- Monday
- June 8th, 2026
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...
ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿ ಕೂಸಪ್ಪ ಗೌಡ ಮುಗುಪ್ಪು ಇವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿಣಿಯಿಂದ ಇವರು ನಿಯುಕ್ತಿಗೊಂಡಿದ್ದಾರೆ.ಇವರು ಬಿಜೆಪಿಯ ತಾಲೂಕು ರೈತ ಮೋರ್ಚಾದ ಅಧ್ಯಕ್ಷರಾಗಿ,ಜಿಲ್ಲಾ ಕಾರ್ಯದರ್ಶಿಯಾಗಿ, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿರುವ ಇವರು ಪ್ರಸ್ತುತ ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ...
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ನ.09 ರಂದು ನಡೆಯಿತು. ಈ ಚುನಾವಣೆಯಲ್ಲಿ ಸುಳ್ಯದ ಮೂವರು ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಕಲ್ಲಪಳ್ಳಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಜೆ ಗಿರೀಶ್ ಅಡ್ಪಂಗಾಯ ಹಾಗೂ ಹರೀಶ್ ಮೋಟುಕಾನ ಸ್ಪರ್ಧಿಸಿದ್ದರು. ನ.9 ರಂದು ಮಂಗಳೂರಿನ ವಾರ್ತಾ ಇಲಾಖೆಯ ಭವನದಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ ಗಿರೀಶ್...
ಸುಳ್ಯ ತಾಲೂಕು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ಇಲ್ಲಿ ಆಂಗ್ಲ ಮಾಧ್ಯಮ ತರಗತಿಯ ಮಕ್ಕಳಿಗೆ ಕುಳಿತುಕೊಳ್ಳಲು ಆಕರ್ಷಣೀಯ ಪೀಠೋಪಕರಣ ಖರೀದಿಸಲು ಕ್ಯಾಂಪ್ಕೋ ಸಂಸ್ಥೆ ಸಾಮಾನ್ಯ ಉತ್ತಮ ನಿಧಿ ಯೋಜನೆ(Camco Good Found)ಯಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರ ಮುತುವರ್ಜಿಯಲ್ಲಿ 1 ಲಕ್ಷ ಅನುದಾನವನ್ನು ನೀಡಿರುತ್ತಾರೆ.ಈ ಬಗ್ಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುದರ್ಶನ್...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು, ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ನಡೆಯಲಿದೆ. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.2024ನೇ ಸಾಲಿನ ಪ್ರಶಸ್ತಿಗೆ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಪೂರ್ವಭಾವಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ(ನ.05) ಶ್ರೀ ದೇವಳದ ಸಭಾಂಗಣದಲ್ಲಿ ನಡೆಯಲಿದೆ.ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು,...
ಸುಬ್ರಹ್ಮಣ್ಯ ನ.02 : “ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಆಡಳಿತವು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದ್ದು, ಜನ ಪರದಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದರು.“ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಕುರ್ಚಿಗಾಗಿ ಪೈಪೋಟಿ ಬಹಿರಂಗವಾಗಿ ನಡೆಯುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅವರಷ್ಟೇ ಅಲ್ಲ, ನನಗೆ ಗೊತ್ತಿರುವ ಪ್ರಕಾರ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಮೂರನೇ ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ 01.11.25 ಶನಿವಾರ ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಶುಚಿಗೊಳಿಸಿ ಹಾಗೂ ಸೊಸೈಟಿ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು...
ಸಕಲೇಶಪುರ ತಾಲೂಕಿನ ವನಂಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಬಿಸಿಲೆ ಘಾಟ್ ಸಮೀಪ 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಇಂದು(ಅ.30) ಬೆಳಿಗ್ಗೆ ನಡೆದಿದ್ದು, ಒಟ್ಟು ಸುಮಾರು 30 ಮಂದಿ ವ್ಯಾನ್ ನಲ್ಲಿ ಇದ್ದು, 20 ಮಂದಿ ಗಾಯಗೊಂಡಿದ್ದು, ಅದರಲ್ಲಿ 07 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು,...
Loading posts...
All posts loaded
No more posts
