- Monday
- September 7th, 2026
ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಯಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ...
ನಮ್ಮ ದೇಶ ಕಂಡಂತಹ ಅತ್ಯಂತ ಸಂಭಾವಿತ, ಸರಳ, ಸಜ್ಜನ ತತ್ವಜ್ಞಾನಿ ಶ್ರೀ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5 ರಂದು ದೇಶದೆಲ್ಲೆಡೆ ‘ಶಿಕ್ಷಕರ ದಿನಾಚರಣೆ’ ಆಚರಿಸಲಾಗುತ್ತಿದೆ. 1962 ರಲ್ಲಿ ಅವರು ನಮ್ಮ ದೇಶದ ಎರಡನೇ ರಾಷ್ಟ್ರಪತಿಯಾದಾಗ ಅವರ ಹಿತೈಷಿಗಳು, ಸ್ನೇಹಿತರು ಮತ್ತು ಶಿಷ್ಯಂದಿರು ಅವರಲ್ಲಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ಭಿನ್ನವಿಸಿಕೊಂಡಾಗ ನಯವಾಗಿ ತಿರಸ್ಕರಿಸಿ,...
ಸುರಿದ ಮಳೆ ಹನಿಗೂ ತಿಳಿಯಲಾಗಲಿಲ್ಲ ತಾನೇಕೆ ಆಗಸವ ಬಿಟ್ಟು ಭೂಮಿಗೆ ಬಂದೆ ಎಂದು, ಮಣ್ಣಿಗೆ ಸೇರಿದೆ ಎಂದು, ಅರಿಯುವಷ್ಟರಲ್ಲಿ ಆರಿ ಹೋಯಿತು ಇಂಗಿ ಮಣ್ಣ ಸೇರಿತು ಇಂದು, ಆದರೂ ಅದು ಮಣ್ಣಲ್ಲಿ ಸೇರಲು ಕಾರಣವೂ ಇತ್ತು ಒಂದು, ಆ ಕಾರಣವು ಅದಕ್ಕರಿವಿಲ್ಲದೇ ಪೂರ್ಣವಾಯಿತು ಇಂದು...ಹಾರಿದ ದೂಳಿನ ಕಣಕ್ಕೂ ಅರಿಯಲಾಗಲಿಲ್ಲ ತಾನೇಕೆ ಹಾರಿದೆ ಎಂದು, ಭುವಿಯ ಬಿಟ್ಟು...
“ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂಬ ಗಾದೆ ಮಾತಿದೆ. ಇಂದು ಈ ಗಾದೆಮಾತು ಅದೇಕೋ ಅಡಿಕೆ ಬೆಳೆಯನ್ನು ಮುಖ್ಯ ಬೆಳೆಯನ್ನಾಗಿ ಹಾಗೂ ತೆಂಗು, ಬಾಳೆ, ಕಾಳುಮೆಣಸು, ಕೊಕ್ಕೊ ಹಾಗೂ ರಬ್ಬರ್ ಸೇರಿದಂತೆ ಇನ್ನಿತರ ಕೆಲವು ಬೆಳೆಗಳನ್ನು ಉಪಬೆಳೆಗಳಾಗಿ ಬೆಳೆಯುತ್ತಿರುವ, ಇದರಿಂದಲೇ ತಮ್ಮ ಬದುಕನ್ನು ನಡೆಸುತ್ತಿರುವ ಸುಳ್ಯ ತಾಲೂಕಿನ ಕೃಷಿಕರ ಬದುಕಿನಲ್ಲಿ ನಿಜವಾಗುತ್ತಿದೆ ಎಂದೆನಿಸುತ್ತಿದೆ. ಏಕೆಂದರೆ...
ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
ಆಗಸ್ಟ್ 13 ನ್ನು ವಿಶ್ವದಾದ್ಯಂತ “ಆಂಗಾಂಗ ದಾನಿಗಳ” ಎಂದು ಆಚರಿಸಲಾಗುತ್ತಿದೆ. ಆಂಗಾಂಗ ದಾನವನ್ನು ಪ್ರಚೋದಿಸಲು ಮತ್ತು ಪ್ರೇರೇಪಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ. ವಿಪರ್ಯಾಸದ ವಿಷಯವೆಂದರೆ 140 ಕೋಟಿಗೂ ಜಾಸ್ತಿ ಜನ ಸಂಖ್ಯೆ ಇರುವ ಭಾರತ ದೇಶದಲ್ಲಿ ಲಕ್ಷಾಂತರ ಮಂದಿಗೆ ಮೂತ್ರಪಿಂಡ, ಯಕೃತ್, ಹೃದಯ, ಪಿತ್ತಜನಾಕಾಂಗ ಮತ್ತು ಶ್ವಾಸಕೋಶಗಳ ತುರ್ತು ಅಗತ್ಯ ಇದೆ. ನಮ್ಮ ಬೃಹತ್...
ಪ್ರತಿ ದೇಶವೂ ತಮ್ಮದೇ ಆದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನ ಹೊಂದಿದೆ. ನಮ್ಮ ಭಾರತ ದೇಶವೂ ಅದಕ್ಕೆ ಹೊರತಲ್ಲ. ನಮ್ಮ ರಾಷ್ಟ್ರಗೀತೆ ಜನಗಣಮನ, ರಾಷ್ಟ್ರ ಲಾಂಛನ ಅಶೋಕಚಕ್ರ ಮತ್ತು ರಾಷ್ಟ್ರಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕೂಡಿದ ತ್ರಿವರ್ಣ ಪತಾಕೆ ಆಗಿರುತ್ತದೆ.ರಾಷ್ಟ್ರಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿದ್ದು, ಎಲ್ಲರೂ ಅದನ್ನು ಗೌರವಿಸಲೇಬೇಕು. ರಾಷ್ಟ್ರಧ್ವಜಕ್ಕೆ ಅಪಮಾನವಾದರೆ ದೇಶಕ್ಕೆ...
ಪ್ರತೀ ವರ್ಷ ಆಗಸ್ಟ್ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ....
ಮನುಷ್ಯ ತನ್ನ ಜೀವನದಲ್ಲಿ ಹೇಗೆ ತನ್ನ ಬದುಕನ್ನು ರೂಪಿಸಿಕೊಳ್ಳಬೇಕು ಎಂಬುವುದು ಒಬ್ಬ ಕವಿಹೃದಯವಿರುವ ವ್ಯಕ್ತಿಯಲ್ಲಿ ವಿಶಾಲವಾದ ಮನೋಸ್ಥೈರ್ಯ ಹಾಗೂ ಆಶಾವಾದವನ್ನು ಹುಟ್ಟುಹಾಕುತ್ತದೆ. ಬದುಕು ಮೂರು ದಿನದ ಸಂತೆಯಾದರೂ ನಗುನಗುತ್ತಾ ಕಳೆಯುವುದೇ ಒಂದು ಉತ್ಸಾಹ ತುಂಬಿದ ಬದುಕಿಗೆ ಪ್ರೇರಣೆ. ತಾನೂ ಬದುಕಿ ಇತರರನ್ನೂ ಜೀವನೋತ್ಸಾಹದ ಹಾದಿಯಲ್ಲಿ ಬೆಸೆಯುವುದು ಜೀವತುಂಬಿದ ಬದುಕು ಎನಿಸುವುದು. ಇಂತಹ ಬದುಕಿಗೆ ಸ್ಫೂರ್ತಿಯ ಚಿಲುಮೆ...
ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...
Loading posts...
All posts loaded
No more posts
