Ad Widget

ಜಾಲತಾಣದಲ್ಲಿ ಅಪಪ್ರಚಾರ ಮಾಡಿದವರ ವಿರುದ್ದ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು; ತನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಸುನಿಲ್ ಬಜಿಲಕೇರಿ ವಿರುದ್ದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ಫೇಸ್‌ಬುಕ್‌ ಮತ್ತು ಇತರ ಸಾಮಾಜಿಕ ಮಾಧ್ಯಮದಲ್ಲಿ ಸುನಿಲ್ ಬಜಿಲಕೇರಿ ವೇದವ್ಯಾಸ ಕಾಮತ್ ನ್ನು ಭ್ರಷ್ಟ ಎಂದು ಪ್ರಚಾರ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಸುನಿಲ್ ಬಜಿಲಕೇರಿ ವಿರುದ್ದ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ....

ಸೌದಿ ಅರಬ್ ನಲ್ಲಿ ಇರುವವರಿಗೆ ಮಾತ್ರ ಈ ವರ್ಷದ ಪವಿತ್ರ ಹಜ್ಜ್ ನಿರ್ವಹಿಸಲು ಅವಕಾಶ

ವಿಶ್ವದಾದ್ಯಂತ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಬಾರದೆ ಇರುವ ಹಿನ್ನೆಲೆಯಲ್ಲಿ ಮುಸಲ್ಮಾನರ ಪವಿತ್ರ ಹಜ್ಜ್ ಕಾರ್ಯವನ್ನು 2020ರ ಈ ವರ್ಷದಲ್ಲಿ ಕೇವಲ ಸೌದಿ ಅರಬ್ ದೇಶದಲ್ಲಿ ನೆಲೆಸಿರುವ ಸೀಮಿತ ಸಂಖ್ಯೆಯ ವಿದೇಶಿಯರು ಮತ್ತು ಮೂಲನಿವಾಸಿಗಳಿಗೆ ಈ ವರ್ಷದ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಹಜ್ ಮತ್ತು ಉಮ್ರಾ ಸಚಿವಾಲಯ ಸೋಮವಾರದಂದು ತೀರ್ಮಾನವನ್ನು ಪ್ರಕಟಿಸಿದೆ ಎಂದು ಸೌದಿ ಗಝಟ್...
Ad Widget

ವಿಧಾನಪರಿಷತ್ ಗೆ ಏಳುಮಂದಿ ಅವಿರೋಧವಾಗಿ ಆಯ್ಕೆ

ವಿಧಾನಪರಿಷತ್ತು ಚುನಾವಣೆ ಕಣದಲ್ಲಿ ಏಳು ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಜೂ 22ರಂದು ಘೋಷಿಸಿದ್ದಾರೆ.ಜೂನ್ 30ರಂದು ನಿವೃತ್ತರಾಗಲಿರುವ ವಿಧಾನಪರಿಷತ್ತಿನ ಏಳು ಸದಸ್ಯರ ಸ್ಥಾನಗಳನ್ನು ತುಂಬಲು ಜೂನ್ 29ರಂದು ವಿಧಾನಪರಿಷತ್ ದೈ ವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿತ್ತು.ಅದರಂತೆ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಜೂನ್ 19ರಂದು ನಡೆದ ನಾಮಪತ್ರಗಳನ್ನು ಪರಿಶೀಲನೆಯಲ್ಲಿ...

ಸರ್ಕಾರ ವತಿಯಿಂದ ಮನೆ ಬಾಗಿಲಿಗೆ ಪಠ್ಯಪುಸ್ತಕಗಳ ವ್ಯವಸ್ಥೆ..!

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಉಳಿದಿರುವ ಶಾಲಾ-ಕಾಲೇಜು ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಮನೆಯಲ್ಲೇ ಇರುವ ಮಕ್ಕಳಿಗೆ ಪಠ್ಯಪುಸ್ತಕ ನೀಡುವ ಮೂಲಕ ಓದು ಬರಹದ ಕಡೆ ಗಮನ ಹರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಮಾಡಿದ್ದು ,...

ಸಿಲಿಕಾನ್ ಸಿಟಿಗೆ ಕೊರೊನಾ ಶಾಕ್ : ಬೆಂಗಳೂರಲ್ಲಿ 10 ಏರಿಯಾ ಸೀಲ್ ಡೌನ್

ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 196 ಮಂದಿಗೆ ಕೊರನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿತ್ತು. ಸಿಲಿಕಾನ್...

ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಗರಿಷ್ಠ ಸಾಧನೆ – ಮೂವರು ಮೇಲ್ವಿಚಾರಕರಿಗೆ ಪ್ರಶಸ್ತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಗರಿಷ್ಠ ಸಾಧನೆ ತೋರಿದ ತಾಲೂಕಿನ ಮೂರು ಜನ ವಲಯ ಮೇಲ್ವಿಚಾರಕರಿಗೆ ಯೋಜನೆಯ ವತಿಯಿಂದ ಪ್ರಶಸ್ತಿ ಲಭಿಸಿದೆ. ಮುರಳೀಧರ ಬೆಳ್ಳಾರೆ ವಲಯ ಮೇಲ್ವಿಚಾರಕ ಮುರಳೀಧರರವರು ಉಳಿತಾಯ ಸಂಗ್ರಹಣೆ, ಮಾಸಿಕ ಪ್ರಗತಿ ನಿರ್ವಹಣೆ, ಸಂಘ ರಚನೆ, ಹೊರಬಾಕಿ ಸಾಲ ನೀಡಿಕೆ ಹಾಗೂ ವಸೂಲಾತಿ ಸೇರಿದಂತೆ ಯೋಜನೆಯ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವ...

ಕೊಡಗಿನ ಆಲೂರು ಸಿದ್ದಾಪುರದ ಮಹಿಳೆಯಲ್ಲಿ ಸೋಂಕು ಪತ್ತೆ

ಮುಂಬೈನಿಂದ ಗ್ರಾಮಕ್ಕೆ ಬಂದಿದ್ದ ಮಹಿಳೆ ಕೊರೊನಸೋಂಕು ಹಿನ್ನೆಲೆಯಲ್ಲಿ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುಂಬೈನಿಂದ ಬಂದಿದ್ದ ಮಹಿಳೆ 14 ದಿನ ಕೊರಂಟೈನ್ ನಲ್ಲಿದ್ದು ಕೊಡಗಿಗೆ ಬಂದಿದ್ದರು. ಮುನ್ನೆಚ್ಚರಿಕೆಯಾಗಿ ಆರೋಗ್ಯ ಇಲಾಖೆಯಿಂದ ತಪಾಸಣೆ ಕೈಗೊಂಡಾಗ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿಆಲೂರು ಸಿದ್ದಾಪುರ ಗ್ರಾಮ ಸೀಲ್ ಡೌನ್ ಗೊಳ್ಳಲಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದೆ. ಸೋಮವಾರ...

ಬೆಳ್ಳಾರೆ 108 ಕ್ಕೆ ಸಿಬ್ಬಂದಿ ನೇಮಕ

ಬೆಳ್ಳಾರೆಗೆ 108 ಅಂಬ್ಯುಲೆನ್ಸ್ ವಾಹನ ಇಲ್ಲದೇ ಒಂದು ವಾರದಿಂದ ಸಮಸ್ಯೆಯಾಗಿತ್ತು. ಈ ಬಗ್ಗೆ ಅಮರ ಸುದ್ದಿ ವರದಿ ಮಾಡಿತ್ತು. ಬಳಿಕ ಎಚ್ಚೆತ್ತ ಇಲಾಖೆ ಬೆಳ್ಳಾರೆಗೆ 108 ವಾಹನ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಿದೆ. 108 ಸಿಬ್ಬಂದಿಯಾಗಿ ಮುಪ್ಪೇರಿಯ ಗ್ರಾಮದ ಮುಗುಪ್ಪು ಮನೆ ದೀಪ್ತಿರಾಜ್ ರವರ ಪತ್ನಿ ದಕ್ಷಿಣಿ ಇವರನ್ನು ನೇಮಕ ಮಾಡಲಾಗಿದೆ. ಇವರು 3 ವರ್ಷ...

ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ ಕಾಲೇಜು ಬಂದ್ ಮಾಡಲು ಸರ್ಕಾರ ಚಿಂತನೆ

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿ ದಿನೇ ದಿನೇ ಏರಿಕೆಯಾಗುತ್ತಿದೆ. ಇಂತಹ ಭೀತಿಯ ನಡುವೆಯೂ ಶಾಲಾ-ಕಾಲೇಜುಗಳು ಆಗಸ್ಟ್ ನಿಂದ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಶೇ.80ರಷ್ಟು ಪೋಷಕರು ಸದ್ಯಕ್ಕೆ ಶಾಲಾ-ಕಾಲೇಜು ಆರಂಭಿಸೋದು ಬೇಡ ಎಂಬುದಾಗಿ ಬಲವಾಗಿ ಅಭಿಪ್ರಾಯ ಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ದಸರಾ ರಜೆಯವರೆಗೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲಿಯೇ...

ಕೊಡಗಿನಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು

ಕೊಡಗು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಡಿಕೇರಿ ತಾಲೂಕಿನ ಒಬ್ಬರಿಗೆ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದ ಒಬ್ಬರಲ್ಲಿ ಸೋಂಕು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 280 ರೋಗಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಪರೀಕ್ಷೆಯ ನಂತರ ಇಬ್ಬರಲ್ಲಿ ಸೋಂಕು ರುವುದಾಗಿ ತಿಳಿದುಬಂದಿದೆ...
Loading posts...

All posts loaded

No more posts

error: Content is protected !!