- Saturday
- July 25th, 2026
ಕರಿಕ್ಕಳ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಏ.24 ರಿಂದ ಮೇ.03 ರ ತನಕ ನಡೆಯಲಿದ್ದು, ಭರದಿಂದ ಅಭಿವೃದ್ದಿ ಕಾರ್ಯ ನಡೆಯುತ್ತಿದೆ. ಏ.29 ರಂದು ಪುನಃ ಪ್ರತಿಷ್ಠೆ ಹಾಗೂ ಮೇ.2 ರಂದು ಬ್ರಹ್ಮಕಲಶಾಭಿಷೇಕ ನಡೆಯಲಿದೆ.ಅಂದಾಜು 4 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ : ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸಂಬಂಧಿಸಿದಂತೆ ಚಾಮುಂಡಿಮೂಲೆಯಲ್ಲಿ ನಿರ್ಮಾಣಗೊಂಡಿರುವ ಚಾಮುಂಡಿ...
ಸುಳ್ಯದ ನಾವೂರಿನಲ್ಲಿರುವ ಕಲ್ಕುಡ ದೈವಸ್ಥಾನದಲ್ಲಿ ನೂತನವಾಗಿ ಶಿಲಾಮಯ ಗುಡಿ ನಿರ್ಮಾಣದ ಕಾರ್ಯವು ಜರುಗುತ್ತಿದ್ದು, ಇದರ ದಾರಂದ ಮುಹೂರ್ತ ಕಾರ್ಯವು ಎ.15ರಂದು ಬೆಳಿಗ್ಗೆ ನೆರವೇರಿತು.ದೈವಸ್ಥಾನದ ಆಡಳಿತ ಧರತಮದರ್ಶಿಗಳಾದ ಪಿ.ಕೆ ಉಮೇಶ್ ಅವರು ದೈವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಶಿಲ್ಪಿ ವಿಜಯ ಅವರ ನೇತೃತ್ವದಲ್ಲಿ ಶಿಲಾಮಯ ಗುಡಿಗೆ ದಾರಂದ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ...
ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏ.15ರಂದು ಪೂರ್ವಾಹ್ನ “ವಿಷುಕಣಿ ಪೂಜೆ” ನೆರವೇರಿತು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ವಿಷುಕಣಿ ವೀಕ್ಷಿಸಿ ಪ್ರಸಾದ ಸ್ವೀಕರಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)
ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಏ. 24 ರಿಂದ ಮೇ. 03 ರ ತನಕ ನಡೆಯಲಿದ್ದು, ಭರದ ಕಾರ್ಯ ನಡೆಯಿತ್ತಿದೆ. ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಗೊನೆ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಚಂದ್ರಪ್ರಕಾಶ್ ಕಂಬಳ, ಪುನರ್ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ನೇಮಿರಾಜ್ ಪಲ್ಲೋಡಿ,...
ಸುಳ್ಯದ ಶ್ರೀ ಗುರುರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕೋತ್ಸವವು ಎ.21 ಮತ್ತು 22ರಂದು ನಡೆಯಲಿದ್ದು, ಈ ಬಾರಿ “ಶ್ರೀ ಗುರುರಾಘವೇಂದ್ರಾನುಗ್ರಹ ಪ್ರಶಸ್ತಿ”ಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರಿಗೆ ಪ್ರದಾನ ಮಾಡಲಾಗುವುದು. ಎಂದು ಶ್ರೀ ಗುರುರಾಘವೇಂದ್ರ ಮಠದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ....
ಅಜ್ಜಾವರ ಗ್ರಾಮದ ಮೆದಿನಡ್ಕ ಮುತ್ತುಮಾರಿಯಮ್ಮ ದೇವಾಲಯದಲ್ಲಿ ರೂ 3.50ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ನೆಲಹಾಸು(ಇಂಟರ್ ಲಾಕ್) ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಭೋದ್ ಶೆಟ್ಟಿ ಮೇನಾಲ, ರಾಜೇಶ್ ರೈ ಮೇನಾಲ, ವಿಕ್ರಂ ಅಡ್ಪಂಗಾಯ, ವಸಂತ ನಡುಬೈಲು, ಕಿಟ್ಟಣ್ಣ ರೈ ಮೇನಾಲ, ನಯನ ರೈ ಮೇನಾಲ, ಚಂದ್ರಶೇಖರ ಕೇರ್ಪಳ, ಚಂದ್ರಶೇಖರ ನೆಡಿಲು, ದೇವಸ್ಥಾನದ ಅಧ್ಯಕ್ಷರಾದ...
ಕುಲ್ಕುಂದ ಶ್ರೀ ಕ್ಷೇತ್ರ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ಆದಿತ್ಯವಾರದಿಂದ ಏ.20 ಸೋಮವಾರದವರೆಗೆ “ವಾರ್ಷಿಕ ಜಾತ್ರಾ ಮಹೋತ್ಸವ”ವು ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಏ.13ರಂದು ಗೊನೆ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು, ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ, ಜಾತ್ರೋತ್ಸವ ಸಮಿತಿ ಹಾಗೂ ಎಲ್ಲಾ ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಏ.15 ಬುಧವಾರದಂದು “ವಿಷು ಸಮಾರಾಧನೆ ಹಾಗೂ ಬಲಿವಾಡು ಕೂಟ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಯಿಂದ “ಸಾಮೂಹಿಕ ಶನಿಪೂಜೆ” ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)
ಭಕ್ತರ ಸಕಲ ಇಷ್ಟಾರ್ಥಗಳನ್ನು ಪೂರೈಸುವ ಮಹಿಮಾತ್ಮಕ ಕ್ಷೇತ್ರ ನಿಡ್ವಾಳದ ಮಹಾವಿಷ್ಣು ದೇವಸ್ಥಾನವು ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗುತ್ತಿದೆ. ಎ.24ರಿಂದ ಮೇ.03ರ ತನಕ ಕ್ಷೇತ್ರದಲ್ಲಿ ಉತ್ಸವ ನಡೆಯಲಿದೆ. ಇದೀಗ ಸಕಲ ಭಕ್ತರ ಸಹಕಾರದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರದ ಅಂತಿಮ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಸುಳ್ಯ ತಾಲೂಕು, ಐವತ್ತೊಕ್ಲು ಗ್ರಾಮದ ನಿಡ್ವಾಳ ಎಂಬಲ್ಲಿ ಪ್ರಕೃತಿಯ ಮಡಿಲಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನವು ನೂರಾರು...
ಸುಬ್ರಹ್ಮಣ್ಯ ಏಪ್ರಿಲ್ 06: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದರು.ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ, ತಾಯಿ ರತ್ನಾವತಿ ಹಾಗೂ ಕುಟುಂಬದವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧಿಕಾರಿಗಳು ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಕುಕ್ಕೆ...
Loading posts...
All posts loaded
No more posts
