“ವಿದ್ಯಾರ್ಥಿ ಸಂಘ ಚುನಾವಣೆ ಪುನರಾರಂಭಕ್ಕೆ ಸರ್ಕಾರದ ನಿರ್ಧಾರ ಸ್ವಾಗತಾರ್ಹ” : ಕೀರ್ತನ್ ಗೌಡ ಕೊಡಪಾಲ

“ರಾಜ್ಯದ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿ ಸಂಘ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ದೀರ್ಘ ಅವಧಿಯ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಪುನರಾರಂಭಿಸುವ ಸರ್ಕಾರದ ಈ ಕ್ರಮ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಆಶ್ಲೇಷ ಬಲಿ ಹಾಗೂ ತುಲಾಭಾರ ಸೇವೆ

ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು

ಭಾರತ ಸರಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರು ಮಾ.01 ರವಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4:00 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿ.ವಿ.ಐ.ಪಿ ಅತಿಥಿಗೃಹಕ್ಕೆ ಬಂದರು. ಈ ಸಂಧರ್ಭದಲ್ಲಿ ಶ್ರೀ ದೇವಳದ...

ಅಮುಕ್ತದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ.ಕೆ.ವಿ ಕರಂಗಲ್ಲು

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘ(ಅಮುಕ್ತ)ದ ಅಧ್ಯಕ್ಷರಾಗಿ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಡಾ. ಪುರುಷೋತ್ತಮ.ಕೆ.ವಿ ಕರಂಗಲ್ಲು ರವರು ಆಯ್ಕೆಯಾಗಿದ್ದಾರೆ.ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಡಾ. ಎಸ್.ಎ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆದ 39ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.ಮಂಗಳೂರಿನ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪುರುಷೋತ್ತಮ.ಕೆ.ವಿ ರವರು ಈ ಹಿಂದೆ ಎರಡು ಅವಧಿಗೆ...

ಲೇಖನ : “ಬಂಗಾರ” ಜನಸಾಮಾನ್ಯರ ಪಾಲಿಗೆ “ಬಲುಭಾರ”

ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...

“ಕೇಂದ್ರದಲ್ಲಿ ಆಡಳಿತ ಕೈತಪ್ಪಿದ  ಹತಾಶ ಮನೋಭಾವದಲ್ಲಿರುವ  ಕಾಂಗ್ರೆಸ್ಸಿನಿಂದ ನಿರಂತರ ಸುಳ್ಳು ಅಪಪ್ರಚಾರ” ; “ಮಹಾತ್ಮಾ ಗಾಂಧೀಜಿ ಅವರ ಕನಸು ನನಸು ಮಾಡುವ ಕಾಂಗ್ರೆಸ್ ಕರ್ನಾಟಕವನ್ನು  ಕುಡುಕರ ರಾಜ್ಯವಾಗಿಸಿದೆ” ; ಕಾಂಗ್ರೆಸ್ ಸಂಗ್ರಾಮ್ ಪಾದಯಾತ್ರೆ ವಿರುದ್ಧ ಬಿಜೆಪಿ  ಎಂ.ಎಲ್.ಸಿ. ಪ್ರತಾಪ್ ಸಿಂಹ ನಾಯಕ್ ಪತ್ರಿಕಾಗೋಷ್ಠಿ

“ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2047ರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ಉದ್ಯೋಗ ಖಾತರಿ ಯೋಜನೆಯ ಹೆಸರು ಬದಲಾಯಿಸಿ ವಿಬ್ ಜಿ ರಾಮ್ ಜಿ ಯೋಜನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಇದರ ಸತ್ಯಾಸತ್ಯತೆಯನ್ನು ಅರಿಯದೇ, ಜನರ ದಿಕ್ಕಿ ತಪ್ಪಿಸುವ ನಿಟ್ಟಿನಲ್ಲಿ ಪಾದಯಾತ್ರೆ ಮಾಡುತ್ತಿದೆ. ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ಸೋತು ಕಂಗಾಲಾಗಿರುವ ಕಾಂಗ್ರೆಸ್ ಹತಾಶ ಮನೋಭಾವದಿಂದ ಕೇಂದ್ರದಲ್ಲಿ...

