ಸುಬ್ರಹ್ಮಣ್ಯ : ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜುಲೈ 26 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಇಂದು ರವಿವಾರ ಕುಮಾರಧಾರ ಸ್ನಾನಘಟ್ಟ, ಸೇತುವೆ, ಹಾಗೂ ಕುಲ್ಕುಂದ ಕಾಲನಿವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಕುಮಾರಧಾರ ಸ್ಥಾನಗಟ್ಟದಲ್ಲಿ ಕ್ಷೇತ್ರಕ್ಕೆ ಬಂದ ಊರ ಹಾಗೂ ಪರವೂರ ಭಕ್ತರಿಗೆ ತೀರ್ಥ ಸ್ನಾನ ಮಾಡಲು ನದಿಯಲ್ಲಿ ಅವಕಾಶವಿಲ್ಲದೆ ಪಕ್ಕದಲ್ಲಿ...

ಮಳೆಯಲ್ಲೂ ಅಧಿಕ ಸಂಖ್ಯೆಯಲ್ಲಿ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು

ಸುಬ್ರಹ್ಮಣ್ಯ ಜುಲೈ 26 : ದಕ್ಷಿಣ ಭಾರತದ ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇಂದು ಜಿನಿಗುಟ್ಟುತ್ತಿರುವ ಮಳೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿರುತ್ತಾರೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಅತ್ಯಧಿಕ ಸಂಖ್ಯೆಯ ಭಕ್ತಾದಿಗಳು ಪ್ರಮುಖ ಸೇವೆಗಳಾದ ಸರ್ಪ ಸಂಸ್ಕಾರ,...
Ad Widget

ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನಲ್ಲಿ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಅರಿವು ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾಕೋಶ ಇದರ ಸಹಯೋಗದೊಂದಿಗೆ ಆ್ಯಂಟಿ ಡ್ರಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಜಂಟಿಯಾಗಿ ದಿನಾಂಕ ಜು.24ರಂದು ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ...

ಸುಬ್ರಹ್ಮಣ್ಯ : ಜು.29ರಂದು ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗಗಳ ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಮೆಸ್ಕಾಂ ಜನಸಂಪರ್ಕ ಸಭೆಯು ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ಜು.29ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ನಡೆಯಲಿದ್ದು, ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ದೂರವಾಣಿ ಮೂಲಕವೂ 08257-200699...

ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ; ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕ್ಯಾಮೆರಾ ಕಣ್ಗಾವಲು – ನೋಟೀಸ್ ಜಾರಿ…!!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲು ಪ್ರಾರಂಭಿಸಲಾಗಿದ್ದು, ಮೊದಲ ಹಂತವಾಗಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ...

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮಾಹಿತಿ ಕಾರ್ಯಾಗಾರ

ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ; ನಾಳೆ(ಜು.23) ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...

ಸುಬ್ರಹ್ಮಣ್ಯ : ಇನ್ನರ್ ವೀಲ್ ಕ್ಲಬ್ ಉದ್ಘಾಟನೆ

ಸುಬ್ರಹ್ಮಣ್ಯ ಜುಲೈ 21 : ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ರವಿವಾರ ಯೇನೇಕಲ್ಲಿನ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ರೋಹಿತ್ ಬಿ.ಬಿ ಅವರು ಮಾತನಾಡುತ್ತಾ "ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದ್ದಾರೆ. ರಾಷ್ಟ್ರದ...

ಕವನ : ಪ್ರಕೃತಿ ನಿಯಮ

ಸುರಿಯುವ ಮಳೆಗೆ ತಿಳಿದೀತೆ ತಾನು ಯಾವ ನದಿಯ ಸೇರುವೆ ಎಂದು...ಹರಿಯುವ ನದಿಗೆ ತಿಳಿದೀತೆ ತಾನು ಯಾವ ಸಮುದ್ರವ ತಲುಪುವೆ ಎಂದು...ಭೋರ್ಗರೆವ ಸಮುದ್ರಕ್ಕೆ ತಿಳಿದೀತೆ ತಾನು ಯಾವ ಸಾಗರವ ಸೇರುವೆ ಎಂದು, ಯಾರೊಡಲಿಗೆ ಸೇರಿ ಲೀನವಾಗುವೆ ಎಂದು...ಒಂದು ವೇಳೆ ತಿಳಿದಿದ್ದರೂ ಸಾಗುವವು ಅವು ಏನೂ ಅರಿಯದಂತೆ, ಪ್ರಕೃತಿ ನಿಯಮವ ಮೀರದಂತೆ...- ಉಲ್ಲಾಸ್ ಕಜ್ಜೋಡಿ

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿ

ಸುಬ್ರಹ್ಮಣ್ಯ, ಜುಲೈ 19 : ಪೊಲೀಸ್ ಇಲಾಖೆಗೆ ಸೇರಲು ಆಸಕ್ತಿ ಹೊಂದಿರುವ ಯುವಜನರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಉದ್ಘಾಟಿಸಿ ಮಾತನಾಡಿ, “ಪೊಲೀಸ್...
Loading posts...

All posts loaded

No more posts

error: Content is protected !!