- Sunday
- June 7th, 2026
“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ನಾಡಿನ ಜನತೆಗೆ ಸಂತಸ ತಂದಿದೆ. ಅಲ್ಲದೆ ಮಾನ್ಯ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಡೆದುಕೊಂಡು ಬಂದಿರುವ ಕ್ರಮ ಇಡೀ ದೇಶಕ್ಕೆ ಮಾದರಿ ಮತ್ತು ಕಾಂಗ್ರೆಸ್ ಪಕ್ಷದ ಗೌರವ ವನ್ನು ಅತ್ಯಂತ ಎತ್ತರಕ್ಕೆ ತಂದಿದ್ದು ದೇಶದ ರಾಜಕಾರಣಕ್ಕೆ ಮಾದರಿ ಆಗಿದೆ, ಆದುದರಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.25 ಸೋಮವಾರದಿಂದ ಮೇ.30 ಶನಿವಾರದವರೆಗೆ ಕ್ಯಾಂಪ್ಕೋ...
“ಪುತ್ತೂರು - ಬಾಳುಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್(KA 57 F 0964)ನಲ್ಲಿ ಸವಣೂರಿನಿಂದ ಪಂಜವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ನಿಂತುಕೊಂಡೇ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದಾಗ ಬಸ್ ಒಳಗೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟದಲ್ಲೇ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ....
ಮೇ.26 ಮಂಗಳವಾರದಂದೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಕಾದಿದ್ದ ಜನರಿಗೆ ಇದೀಗ ನಿರಾಶೆಯಾಗಿದೆ. ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ನೈಋತ್ಯ ಮಾರುತಗಳು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಸಮುದ್ರದ ತಾಪಮಾನ, ಗಾಳಿಯ ವೇಗ, ಮೋಡಗಳ ದಿಕ್ಕು ಬದಲಾವಣೆ, ವಾತಾವರಣದ ಏರುಪೇರುಗಳಿಂದಾಗಿ ಮುಂಗಾರು ಮಾರುತಗಳು ನಿಗದಿತ ಸಮಯಕ್ಕೆ ತಲುಪಿಲ್ಲ ಎಂದು...
ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪೆರಾಜೆ ಸಮೀಪ ವ್ಯಕ್ತಿಯೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದ ಘಟನೆ ಮೇ.26 ರಂದು ಮದ್ಯಾಹ್ನ ಸಂಭವಿಸಿದೆ. ಈ ಘಟನೆಯನ್ನು ಕಾರಿನ ಹಿಂಭಾಗದಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಮಾಡಿದ್ದಾರೆ. ಅಡ್ಡಾದಿಡ್ಡಿಯಾಗಿ ಚಲಿಸುತ್ತಿದ್ದ ಕಾರು ಹಿಂಬದಿಯಿಂದ ಬರುತ್ತಿದ್ದ ಟಿ.ಟಿ ವಾಹನಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿಯ ಮೋರಿಗೆ...
“ಸಹಕಾರ ರತ್ನ” ಸವಣೂರು ಸೀತಾರಾಮ ರೈ- ಕಸ್ತೂರಿಕಲಾ.ಎಸ್ ರೈ ಯವರ ವೈವಾಹಿಕ ಜೀವನದ 50ರ ಸಂಭ್ರಮ ಆಚರಣೆಯ ಪ್ರಯುಕ್ತ ಮೇ.22ರಂದು ಪೂರ್ವಾಹ್ನ ಮಾಲೆಂಗಲ್ಲು ವಿಜಯಕುಮಾರ್ ತಂತ್ರಿಗಳ ನೇತೃತ್ವದಲ್ಲಿ, ಶಿವಕುಮಾರ್ ಭಟ್ ಎಡಮಂಗಲ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸವಣೂರು 'ರತ್ನ ನಿಲಯ'ದಲ್ಲಿ ನಡೆಯಿತು. ವೇದಮೂರ್ತಿ ಶ್ರೀವತ್ಸ ಕೆದಿಲಾಯ ಮತ್ತು ವೆಂಕಟೇಶ ಶಾಸ್ತ್ರಿ(ಕಂಚಿ ಕಾಮಕೋಟಿ ವೇದ...
ನೈರುತ್ಯರೈಲ್ವೆಯ ಮುಖ್ಯ ಕಚೇರಿ ಸುರಕ್ಷತಾ ತಂಡದ ವತಿಯಿಂದ ಮೈಸೂರು ವಿಭಾಗದ ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ಮೇ.21 ಮತ್ತು 22 ರಂದು ಆಂತರಿಕ ಸುರಕ್ಷತಾ ಪರಿಶೀಲನೆ ನಡೆಸಲಾಯಿತು. ಈ ತಪಾಸಣೆಯನ್ನು ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳು ಮುನ್ನಡೆಸಿದರು. ಇವರಲ್ಲಿ ಎಂ.ರಾಮಕೃಷ್ಣ, ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಇ.ಹರಿಕೃಷ್ಣನ್, ಮುಖ್ಯ ಸಿಬ್ಬಂದಿ ಮತ್ತು ಸಂಚಾರ ವ್ಯವಸ್ಥಾಪಕ, ಮುಖ್ಯ ಕಚೇರಿಯ ಇತರೆ...
ಪುತ್ತೂರು : “ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎ.ಒ.ಜೆ) ಮ್ಯಾಗಜೀನ್ 2024-25”ರ ಅವಧಿಗೆ ಭಾರತದ ಸರಿಸುಮಾರು 5 ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.11 ಸೋಮವಾರದಿಂದ ಮೇ.16 ಶನಿವಾರದವರೆಗೆ...
ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
Loading posts...
All posts loaded
No more posts