ಕುಕ್ಕೆ ಸುಬ್ರಹ್ಮಣ್ಯ : ಮಾ.03 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.03 ಮಂಗಳವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದ್ದು, ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಪಸಂಸ್ಕಾರ ಪ್ರಾರಂಭ ಇಲ್ಲ : ಮಾ.02 ಸೋಮವಾರ ಮತ್ತು ಮಾ.03 ಮಂಗಳವಾರದಂದು ಸರ್ಪಸಂಸ್ಕಾರ ಪೂಜೆ ಪ್ರಾರಂಭವಿರುವುದಿಲ್ಲ. ಮಾ.03ರಂದು ಯಾವುದೇ ಸೇವೆಗಳು...

ಮಂಗಳೂರು : ಎಂ.ಎಸ್‌.ಇ.ಜೆಡ್.ಎಲ್ ವತಿಯಿಂದ ವಿಶೇಷ ಚೇತನರಿಗೆ ಅತ್ಯಾಧುನಿಕ ವೀಲ್‌ಚೇರ್‌ಗಳ ವಿತರಣೆ

ಮಂಗಳೂರು : ವಿಶೇಷ ಚೇತನರಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್ ಸಹಿತ ಅಗತ್ಯ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಇಂದು ನಡೆಯಿತು. ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಶೇಷ ಚೇತನ ಫಲಾನುಭವಿಗಳಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್‌ಗಳು ಹಾಗೂ ಇತರ ಸಾಧನಗಳನ್ನು ವಿತರಿಸಿದ್ದಾರೆ. ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್...

ವಿದ್ಯಾರ್ಥಿಗಳ ಬಸ್ ಪಾಸ್ ಸೌಲಭ್ಯ 60 ರಿಂದ 100 ಕಿಲೋಮೀಟರ್‌ಗೆ ವಿಸ್ತರಿಸುವಂತೆ ಸಾರಿಗೆ ಸಚಿವರಿಗೆ ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ ಮನವಿ

ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು 60 ಕಿ.ಮೀ ವರೆಗೆ ಉಚಿತ ಬಸ್ ಪಾಸ್ ಸೌಲಭ್ಯ ವಿರುತ್ತದೆ, ಹಲವಾರು ವರ್ಷ ಗಳ ಹಿಂದೆ 50 ಕಿ.ಮೀ ಗಳಿಂದ 60 ಕಿ.ಮೀ ವರೆಗೆ ವಿಸ್ತರಿಸಿದ್ದು, ಆನಂತರ ಪರಿಷ್ಕರಣೆ ಮಾಡಿರುವುದಿಲ್ಲ. ಜಿಲ್ಲಾ ಕೇಂದ್ರಗಳಲ್ಲಿ ಅಗತ್ಯ ಹಾಸ್ಟೆಲ್ ಸೌಲಭ್ಯ ಇಲ್ಲದೇ ಇರುವುದರಿಂದ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವುದು ಕಷ್ಟಕರವಾಗಿದೆ. ವಿಶೇಷ...

“ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ” : ಡಾ. ಡಿ.ವೀರೇಂದ್ರ ಹೆಗ್ಗಡೆ

ಕಾಸರಗೋಡು : “ಯಕ್ಷಗಾನ ಬೊಂಬೆಯಾಟವೂ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ. ಈ ನಿಟ್ಟಿನಲ್ಲಿ ಮಾದರಿ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿರುವ ಕಾಸರಗೋಡಿನ ಕೆ.ವಿ. ರಮೇಶ ಅಭಿನಂದನಾರ್ಹರು” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನೂತನ ಅಭಿಯಾನವಾದ 'ಗಣ್ಯರೆಡೆಗೆ ಬೊಂಬೆ...
Loading posts...

All posts loaded

No more posts

error: Content is protected !!