- Friday
- July 31st, 2026
(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಹಾಗೂ ಹತ್ತಿರದ ಹರಿಹರ ಪಳ್ಳತ್ತಡ್ಕ ಮತ್ತು ಬಾಳುಗೋಡು ಗ್ರಾಮಗಳಿಗೂ ಉಪಯುಕ್ತವಾಗುವಂತೆ ಇರುವ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ನಾಲ್ಕೈದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿರಲಿಲ್ಲ. ಈ...
ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, 'ತೂಗುಸೇತುವೆಗಳ ಸರದಾರ' ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರ ಸಂತಾಪ...
ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...
ಸುಳ್ಯ, ಜು. 4: ರಾಷ್ಟ್ರಾದ್ಯಂತ ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದರು. ಅವರು...
ಸುಳ್ಯ, ಜು. 3: ತಾಲೂಕು ಹಾಗೂ ಜಿಲ್ಲೆಯಾದ್ಯಂತ ಮಳೆಮಾಪಕಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದರಿಂದ ಬೆಳೆವಿಮೆ ಯೋಜನೆಯಡಿ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ಕೂಡಲೇ ಎಲ್ಲಾ ಮಳೆಮಾಪಕಗಳನ್ನು ದುರಸ್ತಿಗೊಳಿಸಿ ಅಥವಾ ಹೊಸದಾಗಿ ಅಳವಡಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸುಳ್ಯದ ಪತ್ರಿಕಾಭವನದಲ್ಲಿ ಜು. 3ರಂದು ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ತಾಲೂಕು ಹಾಗೂ ಜಿಲ್ಲೆಯಾದ್ಯಂತ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 03 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು...
“ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕರ್ನಾಟಕ ರಾಜ್ಯದ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಗೌಡ ಸಮುದಾಯದವರು ಒಕ್ಕಲಿಗರಲ್ಲ ಎಂದು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅದನ್ನು ತಕ್ಷಣ ಹಿಂಪಡೆಯಬೇಕು” ಎಂದು ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಆಗ್ರಹಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಗ್ರಾಮದಲ್ಲಿರುವ ಪುಷ್ಪಗಿರಿ ವನ್ಯಜೀವಿ ವಲಯ ವ್ಯಾಪ್ತಿಗೆ ಒಳಪಡುವ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವ ಪ್ರವಾಸಿಗರಿಗೆ ಸುರಕ್ಷಿತ, ಶಿಸ್ತುಬದ್ಧ ಹಾಗೂ ಗುಣಮಟ್ಟದ ಟ್ರೆಕ್ಕಿಂಗ್ ಅನುಭವ ಒದಗಿಸುವ ಉದ್ದೇಶದಿಂದ ಟ್ರೆಕ್ಕಿಂಗ್ ಗೈಡ್ ಗಳ ಅವಶ್ಯಕತೆಯಿದ್ದು, ಟ್ರೆಕ್ಕಿಂಗ್ ಗೈಡ್ ಗಳಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಆಹ್ವಾನಿಸಲಾಗಿದ್ದು, ಪ್ರಕೃತಿ ಮತ್ತು ಟ್ರೆಕ್ಕಿಂಗ್ ಚಟುವಟಿಕೆಗಳಲ್ಲಿ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 8ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಕಾವೇರಮ್ಮನವರ 87ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕವಾಗಿ ನಡೆಯುವ ರಾಜ್ಯಮಟ್ಟದ ಅರೆಭಾಷೆ ಕವನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಒಂದು ಸ್ವ-ರಚಿತ ಅರೆಭಾಷೆ ಕವಿತೆಯನ್ನು ಜುಲೈ 14 ತಾರೀಖಿನ ಒಳಗಾಗಿ ಕಳುಹಿಸಿಕೊಡಬೇಕು ಎಂದು...
Loading posts...
All posts loaded
No more posts
