- Tuesday
- April 1st, 2025

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ...

ಎಡಮಂಗಲ ಗ್ರಾಮದ ಜಾಲ್ತಾರು ಕೊಲ್ಲರ್ನೂಜಿ ಕುಟುಂಬದ ತರವಾಡು ಮನೆಯಲ್ಲಿ ಕೊಲ್ಲರ್ನೂಜಿ ಕುಟುಂಬಸ್ಥರ ಧರ್ಮದೈವ ಮತ್ತು ಉಪದೈವಗಳ ಧರ್ಮನಡಾವಳಿಯು ಮಾ.24 ಹಾಗೂ ಮಾ.25ರಂದು ಜರುಗಿತು. ಧರ್ಮನಡಾವಳಿಯ ಪ್ರಯುಕ್ತ ಮಾ.24ರಂದು ಬೆಳಗ್ಗೆ ಗಣಹೋಮ ನೆರವೇರಿತು. ಸಂಜೆ ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ಸತ್ಯದೇವತೆ, ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಧರ್ಮದೈವ ರುದ್ರಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01 ಶುಕ್ರವಾರ ಸೂರ್ಯೋದಯದಿಂದ ಮಾ.02 ಶನಿವಾರ ಸೂರ್ಯೋದಯದವರೆಗೆ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಹಾಗೂ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ.

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದ್ದು, ಜ.28ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ...

ಜ. 28ರಂದು ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನೆರವೇರಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಬಳಿಕ ಪರಿವಾರ ದೈವಗಳಾದ...

ಇಂದು ಸಂಜೆ ಜಾತ್ರೋತ್ಸವಕ್ಕೆ ವೈಭವದ ಹಸಿರುವಾಣಿ ಸಮರ್ಪಣೆ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಇಂದು ಆರಂಭಗೊಂಡಿದ್ದು, ಜ. 29ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಇಂದು(ಜ. 26) ಬೆಳಿಗ್ಗೆ ಕಳಂಜ...

ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....

All posts loaded
No more posts