Ad Widget

ಮಂಡೆಕೋಲು : ಮನೆಯೊಳಗೆ ಕುಸಿದು ಬಿದ್ದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ !!

ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ‌ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು...

ಬೆಳ್ಳಾರೆಯಲ್ಲಿ ಸಾರ್ವಜನಿಕ ರುದ್ರಭೂಮಿ ನಿರ್ಮಿಸಲು ಜನರ ಆಗ್ರಹ – ಸರಕಾರದಿಂದ ಮಂಜೂರಾದ 30 ಲಕ್ಷ ಅನುದಾನಕ್ಕೆ ಅಡ್ಡಗಾಲು – ಲಕ್ಷಾಂತರ ಹಣ ದುರುಪಯೋಗ ಆಗಿದೆಯೇ?

ಸುಳ್ಯ ತಾಲೂಕಿನಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಪೇಟೆಗಳಲ್ಲಿ ಬೆಳ್ಳಾರೆಯೂ ಒಂದು. ಇಲ್ಲಿ ವ್ಯವಸ್ಥಿತ ರುದ್ರಭೂಮಿ ಮರೀಚಿಕೆಯಾಗಿಯೇ ಉಳಿದಿದ್ದು, ಆಡಳಿತ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆ ಕಂದಾಯ ಇಲಾಖೆಯು ಸುಮಾರು 84 ಸೆಂಟ್ಸ್ ಜಾಗ ಮಂಜೂರು ಗೊಳಿಸಿದ್ದು ಇದರ ಅಭಿವೃದ್ಧಿಗಾಗಿ ಈಗಾಗಲೇ ಲಕ್ಷಾಂತರ ಹಣ ವ್ಯಯಿಸಲಾಗಿದೆ. ಲಕ್ಷಾಂತರ ಖರ್ಚು ಮಾಡಿ ಅವೈಜ್ಞಾನಿಕ ರೀತಿಯಲ್ಲಿ...
Ad Widget

ಅಮರ ಸುಳ್ಯ ಸುದ್ದಿ ಯುಗಾದಿ ವಿಶೇಷಾಂಕ ಬಿಡುಗಡೆ , ಮಾಧ್ಯಮ ಕ್ಷೇತ್ರದಲ್ಲಿ ಜನಪರವಾಗಿ ಇನ್ನಷ್ಟು ಕಾಳಜಿ ಮತ್ತು ಎಚ್ಚರಿಸಬೇಕಾದ ನೈಜವರದಿಗಳು ಪ್ರಕಟವಾಗಲಿ – ಜಿ ಮಂಜುನಾಥ್.

ಸುಳ್ಯದ ಜನಪರ ಪತ್ರಿಕೆಯಾಗಿ ಕಳೆದ 13 ವರ್ಷಗಳಿಂದಕಾರ್ಯನಿರ್ವಹಿಸುತ್ತಿರುವ ಅಮರ ಸುಳ್ಯ ಸುದ್ದಿ ಪತ್ರಿಕೆಯ ಮೂರನೇ ಆವೃತ್ತಿಯ ಯುಗಾದಿ ವಿಶೇಷಾಂಕವನ್ನು ಸುಳ್ಯ ತಾಲೂಕು ದಂಢಾಧಿಕಾರಿಗಳಾದ ಜಿ ಮಂಜುನಾಥ್ ಲೋಕಾರ್ಪಣೆ ಗೊಳಿಸಿದರು . ಅಮರ ಸುದ್ದಿಯು ಪಕ್ಷ , ಜಾತಿ ಮತ ಭೇದವಿಲ್ಲದೆ ಸಮಾಜದ ಕೈ ಗನ್ನಡಿಯಾಗಿ ನಿರಂತರವಾಗಿ ಮೂಡಿ ಬರುತ್ತಿದ್ದು ಸುಳ್ಯ ತಾಲೂಕು ಕಛೇರಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮವನ್ನು...

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ಫೆ.01: ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...

ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ,ಧ್ವಜಾವರೋಹಣ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ...

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ರಥೋತ್ಸವ ಕಣ್ತುಂಬಿಕೊಂಡು ಪುಳಕಿತರಾದ ಸಹಸ್ರ ಸಹಸ್ರ ಭಕ್ತಾದಿಗಳು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು(ಜ.19) ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ನಡೆಯಿತು. ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು...

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ವೈಭವದ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...

ಪೆರುವಾಜೆ ಜಾತ್ರೋತ್ಸವ: ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...
Loading posts...

All posts loaded

No more posts

error: Content is protected !!