- Friday
- April 11th, 2025

ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...

ಪಂಚಾಯತ್ ಚುನಾವಣೆ ನಡೆಸದೆ ಆಡಳಿತ ಸದಸ್ಯರನ್ನು ನೇಮಿಸಲು ಹೊರಟಿರುವ ಸರಕಾರದ ತೀರ್ಮಾನ ಸರಿಯಲ್ಲ, ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಚುನಾವಣೆ ನಡೆಸಿ ಆಡಳಿತರೂಡ ಪಕ್ಷದ ಕೈ ಗೊಂಬೆ ಆಗದೇ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಆಡಳಿತ ಅಧಿಕಾರಿಗಳನ್ನು ನೇಮಿಸಿ, ಆದರೆ ಧಾರ್ಮಿಕ ದತ್ತಿ ಇಲಾಖೆ ರೀತಿಯಲ್ಲಿ ಸದಸ್ಯರನ್ನು ನೇಮಿಸುವುದು ಬೇಡ. ಚುನಾವಣೆ ನಡೆದರೆ ಗೆಲ್ಲಲು...

ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಲೋಕಸಭಾ ಸದಸ್ಯ ರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಲೋಕ ತಾಂತ್ರಿಕ್ ಜನತಾ ದಳ ಕೇರಳ ರಾಜ್ಯ ಅಧ್ಯಕ್ಷ ಹಾಗೂ ಕೇರಳದ ಜನಪ್ರಿಯ ಪತ್ರಿಕೆ ಮಾತೃಭೂಮಿ ದಿನ ಪತ್ರಿಕೆ ಯ ಸಂಪಾದಕರಾದ ಎಂ ಪಿ ವಿರೇಂದ್ರ ಕುಮಾರ್ ರವರು ಹೃದಯಾಘಾತ ದಿಂದ ಮೇ 28 ರಂದು ರಾತ್ರಿ ಕೋಯಿಕ್ಕೋಡ್...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು...

ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...

ನಾಲ್ಕನೇ ಹಂತದ ಲಾಕ್ಡೌನ್ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್ಡೌನ್ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ. ಏಕಾಏಕಿ ನಾಲ್ಕೇ ನಾಲ್ಕು ಗಂಟೆ...

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...

ಲಾಕ್ಡೌನ್ ಬಳಿಕ ಸುಮಾರು ಎರಡು ತಿಂಗಳಿಂದ ಬಂದಾಗಿದ್ದ ಧಾರ್ಮಿಕ ಕೇಂದ್ರಗಳು ಜೂನ್ 1 ರಿಂದ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ...

ಸುಳ್ಯದ ಕಾಂಗ್ರೆಸ್ ನಾಯಕರಿಗೆ ವಿವಿಧ ಬ್ಲಾಕ್ ಗಳ ಉಸ್ತುವಾರಿಗಳಾಗಿ ನೇಮಕ ಮಾಡಿದ್ದಾರೆ. ಎಂ.ವೆಂಕಪ್ಪ ಗೌಡ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಟಿ.ಎಂ.ಶಹೀದ್ ರಿಗೆ ವಿರಾಜಪೇಟೆ ಬ್ಲಾಕ್ ಉಸ್ತುವಾರಿ, ಭರತ್ ಮುಂಡೋಡಿಯವರಿಗೆ ಕಾರ್ಕಳ ಬ್ಲಾಕ್ ಉಸ್ತುವಾರಿ ಹಾಗೂ ಧನಂಜಯ ಅಡ್ಪಂಗಾಯರನ್ನು ಬೇಲೂರು ಬ್ಲಾಕ್ ಉಸ್ತುವಾರಿ ಗಳನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.ಸುಳ್ಯ ಬ್ಲಾಕ್ ಕಾಂಗ್ರೆಸ್...

All posts loaded
No more posts