- Friday
- July 31st, 2026
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ,ಮಹಿಳಾ ಸಬಲೀಕರಣ ಘಟಕ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅರಿವು ಕಾರ್ಯಕ್ರಮವನ್ನು ಜೂ. 19 ರಂದು ಬೆಳ್ಳಾರೆ...
ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯನ್ನು ಜೂ. 23 ರಂದು ಬೆಳ್ಳಾರೆ ಠಾಣಾಧಿಕಾರಿ ಹೀರಯ್ಯ ಎಚ್.ಡಿ. ಯವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಗಾಂಜಾ ಮತ್ತು ಅಫೀಮು, ಮೊಬೈಲ್ ಬಳಕೆ, ಸೈಬರ್ ಕ್ರೈಂ, ಅಪ್ರಾಪ್ತರ ವಾಹನ ಚಲಾವಣೆ ಮುಂತಾದ ಕುರಿತಾಗಿ ಕಾನೂನು ಮಾಹಿತಿಗಳನ್ನು ವಿವರವಾಗಿ ನೀಡಿದರು. ಹಾಗೆಯೇ ಸುತ್ತಮುತ್ತಲೂ ನಡೆಯುತ್ತಿರುವ ಮಾದಕ ವಸ್ತುಗಳ ಚಟುವಟಿಕೆಗಳ ಕುರಿತು...
ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಂಸ್ಥೆಯ ಬೆಳ್ಳಿ ಹಬ್ಬದ ಅಂಗವಾಗಿ ಲೋಗೋ ಅನಾವರಣ ಮಾಡುವುದರ ಮೂಲಕ ಈ ಶೈಕ್ಷಣಿಕ ವರ್ಷದಲ್ಲಿ ನಡೆಯಲಿರುವ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆಯನ್ನು ಜೂನ್ 20ರಂದು ಸಂಭ್ರಮ ಮತ್ತು ಶಿಸ್ತಿನೊಂದಿಗೆ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಂಸ್ಥೆಯ ಸಾಧನೆಗಳನ್ನು ಸ್ಮರಿಸುವ ವಿಶೇಷ ಕ್ಷಣವಾಗಿ ರೂಪುಗೊಂಡಿತು. ಕಾರ್ಯಕ್ರಮದ ಆರಂಭದಲ್ಲಿ ಗುತ್ತಿಗಾರಿನ ಸಿ.ಎಂ.ಸಿ...
ಸುಬ್ರಹ್ಮಣ್ಯ : “ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ. ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಸಮಚಿತ್ತ ಮತ್ತು ದೈಹಿಕ ಸಮತೋಲನಕ್ಕೆ ಯೋಗ ಅಸ್ತçವಾಗಿದೆ. ಏಕಾಗ್ರತೆಯೊಂದಿಗೆ ಮಾನಸಿಕ ಸದೃಢತೆ ಸಾಧಿಸಲು ಯೋಗ ಅಡಿಗಲ್ಲು. ಯೋಗದಿಂದ...
ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಚಾಲಕರಾದ ಸವಣೂರು ಕೆ.ಸೀತಾರಾಮ ರೈ ಯವರು ಉದ್ಘಾಟಿಸಿ ಮಾತಾನಾಡಿ, “ಯೋಗವು ದೇಹಕ್ಕೆ ಶಕ್ತಿ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಯೋಗವು ದೇಹದ ರೋಗವನ್ನು ದೂರ ಮಾಡುವ ಸಂಜೀವಿನಿ. ಯೋಗ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು. ನಿರಂತರ ಯೋಗ ಕೇಂದ್ರ ದಕ್ಷಿಣ ಕನ್ನಡ...
ಪತಂಜಲಿ ಯೋಗ ಸಮಿತಿ ಬೆಳ್ಳಾರೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಯೋಗ ತರಗತಿ ಉದ್ಘಾಟಿಸಿದರು. ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ ಮತ್ತು ಪ್ರಭಾ ಯೋಗ ತರಬೇತಿ ನೀಡಿದರು. ಉಪನ್ಯಾಸಕ ವಿಜೇತ್ ಸುವರ್ಣ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿ ಸಂಪ್ರೀತ್ ಉಪನ್ಯಾಸ ನೀಡಿದರು. ದೀಪಾ, ಅಮೃತ ಪ್ರಾತ್ಯಕ್ಷಿಕೆ ಮೂಲಕ ಯೋಗ ನಡೆಸಿಕೊಟ್ಟರು. ಶ್ರೀನಿವಾಸ್ ಸಹಕರಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಮಿಥಾಲಿ ಪಿ. ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ...
ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಸುಳ್ಯ ದಲ್ಲಿ ನೋ ಬ್ಯಾಗ್ ಡೇ (ಸಂಭ್ರಮ ಶನಿವಾರ) ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಗರ ಪಂಚಾಯತ್ ನ ವಿಕಲಚೇತನರ ಇಲಾಖೆಯ ಮೇಲ್ವಿಚಾರಕರು ಹಾಗೂ ಸಂಪನ್ಮೂಲ ವ್ಯಕ್ತಿ ಪ್ರವೀಣ್ ನಾಯಕ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ, ವ್ಯಕ್ತಿಗಳಿಗೆ ಸಿಗುವ ಸಕಲ ಸವಲತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು....
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವು ಸಂವಿಧಾನ ಗೀತೆಯ ಗಾಯನದೊಂದಿಗೆ ಗೌರವಯುತವಾಗಿ ಆರಂಭಗೊಂಡಿತು.ಕಾರ್ಯಕ್ರಮವನ್ನು ಸುಳ್ಯ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶ ಸಿ. ಚಿರಾಗ್ ಅವರು ಉದ್ಘಾಟಿಸಿದರು. ಶಾಲಾ ಪಾಲನಾ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕರುಣಾಕರ ಅವರು ಕಾರ್ಯಕ್ರಮದ...
ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ಮೊಬೈಲ್ ಆಪ್ ಮೂಲಕ ವಿದ್ಯಾರ್ಥಿ ಸರಕಾರವನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ಮುಖಾಂತರ ರಚನೆ ಮಾಡಲಾಯಿತು. ಶಾಲಾನಾಯಕನಾಗಿ 10ನೇ ತರಗತಿಯ ಸನತ್ ಬಿ.ಜೆ, ಉಪನಾಯಕನಾಗಿ 9ನೇ ತರಗತಿಯ ಜಿತನ್ ಕೆ.ವಿ ವಿರೋಧ ಪಕ್ಷದ ನಾಯಕನಾಗಿ ಆದರ್ಶ ಟಿ.ಎ(10) ಸಭಾಪತಿಯಾಗಿ ಆಕಾಶ್ ಪಿ.ಜಿ(10) ಆಯ್ಕೆಯಾದರು. ಸಾಂಸ್ಕೃತಿಕ ಮಂತ್ರಿಯಾಗಿ ರಕ್ಷಿತಾ(9), ಉಪ ಸಾಂಸ್ಕೃತಿಕ ಮಂತ್ರಿಯಾಗಿ ಧನುಷ್...
Loading posts...
All posts loaded
No more posts
