- Friday
- July 31st, 2026
ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್.ಎನ್ ಹಾಗೂ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಕುಶಾಲನಗರ ಅರಣ್ಯ ತರಬೇತಿ ಕೇಂದ್ರದ ವಲಯಾರಣ್ಯಾಧಿಕಾರಿಗಳಾಗಿ ವರ್ಗಾವಣೆಗೊಂಡಿದ್ದಾರೆ. ಮಂಜುನಾಥ್ ಅವರ ಸ್ಥಾನಕ್ಕೆ ಹನೂರು ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ನಿರಂಜನ್ ಶೆಟ್ಟಿ ಆಗಮಿಸಲಿದ್ದಾರೆ. ವಿಮಲ್ ಬಾಬು ಅವರ ಸ್ಥಾನಕ್ಕೆ ಕುದುರೆಮುಖ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಚೇತನ್ ಹೆಚ್.ಪಿ ಆಗಮಿಸಲಿದ್ದಾರೆ.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪಿಎಚ್.ಡಿ ಸಂಶೋಧಕ ವಿದ್ಯಾರ್ಥಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಪೆರ್ಲಂಪಾಡಿಯ ಭರತೇಶ ಅಲಸಂಡೆಮಜಲು ಅವರು ಜುಲೈ ತಿಂಗಳ 20ರಿಂದ 26ರವರೆಗೆ ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆಯಲಿರುವ ಜಾಗತಿಕ ಮಟ್ಟದ “ವಿಕಿಮೇನಿಯಾ 2026” ಅಂತರರಾಷ್ಟ್ರೀಯ ಸಮ್ಮೇಳನಕ್ಕೆ...
ವಿಧಾನ ಸೌಧದಲ್ಲಿ ನಡೆದ KFD ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಕ್ಷೇತ್ರದಲ್ಲಿ ಪ್ರಮುಖವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬಂದಿ ಕೊರತೆಯ ಬಗ್ಗೆ ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಭೆಯ ಇತರ ಶಾಸಕರು ಕೂಡ ಧ್ವನಿಯಾಗಿ 24×7 ಸೇವೆಯನ್ನು ನೀಡುವಂತೆ ಸಚಿವರನ್ನು ಒತ್ತಾಸಿದರು. ಸಭೆಯ ನಂತರ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್...
ವರದಿ : ಉಲ್ಲಾಸ್ ಕಜ್ಜೋಡಿಕರ್ನಾಟಕ ರಾಜ್ಯದಾದ್ಯಂತ ಇದೀಗ ಮತದಾರರ ಪಟ್ಟಿಯ ಪರಿಷ್ಕರಣೆಯ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು “ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ(ಎಸ್.ಐ.ಆರ್)” ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ಮತದಾರರ ಹೆಸರು, ವಯಸ್ಸು, ವಿಳಾಸ ಹಾಗೂ ಕುಟುಂಬದ ವಿವರಗಳನ್ನು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುವ ಕಡ್ಡಾಯ ಪ್ರಕ್ರಿಯೆ ಇದಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿ.ಎಲ್.ಒ) ಮನೆ-ಮನೆಗೆ ತೆರಳಿ ಎನ್ಯೂಮರೇಷನ್...
ಸುಬ್ರಹ್ಮಣ್ಯ ಜುಲೈ 13 : ರಾಜ್ಯ ಸರಕಾರದ ಮಾಜಿ ಸಚಿವ ಎಚ್.ಡಿ ರೇವಣ್ಣ ಇಂದು ಸೋಮವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪಂಚಾಮೃತ ಮಹಾಭಿಷೇಕದಲ್ಲಿ ಭಾಗಿಯಾಗಿ, ಮಹಾಮಂಗಳಾರತಿ ವೀಕ್ಷಿಸಿ ತೀರ್ಥ ಪ್ರಸಾದ ಸ್ವೀಕರಿಸಿ, ನಂತರ ಭೋಜನ ಪ್ರಸಾದ ಸ್ವೀಕರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ರೇವಣ್ಣ...
ಪದ್ಮಶ್ರೀ ಪುರಸ್ಕೃತ ದಿ.ಗಿರೀಶ್ ಭಾರದ್ವಾಜ್ ಮನೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುಪ್ರೀತ್ ಮೋoಟಡ್ಕ, ಸುಧಾಕರ ರೈ, ಜೂನಿಯರ್ ಕಾಲೇಜು ಪ್ರಿನ್ಸಿಪಾಲ್ ಮೂಡಿತ್ತಾಯ, ಗಿರೀಶ್ ಭಾರದ್ವಾಜ್ ಮನೆಯರು ಉಪಸ್ಥಿತರಿದ್ದರು.
1920 ರ ಕಾಲಘಟ್ಟದಲ್ಲಿ ಕರಾವಳಿ ಕರ್ನಾಟಕವೂ ಸೇರಿದಂತೆ ಇಡೀ ರಾಷ್ಟ್ರವು ಸ್ವಾತಂತ್ರ್ಯ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ರಾಷ್ಟ್ರೀಯತೆ ಎನ್ನುವುದು ಸಾಹಿತ್ಯದ ಮುಖ್ಯ ತಿರುಳಾಗಿ ಸಾಹಿತಿಗಳ ಲೇಖನದಿಂದ ಹೊರಹೊಮ್ಮುತ್ತಿದ್ದ ಕಾಲ. ಈ ಹಂತದಲ್ಲಿ ಕನ್ನಡ ಭಾಷೆಯ ಮೂಲಕ ರಾಷ್ಟ್ರೀಯತೆಯ ಭಾವವನ್ನು ಹರಡಿಸಲು ಕರಾವಳಿಯ ಕನ್ನಡ ಪಂಡಿತರು ದೃಢವಾದ ಹೆಜ್ಜೆಯನ್ನು ಇಟ್ಟಿದ್ದರು. ಮಂಗಳೂರಿನ ಕೆನರಾ ಹೈಸ್ಕೂಲಿನ ಮರದಡಿಯಲ್ಲಿ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...
ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 08 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
Loading posts...
All posts loaded
No more posts
