ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಜಾತ್ರಾ ಮಹೋತ್ಸವ – ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ವೈಭವದ ಚಂಪಾಷಷ್ಠಿ ಬ್ರಹ್ಮರಥೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ಶ್ರೀ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಬ್ರಹ್ಮರಥೋತ್ಸವ ಜರುಗಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವ ಕ್ಷೇತ್ರದ ವಿಶೇಷತೆಗಳು

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16 ರಿಂದ ಆರಂಭವಾಗಿ ಡಿಸೆಂಬರ್ 02ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರು ಚಂಪಾಷಷ್ಠಿ ಮಹಾ ರಥೋತ್ಸವದಲ್ಲಿ ಬ್ರಹ್ಮರಥ ಏರಿ ನೆರೆದ ಲಕ್ಷಾಂತರ ಭಕ್ತರನ್ನು ಹರಸುವರು.ಕ್ಷೇತ್ರದ ವಿಶೇಷತೆಗಳು - 1) ಮೂಲ ಮೃತ್ತಿಕೆ ಪ್ರಸಾದ : ವರ್ಷಕ್ಕೊಮ್ಮೆ...
Ad Widget

ಬಾಳುಗೋಡು : “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ; ಸಾರ್ವಜನಿಕರೊಂದಿಗೆ ಸಂವಾದ-ಅಹವಾಲು ಸ್ವೀಕಾರ ; ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಕೆ ; ಇಬ್ಬರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಮುಚ್ಚಾರ ಬೆಟ್ಟುಮಕ್ಕಿ ದಿ| ತಮ್ಮಯ್ಯ ಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ...

ನಾಳೆ(ನ.20) ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಾಳುಗೋಡು, ಕಲ್ಮಕಾರು ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ನಾಳೆ(ನ.20) ಬಾಳುಗೋಡು, ಕಲ್ಮಕಾರು ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 11:30ಕ್ಕೆ ಬಾಳುಗೋಡು, ಮದ್ಯಾಹ್ನ 3:00 ಗಂಟೆಗೆ ಕಲ್ಮಕಾರು ಹಾಗೂ ಸಂಜೆ 4:50ಕ್ಕೆ ಕೊಲ್ಲಮೊಗ್ರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು...

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ, ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ,...

ವಳಲಂಬೆ : ಕನ್ನಡದ ಕಂಪನ್ನು ಪಸರಿಸಿದ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” – ಕೃತಿ ಬಿಡುಗಡೆ, ವಿಚಾರಗೋಷ್ಠಿ, ಗೀತ ಗಾಯನ, ವಿದ್ಯಾರ್ಥಿ ಕವಿಗೋಷ್ಠಿ ; ಸಮಾರೋಪ ಸಮಾರಂಭದಲ್ಲಿ ಅಮರ ಸುದ್ದಿ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಸೇರಿದಂತೆ ಹಲವು ಸಾಧಕರಿಗೆ “ಸಿರಿಗನ್ನಡ ಸನ್ಮಾನ”

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇವುಗಳ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ”ವು ಯಶಸ್ವಿಯಾಗಿ ನೆರವೇರಿ ಕನ್ನಡದ ಕಂಪನ್ನು ಪಸರಿಸಿತು. ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ...

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ನ.16) ಕೊಪ್ಪರಿಗೆ ಏರುವುದರೊಂದಿಗೆ ಚಂಪಾ ಷಷ್ಠಿ ಮಹೋತ್ಸವಕ್ಕೆ ಚಾಲನೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೆ ನಾಳೆ(ನ.16) ಚಾಲನೆ ದೊರೆಯಲಿದ್ದು, ನಾಳೆ ಬೆಳಿಗ್ಗೆ 8:10ರ ವೃಶ್ಚಿಕ ಲಗ್ನದ ಶುಭ ಮುಹೂರ್ತದಲ್ಲಿ ರಾಮ-ಲಕ್ಷ್ಮಣ ಕೊಪ್ಪರಿಗೆ ಏರುವುದರೊಂದಿಗೆ ಚಾಲನೆ ದೊರೆಯಲಿದೆ.

ಸ್ವರ್ಣೋದ್ಯಮಿ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್‌ ಆಚಾರ್ಯ ಅವರ 101ನೇ ಜನ್ಮದಿನಾಚರಣೆ ಪ್ರಯುಕ್ತ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್ ಕೊಡುಗೆ

ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್‌. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು. ಈ ಸವಿನೆನಪಿಗಾಗಿ ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಆಶ್ರಮದ 20 ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ...

“ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...

ವಳಲಂಬೆ : ನ.16 ರಂದು “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” – ಸಮ್ಮೇಳನಾಧ್ಯಕ್ಷರಾಗಿ ಎ.ಕೆ ಹಿಮಕರ – ಕೃತಿ ಬಿಡುಗಡೆ, ವಿಚಾರಗೋಷ್ಠಿ, ಗೀತ ಗಾಯನ, ವಿದ್ಯಾರ್ಥಿ ಕವಿಗೋಷ್ಠಿ ಹಾಗೂ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಹಾಗೂ ಸಮಾಜ ಸೇವಾ ತಂಡಗಳಿಗೆ “ಸಿರಿಗನ್ನಡ ಸನ್ಮಾನ”

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.ಪೂರ್ವಾಹ್ನ 9:00 ಗಂಟೆಗೆ ಶ್ರೀ...
Loading posts...

All posts loaded

No more posts

error: Content is protected !!