Ad Widget

ಕೊಡಿಯಾಲ : ನಾಗರ ಪಂಚಮಿ ಆಚರಣೆ

ಕೊಡಿಯಾಲದ ಕಲ್ಲಗದ್ದೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಮಯ್ಯ ರವರ ನೇತೃತ್ವದಲ್ಲಿ ನಾಗನಿಗೆ ಹಾಲಾಭಿಷೇಕ, ಸಿಯಾಳಭಿಷೇಕ ಹಾಗೂ ನಾಗತಂಬಿಲ ಸೇವೆಗಳು ದೇವಾಲಯದ ಆಡಳಿತ ಮಂಡಳಿ ಹಾಗೂ ಊರ-ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.

ಪಂಜ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆಯ ಅಂಗವಾಗಿ ನಾಳೆ(ಜು.24) ಹಾಲೆ ಮರದ ಕಷಾಯ ವಿತರಣೆ

ಆಟಿ ಅಮಾವಾಸ್ಯೆ ಪ್ರಯುಕ್ತ ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಜು.24 ರಂದು ಮುಂಜಾನೆ ಶ್ರೀ ದೇವರಿಗೆ ಪೂಜೆ ನಡೆದ ಬಳಿಕ ಮುಂಜಾನೆ ಗಂಟೆ 8 ರಿಂದ ಭಕ್ತರಿಗೆ ವಿಶೇಷ ತೀರ್ಥವಾಗಿ ಹಾಲೆ ಮರದ ಕಷಾಯ ವಿತರಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad Widget

ಸುಬ್ರಹ್ಮಣ್ಯ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾಸಭೆ ; ನೂತನ ಪದಾಧಿಕಾರಿಗಳ ಆಯ್ಕೆ

55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಲಾವಿದರಾದ ಕೆ.ಯಜ್ಞೇಶ್ ಆಚಾರ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ 55ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಲಾವಿದರಾದ ಕೆ.ಯಜ್ಞೇಶ್ ಆಚಾರ್ ರವರು ಆಯ್ಕೆಗೊಂಡಿದ್ದಾರೆ.54ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೊಗ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.ನೂತನ ಸಮಿತಿಯ ಉಪಾಧ್ಯಕ್ಷರಾಗಿ ದಿನೇಶ್ ಸಂಪ್ಯಾಡಿ,...

ನಾಲ್ಕೂರು : ಉಜಿರಡ್ಕ ಕೊರಗಜ್ಜ ಸಾನಿಧ್ಯಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಭೇಟಿ

ನಾಲ್ಕೂರು ಗ್ರಾಮದ ಉಜಿರಡ್ಕ ಸ್ವಾಮಿ ಕೊರಗಜ್ಜ ಸಾನಿಧ್ಯಕ್ಕೆ ಜು.16 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ಭೇಟಿ ನೀಡಿ ದೈವದ ಆಶಿರ್ವಾದ ಪಡೆದರು.ಈ ಸಂದರ್ಭದಲ್ಲಿ ಸುರೇಶ್ ಉಜಿರಡ್ಕ ರವರು ಹರೀಶ್ ಇಂಜಾಡಿ ರವರನ್ನು ಗೌರವದಿಂದ ಬರಮಾಡಿಕೊಂಡರು.ಹರೀಶ್ ಇಂಜಾಡಿ ರವರು ಈ ಹಿಂದೆಯೂ ಕೂಡ ಸಾನಿಧ್ಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದ್ದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್

ಸ್ವಾಗತ ಕೋರಿದ ಅಧಿಕಾರಿಗಳು ಹಾಗೂ ಮುಖಂಡರು

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” : ಡಾ| ಜಿ.ಪರಮೇಶ್ವರ್

ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್ ಅವರು ಜು.08 ರಂದು ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ. ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ. ಇತ್ತೀಚೆಗೆ ನಡೆದ ಕಾನ್ಫರೆನ್ಸ್...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಜೂ.30) ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭ

ಶಂಕುಸ್ಥಾಪನೆ ನೆರವೇರಿಸಲಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ

(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...

ಕುಲ್ಕುಂದ : ಜು.23 ರಿಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮಿನಾರಾಯಣ ಹೃದಯ ಹೋಮ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಅಣತಿ ದೂರದಲ್ಲಿರುವ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜು.23 ರಿಂದ ಆಗಸ್ಟ್ 01 ರವರೆಗೆ ಭಕ್ತಾದಿಗಳ ಕ್ಷೇಮಕ್ಕಾಗಿ ಶ್ರೇಷ್ಠ ಫಲದಾಯಕವಾಗಿರುವ ಶ್ರೀ “ಲಕ್ಷ್ಮಿನಾರಾಯಣ ಹೃದಯ ಹೋಮ” ಹಾಗೂ ಜಪವನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳೆಲ್ಲರೂ ಅವರವರ ಆರ್ಥಿಕ ಸಂಕಷ್ಟ, ಆರೋಗ್ಯ ಪ್ರಾಪ್ತಿ, ಸಂತಾನ ಯೋಗ, ಉದ್ಯೋಗದ ತೊಂದರೆ...

ಕುಮಾರಧಾರ ನದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಕ್ಕೆ ಶ್ರೀ ದೇವಳದ ಅಧಿಕಾರಿಗಳು ಹಾಗೂ ನೌಕರರು

ಸುಬ್ರಹ್ಮಣ್ಯ ಮಾ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಹಾಗೂ ಪರಿಸರದ ಪ್ರದೇಶಗಳಲ್ಲಿ ವಿಪರೀತ ತ್ಯಾಜ್ಯ ವಸ್ತುಗಳನ್ನ ಭಕ್ತಾದಿಗಳು ಎಸೆದು ಇಡೀ ನೀರು ಹಾಗೂ ಪರಿಸರ ಮಲಿನಗೊಂಡಿರುತ್ತದೆ. ಶ್ರೀ ದೇವಳದ ವತಿಯಿಂದ ಅಲ್ಲಿಯ ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳಾದ ಬಟ್ಟೆ ಬರೆಗಳನ್ನ ತೆಗೆದರೂ ಮತ್ತೆ ಮತ್ತೆ ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನ ಬಿಡುವ ಚಾಳಿಯನ್ನು ಮುಂದುವರಿಸುತ್ತಿರುವುದು ಕೇದಕರ....

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಿಜ್ರಂಭಣೆಯ ದೈವಂಕಟ್ಟು ಮಹೋತ್ಸವ – ಕಣ್ತುಂಬಿಕೊಂಡ ಸಾವಿರಾರು ಭಕ್ತರು – ಮಹೋತ್ಸವ ಇಂದು ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಕಾಯರ್ತೋಡಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ. ವೆಂಕಪ್ಪ ಗೌಡ

ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ  ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ,  ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್  ಕಲ್ಮಡ್ಕ ...
Loading posts...

All posts loaded

No more posts

error: Content is protected !!