Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ಇಂದು ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ; ಸಂಜೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ರಂದು ಆರಂಭಗೊಂಡಿದ್ದು ಜ.21 ಶುಕ್ರವಾರದ ತನಕ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ...

ಬಾಳಿಲ: ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ವತಿಯಿಂದ ರಾಮಾಯಣ ಸಪ್ತಾಹ ಉದ್ಘಾಟನೆ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಾಯಣ ಸಪ್ತಾಹ ಕಾರ್ಯಕ್ರಮ ಜ. 17ರಂದು ಉದ್ಘಾಟನೆಯಾಯಿತು. ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು ದೀಪ ಬೆಳಗಿಸಿ ಸಪ್ತಾಹವನ್ನು ಉದ್ಘಾಟಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರು ಅಧ್ಯಕ್ಷತೆ...
Ad Widget

ನಿಂತಿಕಲ್ಲು: ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸ್ಥಳಾಂತರಗೊಂಡು ಶುಭಾರಂಭ

ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಂಡಿತು. ಧಾರ್ಮಿಕ ಪರಿಷತ್ ಸದಸ್ಯರಾದ ರಘುನಾಥ ರೈ ಅಲೆಂಗಾರ ದೀಪ ಬೆಳಗುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ನರ್ಲಡ್ಕ, ಮಾಲಕರ ತಂದೆ ಜನಾರ್ದನ, ಮಾಲಕರ ತಾಯಿ...

ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.24 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕೊರಗಜ್ಜ ದೈವದ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ರಾತ್ರಿ ವರ್ಷಾವಧಿಯ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಜರುಗಿತು. ಈ ಸಂದರ್ಭದಲ್ಲಿ ಶ್ರೀಮತಿ ಮತ್ತು...

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ- ಸಂಘಕ್ಕೆ ನಿವ್ವಳ ಲಾಭ ರೂ.52,10,897.61/-, ಸದಸ್ಯರಿಗೆ 6% ಡಿವಿಡೆಂಡ್

ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರದಂದು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಕೃಷಿಕರಾದ ಗಿರಿಯಪ್ಪ ಗೌಡ ದೀಪ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘದ ಮುಖ್ಯ...

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ – ಸಂಘಕ್ಕೆ ರೂ.24,90,223.32/- ನಿವ್ವಳ ಲಾಭ, ಸದಸ್ಯರಿಗೆ 4% ಡಿವಿಡೆಂಡ್ ಘೋಷಣೆ

ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಎಂ.ರಾಮಕೃಷ್ಣ ರೈ ಮಾಲೆಂಗ್ರಿ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಎಡಮಂಗಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ.ಡಿ ಕಾರ್ಯಸೂಚಿ ಮಂಡಿಸಿದರು. 2020-21ನೇ ಸಾಲಿನಲ್ಲಿ ಸಂಘವು ರೂ.24,90,223.32/- ನಿವ್ವಳ ಲಾಭ ಗಳಿಸಿದ್ದು,...

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ- ಒಟ್ಟು ಲಾಭಾಂಶ ರೂ.20,78,434.33, ಸದಸ್ಯರಿಗೆ 3% ಡಿವಿಡೆಂಡ್ ಘೋಷಣೆ

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಸಂಘದ ಸಭಾಭವನ 'ಅಮರ ಸಹಕಾರ ಸೌಧ' ಕುಕ್ಕುಜಡ್ಕದಲ್ಲಿ ನಡೆಯಿತು.ಸಂಘದ ನಿರ್ದೇಶಕ ಗಣೇಶ್ ಪಿಲಿಕಜೆ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಸರ್ವರನ್ನು ಸ್ವಾಗತಿಸಿ, ಸಂಘವು 2020-21ನೇ ಸಾಲಿನಲ್ಲಿ ರೂ.20,78,434.33/- ನಿವ್ವಳ...

ಡಿ.14 ಹಾಗೂ ಡಿ.15: ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ಹಾಗೂ ಡಿ.15ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ಬೆಳಿಗ್ಗೆ ಗಂಟೆ 7.30ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ಗಂಟೆ...

ನಿಂತಿಕಲ್ಲು : ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯ ಪ್ರಥಮ ಲಕ್ಕೀ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ನಿಂತಿಕಲ್ಲು ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು 3ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಹಿನ್ನೆಲೆಯಲ್ಲಿ 'ಲಕ್ಕೀ ಡ್ರಾ' ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯ ಪ್ರಥಮ ಲಕ್ಕೀ ಡ್ರಾ ನ.13ರಂದು ನಡೆದಿದ್ದು, ವಿಜೇತರಾದ ರೋನವ್ ಪ್ರಸಾದ್ ಹಾಲೆಮಜಲು ಇವರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನವನ್ನು ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಹಾಗೂ...

ಸುಳ್ಯ ವನಜ ರಂಗಮನೆ ಪ್ರಶಸ್ತಿಗೆ ಯಕ್ಷವಾಗ್ಮಿ ಜಬ್ಬಾರ್ ಸಮೊ ಸಂಪಾಜೆ ಆಯ್ಕೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ,ರಂಗನಿರ್ದೇಶಕ ಜೀವನ್ ರಾಂ ಸುಳ್ಯರಮಾತೃಶ್ರೀ ಶ್ರೀಮತಿ ವನಜಾಕ್ಷಿ ಜಯರಾಮ ನೆನಪಿನಲ್ಲಿ ನೀಡುವ 'ವನಜ ರಂಗಮನೆ ಪ್ರಶಸ್ತಿ'ಗೆ ಈ ವರ್ಷ ಹಿರಿಯ ಯಕ್ಷಗಾನ ಅರ್ಥದಾರಿ ಜಬ್ಬಾರ್ ಸಮೊ ಸಂಪಾಜೆ ಅವರನ್ನು ಆಯ್ಕೆ ಮಾಡಲಾಗಿದೆ.ಕಳೆದ 35 ವರ್ಷಗಳಿಂದ ನಿರಂತರವಾಗಿ ಯಕ್ಷಗಾನದ ಅರ್ಥದಾರಿಯಾಗಿ,ವೇಷದಾರಿಯಾಗಿತನ್ನನ್ನು ತಾನು ತೊಡಗಿಸಿಕೊಂಡಿರುವ ಜಬ್ಬಾರ್ ಸಮೊ ಅವರು...
Loading posts...

All posts loaded

No more posts

error: Content is protected !!