“ಭೂತಾನ್‌, ಮಯನ್ಮಾರ್‌, ಶ್ರೀಲಂಕಾದಿಂದ ಕಳಪೆ ಮಟ್ಟದ ಅಡಿಕೆ ಆಮದಿಗೆ ಕಡಿವಾಣ ಹಾಕಿ”

ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ

ಮಂಗಳೂರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್‌ಡಬ್ಲ್ಯುಬಿಸಿಐಎಸ್‌)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ...
Ad Widget

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ – ಕೆ.ಆರ್ ಗಂಗಾಧರ, ಡಾ.ಯು.ಪಿ ಶಿವಾನಂದ ಹಾಗೂ ದಂಬೆಕೋಡಿ ಸುಬ್ರಾಯ ಆನಂದರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ, ಸುದ್ದಿ ಬಿಡುಗಡೆ ಸಂಪಾದಕ ಡಾ.ಯು.ಪಿ ಶಿವಾನಂದ ಹಾಗೂ ಅರೆಭಾಷೆ ಸಂಘಟಕ ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ...

ವೈಭವದಿಂದ ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ; ಶ್ರದ್ಧಾ-ಭಕ್ತಿಯಿಂದ ಶ್ರೀ ದೇವರನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತಾದಿಗಳು

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಇಂದು(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವೈಭವದಿಂದ ನಡೆಯಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು...

ದ.ಕ. ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಸಾವಿತ್ರಿ ಕಣೆಮರಡ್ಕ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಮಂಡೆಕೋಲು ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ  ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಾವಿತ್ರಿ ಕಣೆಮರಡ್ಕ ರವರು ಮಂಡೆಕೋಲು ಗ್ರಂಥಾಲಯವನ್ನು ಮಾದರಿ ಗ್ರಂಥಾಲಯ ಮಾಡಿ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಇವರು ಸುಳ್ಯ ತಾಲೂಕು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಜಾತ್ರಾ ಮಹೋತ್ಸವ – ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ವೈಭವದ ಚಂಪಾಷಷ್ಠಿ ಬ್ರಹ್ಮರಥೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ಶ್ರೀ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ನಾಳೆ(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಬ್ರಹ್ಮರಥೋತ್ಸವ ಜರುಗಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವ ಕ್ಷೇತ್ರದ ವಿಶೇಷತೆಗಳು

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16 ರಿಂದ ಆರಂಭವಾಗಿ ಡಿಸೆಂಬರ್ 02ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರು ಚಂಪಾಷಷ್ಠಿ ಮಹಾ ರಥೋತ್ಸವದಲ್ಲಿ ಬ್ರಹ್ಮರಥ ಏರಿ ನೆರೆದ ಲಕ್ಷಾಂತರ ಭಕ್ತರನ್ನು ಹರಸುವರು.ಕ್ಷೇತ್ರದ ವಿಶೇಷತೆಗಳು - 1) ಮೂಲ ಮೃತ್ತಿಕೆ ಪ್ರಸಾದ : ವರ್ಷಕ್ಕೊಮ್ಮೆ...

ಬಾಳುಗೋಡು : “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ; ಸಾರ್ವಜನಿಕರೊಂದಿಗೆ ಸಂವಾದ-ಅಹವಾಲು ಸ್ವೀಕಾರ ; ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಕೆ ; ಇಬ್ಬರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಮುಚ್ಚಾರ ಬೆಟ್ಟುಮಕ್ಕಿ ದಿ| ತಮ್ಮಯ್ಯ ಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ...

ನಾಳೆ(ನ.20) ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಾಳುಗೋಡು, ಕಲ್ಮಕಾರು ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ನಾಳೆ(ನ.20) ಬಾಳುಗೋಡು, ಕಲ್ಮಕಾರು ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 11:30ಕ್ಕೆ ಬಾಳುಗೋಡು, ಮದ್ಯಾಹ್ನ 3:00 ಗಂಟೆಗೆ ಕಲ್ಮಕಾರು ಹಾಗೂ ಸಂಜೆ 4:50ಕ್ಕೆ ಕೊಲ್ಲಮೊಗ್ರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು...

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ, ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ,...
Loading posts...

All posts loaded

No more posts

error: Content is protected !!