- Saturday
- September 21st, 2024
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಜ್ಞಾನ ಮೇಳವು ವಿಜ್ಞಾನ ವಸ್ತು ಮಾದರಿ ರಚನೆಗಳೊಂದಿಗೆ ಜೂ.25ರಂದು ನಡೆಯಿತು. ಈ ಸಂದರ್ಭದಲ್ಲಿ ಐವರ್ನಾಡು,ಜಾಲ್ಸೂರು, ಶಾಂತಿನಗರ, ಪಯಸ್ವಿನಿ ಶಾಲೆಯ ವಿಜ್ಞಾನ ಶಿಕ್ಷಕರಾದ ನಾರಾಯಣ ಸರ್,ಪೂರ್ಣಿಮಾ ಮೇಡಂ,ಪವಿತ್ರ ಮೇಡಂ, ಜಯಪ್ರಕಾಶ್ ಸರ್ ನಿರ್ಣಾಯಕರಾಗಿ ಸಹಕರಿಸಿದರು. ಈ ಸಂದರ್ಭದಲ್ಲಿ ವಿಜ್ಞಾನ ಮಾದರಿಗಳು ಜೀವನದಲ್ಲಿ ಪ್ರಗತಿಯನ್ನು ಕೊಡುತ್ತದೆ ಮತ್ತು ಪರಿಸರದಲ್ಲಿನ ಬದಲಾವಣೆಗೆ ವಿಜ್ಞಾನ ಉಪಕರಣಗಳು ಸಹಕಾರ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಜೂನ್ 28ರಂದು ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ವಿಜ್ಞಾನ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕೆ ರವರು ಭಾಗವಹಿಸಿ 'ಇರುವುದೊಂದೇ ಭೂಮಿ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆ...
ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇವುಗಳ ಜಂಟಿ ಆಶ್ರಯದಲ್ಲಿ ಬೀಜ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿಯ ಸದಸ್ಯರುಗಳು, ಉಭಯ ಶಾಲೆಗಳ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಊರ...
ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್.06ರಂದು ಆಚರಿಸಲಾಯಿತು. ಪರಿಸರ ದಿನದ ಪ್ರಯುಕ್ತ ಪರಿಸರ ಸಂರಕ್ಷಣೆಯ ಸಲುವಾಗಿ ಗಿಡಗಳನ್ನು ನೆಡಲಾಯಿತು.
ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ವಿನೋಬನಗರದ ವಿವೇಕಾನಂದ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆಬ್ರವರಿ 28ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಕಾಶ್ ಮೂಡಿತ್ತಾಯರು ವಿಶೇಷವಾದ ಜ್ಞಾನ ವಿಜ್ಞಾನ, ವಿಜ್ಞಾನವೇ ಸತ್ಯ, ಭಾರತೀಯ ಋಷಿಗಳೇ ವಿಜ್ಞಾನಿಗಳು ಎಂಬುದಾಗಿ ವಿಜ್ಞಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಸಂವಾದದ ಮೂಲಕ ತಿಳಿಸಿಕೊಟ್ಟರು. ನಂತರ"ಈ ಭೂಮಿ ಹುಟ್ಟಿದ್ದು ಹೇಗೆ ಹೇಗೆ ಹೇಗೆ"? ಎಂಬ ಅಭಿನಯ...
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲ್ಪಡುತ್ತಿರುವ ಇನ್ ಸ್ಪೈರ್ ಅವಾರ್ಡಿಗೆ ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಐದು ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.ಮುರುಳ್ಯ ಗ್ರಾಮದ ನೂಜಾಡಿ ನಿವಾಸಿಗಳಾದ ವೆಂಕಪ್ಪ ಗೌಡ ಮತ್ತು ಶ್ರೀಮತಿ ಕಮಲ ದಂಪತಿಗಳ ಪುತ್ರ ಪವನ್ ಕುಮಾರ್ (10ನೇತರಗತಿ), ಅಲೆಕ್ಕಾಡಿ ಪೂದೆಯ ಶಿವರಾಮ ಮತ್ತು ಶ್ರೀಮತಿ ಜಯಲಕ್ಷ್ಮೀ ದಂಪತಿಗಳ ಪುತ್ರ ಗಗನ್.ಪಿ.(8ನೇ...
Loading posts...
All posts loaded
No more posts