- Friday
- September 4th, 2026
ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಆಚರಣೆಯ ಕುರಿತು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಸೆ.03ರಂದು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ ರವರು “ಉತ್ಸವಾಚರಣೆಯಲ್ಲಿ ಡಿ.ಜೆಗೆ ಅವಕಾಶವಿಲ್ಲ, ಧಾರ್ಮಿಕತೆಗೆ ಒತ್ತು ನೀಡಿ ಆಚರಣೆ ಮಾಡಿ, ಪೋಲೀಸ್ ಇಲಾಖೆಯ ಸಹಕಾರ ಸದಾ ಇದೆ. ಹಬ್ಬಗಳನ್ನು ಭಕ್ತಿಯಿಂದ ಆಚರಿಸಿ, ಸಮಯಪಾಲನೆಗೆ ಹೆಚ್ಚಿನ ಆಧ್ಯತೆ ನೀಡಿ,...
ದಕ್ಷಿಣ ಕನ್ನಡ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ವತಿಯಿಂದ ಬಂದೂಕು ಪರವಾನಗಿ ಸಮಸ್ಯೆಗಳ ಕುರಿತು ಸೆ.05ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿರುವ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಅಮರ ಸುದ್ದಿಯೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬಂದೂಕು ಪರವಾನಗಿದಾರರ ಒಕ್ಕೂಟದ ಸಂಚಾಲಕರಾದ ಜಯಪ್ರಸಾದ್ ಜೋಶಿ ಬೆಳ್ಳಾರೆ ರವರು “ನಮ್ಮ ಜಿಲ್ಲೆಯಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಪವಲಯ ಅರಣ್ಯಾಧಿಕಾರಿ ಹಾಗೂ ಮೋಚಣಿದಾರರ ಸಂಘ ಮಂಗಳೂರು ಜಂಟಿಯಾಗಿ ದಿನಾಂಕ 01/09/2026ರಂದು ವನ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ 24x7 ತುರ್ತು ಚಿಕಿತ್ಸಾ ಘಟಕಕ್ಕೆ ಮಂಜೂರಾತಿ ದೊರೆತಿದ್ದರೂ ವೈದ್ಯಾಧಿಕಾರಿಗಳ ನೇಮಕವಾಗದಿರುವುದನ್ನು ಖಂಡಿಸಿ ಬುಧವಾರ ನಾಗರಿಕರು, ಭಕ್ತರು ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ 1 ಸಾವಿರ ಪತ್ರಗಳ ಚಳವಳಿ ನಡೆಯಿತು. ತುರ್ತು ಚಿಕಿತ್ಸಾ ಘಟಕಕ್ಕೆ ಈಗಾಗಲೇ ಮಂಜೂರಾತಿ ದೊರೆತಿದ್ದು, ವೈದ್ಯಾಧಿಕಾರಿಗಳ ನೇಮಕಕ್ಕಾಗಿ ಹಲವು ಬಾರಿ ಮನವಿ ಹಾಗೂ ಹೋರಾಟ ನಡೆಸಲಾಗಿದೆ. ಆದರೂ ಬೇಡಿಕೆ ಈಡೇರದ...
ಸುಬ್ರಹ್ಮಣ್ಯ: ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ.), ಸುಬ್ರಹ್ಮಣ್ಯ ವತಿಯಿಂದ 56ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಸೆ.14ರಿಂದ 20ರವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದ ರಥಬೀದಿಯಲ್ಲಿರುವ ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಉತ್ಸವದ ಅಂಗವಾಗಿ 108 ತೆಂಗಿನಕಾಯಿ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕಾಶಿಕಟ್ಟೆ ಮಹಾಗಣಪತಿ ದೇವಸ್ಥಾನದಲ್ಲಿ...
ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಕುಮಾರಧಾರ ದಲ್ಲಿ ನಡೆಯಿತು. ಗಿಡ ನಡುವ ಮೂಲಕ ವೃಕ್ಷಾರೋಪಣಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್.ಇಂಜಾಡಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಪ್ರಕೃತಿ ವಿಕೋಪ ತಡೆಯಲು ಹೆಚ್ಚಿನ ವೃಕ್ಷ ಸಂಪತ್ತು ಅತ್ಯಗತ್ಯ. ಸಂಘ...
ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಸ್ಥಾನಮಾನವೀದ್ದು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿರುವ ಆದಿ ಮೊಗೇರ್ಕಳ, ಕೊರಗಜ್ಜ, ಚಾಮುಂಡಿ ದೈವಸ್ಥಾನ ಹಾಗೂ ನಾಗನ ಕಟ್ಟೆ ಆವರಣದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಸುಮಾರು ಎಂಟು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ದೈವಸ್ಥಾನಗಳನ್ನು ಅಂದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದ ನಿತ್ಯಾನಂದ ಮುಂಡೋಡಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾಗಿದ್ದ ಶಿವರಾಮ...
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ, ಜಾಗತಿಕವಾಗಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುವಂತೆ "ಸರ್ವಶಕ್ತ ವಿದ್ಯಾರ್ಥಿ- ಸರ್ವಶಕ್ತ ಭಾರತ" ಎಂಬ ಸಂದೇಶದೊಂದಿಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯ ಹಾಗೂ iRiseProನ ಜಂಟಿ ಸಹಭಾಗಿತ್ವದೊಂದಿಗೆ " YASHHO-ವಿದ್ಯಾರ್ಥಿಗಳ ಕೌಶಲ ವಿಕಸನ ಕಾರ್ಯಗಾರ"ವು ಆರಂಭಗೊಂಡಿದೆ. ಕುಮಾರಸ್ವಾಮಿ ವಿದ್ಯಾಸಂಸ್ಥೆಯು ಯಶಸ್ವಿ 30ನೇ...
ಬೆಳ್ಳಾರೆ : ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಅಂತರ್ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10 ರಿಂದ 11.30ರವರೆಗೆ ಸ್ಪರ್ಧೆಯ ಅವಧಿ ನಿಗದಿಪಡಿಸಲಾಗಿದೆ. 1ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5ರಿಂದ 7ನೇ ತರಗತಿ ಹಾಗೂ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...
Loading posts...
All posts loaded
No more posts
