಶಿವಗಿರಿ ಮತ್ತು ಇತರ ಪುಣ್ಯ ಕ್ಷೇತ್ರಗಳಿಗೆ ಎರಡು ದಿನದ ಯಾತ್ರೆ ಕೈಗೊಳ್ಳಲಾಯಿತು. ಮೊದಲ ದಿನ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಪೀಠ, ತಪೋ ಭೂಮಿ ಸಮಾಧಿ ಸ್ಥಳ, ಗುರುಗಳು ಜನಿಸಿದ ಚೆಂಬಳಂತಿ, ಕುನ್ನುಂಪಾರೆ ಬಾಲಸುಬ್ರಹ್ಮಣ್ಯಂ ದೇವಸ್ಥಾನ, ಗುರುಗಳು ಪ್ರಥಮವಾಗಿ ಸ್ಥಾಪಿಸಿದ ಅರಿವಿಪುರ ಶಿವ...

ಸುಬ್ರಹ್ಮಣ್ಯ : ನರಸಿಂಹ ಜಯಂತಿ ಕಾರ್ಯಕ್ರಮಗಳು ಆರಂಭ ; ಏಕಾದಶಿ ನಾಮ ಸಂಕೀರ್ತನೆ – ದೇವರ ನಾಮಗಳ ಗಾಯನಕ್ಕೆ ಚಾಲನೆ

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಎ.27 ರಿಂದ ನರಸಿಂಹ ಜಯಂತಿ ಕಾರ್ಯಕ್ರಮ ಆರಂಭಗೊಂಡಿದ್ದು, ಆ ಪ್ರಯುಕ್ತ ಮೇ.02 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಎ.27ರಂದು ಪ್ರಾತಕಾಲ 6:30ರಿಂದ ಸಂಜೆ ಗಂಟೆ 6:30 ರವರೆಗೆ ಏಕಾದಶಿ ನಾಮ ಸಂಕೀರ್ತನೆ - ದೇವರ ನಾಮಗಳ ಗಾಯನ ನಡೆದಿದ್ದು, ಮುಂಜಾನೆ ಶ್ರೀ ಮಠದ...

ಮುಳ್ಳುಬಾಗಿಲು : ಮೇ.01 ಮತ್ತು 02 ರಂದು “ಶ್ರೀ ಶಿರಾಡಿ ದೈವದ ನೇಮೋತ್ಸವ”

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಮತ್ತು 02ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಲಿದ್ದು, ಮೇ.01 ರಂದು ಬೆಳಿಗ್ಗೆ ಭಂಡಾರ ಬರುವುದು, ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗುಳಿಗ ದೈವದ ನೇಮೋತ್ಸವ...

ಕುಕ್ಕೆ ಸುಬ್ರಹ್ಮಣ್ಯ : ಶ್ರೀ ದೇವರಿಗೆ ವಜ್ರಖಚಿತ ಚಿನ್ನದ ಸರ ಸಮರ್ಪಣೆ ; 12.44 ಲಕ್ಷದ ಸರ – ಹೈದರಾಬಾದ್ ಉದ್ಯಮಿಯ ಸೇವೆ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೈದರಬಾದ್‌ನ ಉದ್ಯಮಿ ರಾಸನ್‌ ಗ್ರೂಪ್‌ನ ಚೇರ್‌ಮೆನ್‌ ಕಣ್ನಕರ್ ರವೀಂದ್ರ ರೆಡ್ಡಿ ಅವರು ವಜ್ರಖಚಿತ ಚಿನ್ನದ ಸರವನ್ನು ಬುಧವಾರ ಸಮರ್ಪಿಸಿದರು. ಸುಮಾರು ರೂ.12 ಲಕ್ಷದ 44 ಸಾವಿರ ರೂಪಾಯಿ ಮೌಲ್ಯದ ಸರವನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!