ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಸಾಧ್ಯತೆ- ಲಾಕ್​ಡೌನ್ 5.O​​ನಲ್ಲಿ ಇರಲಿದೆ ಭಾರೀ ಬದಲಾವಣೆ

ನಾಲ್ಕನೇ ಹಂತದ ಲಾಕ್​ಡೌನ್​ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್​ಡೌನ್​ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ.‌ ಏಕಾಏಕಿ ನಾಲ್ಕೇ ನಾಲ್ಕು ಗಂಟೆ...

ರೈತರು ಕೃಷಿ ಕಾರ್ಮಿಕರಿಗೆ ಸಹಾಯಧನಕ್ಕೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯ

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...
Ad Widget

ಚೀನಾಕ್ಕೆ ಸಡ್ಡು ಹೊಡೆದ ಭಾರತ-ಸೇನೆ ಸನ್ನದ್ಧ- ಅಮೇರಿಕಾ ಬೆಂಬಲ

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...

ಜೂನ್ 1 ರಿಂದ ದೇವರ ದರ್ಶನ ಭಾಗ್ಯ

ಲಾಕ್ಡೌನ್ ಬಳಿಕ ಸುಮಾರು ಎರಡು ತಿಂಗಳಿಂದ ಬಂದಾಗಿದ್ದ ಧಾರ್ಮಿಕ ಕೇಂದ್ರಗಳು ಜೂನ್ 1 ರಿಂದ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಯಮಾನುಸಾರ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಭಕ್ತರು ದೇವರ...

ವೆಂಕಪ್ಪ ಗೌಡ, ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ ಟಿ.ಎಂ.ಶಹೀದ್ ರನ್ನು ಬ್ಲಾಕ್ ಉಸ್ತುವಾರಿಗಳಾಗಿ ನೇಮಕ

ಸುಳ್ಯದ ಕಾಂಗ್ರೆಸ್ ನಾಯಕರಿಗೆ ವಿವಿಧ ಬ್ಲಾಕ್ ಗಳ ಉಸ್ತುವಾರಿಗಳಾಗಿ ನೇಮಕ ಮಾಡಿದ್ದಾರೆ. ಎಂ.ವೆಂಕಪ್ಪ ಗೌಡ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಟಿ.ಎಂ.ಶಹೀದ್ ರಿಗೆ ವಿರಾಜಪೇಟೆ ಬ್ಲಾಕ್ ಉಸ್ತುವಾರಿ, ಭರತ್ ಮುಂಡೋಡಿಯವರಿಗೆ ಕಾರ್ಕಳ ಬ್ಲಾಕ್ ಉಸ್ತುವಾರಿ ಹಾಗೂ ಧನಂಜಯ ಅಡ್ಪಂಗಾಯರನ್ನು ಬೇಲೂರು ಬ್ಲಾಕ್ ಉಸ್ತುವಾರಿ ಗಳನ್ನಾಗಿ ನೇಮಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮಾಡಿದ್ದಾರೆ.ಸುಳ್ಯ ಬ್ಲಾಕ್ ಕಾಂಗ್ರೆಸ್...

ನೇತ್ರಾವತಿ ನದಿಗೆ ಹಾರಿದ ನಿಶಾಂತ್ ನ ರಕ್ಷಿಸಲೆತ್ನಿಸಿದ ಯುವಕರಿಗೆ ಸನ್ಮಾನ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಲ್ಲಡ್ಕದ ನಿಶಾಂತ್‌ನನ್ನು ಕಾಪಾಡಲು ಹಬ್ಬದ ಖುಷಿಯಲ್ಲಿದ್ದ ಸಂದರ್ಭದಲ್ಲಿಯೂ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿ ರಕ್ಷಣೆಗೆ ಮುಂದಾಗಿದ್ದರು. ಯುವಕರ ಈ ಸಾಹಸ ಮಾನವೀಯತೆಗೆ ಸಾಕ್ಷಿಯಾಗಿತ್ತು. ಇದನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸನ್ಮಾನಿಸಲಾಯಿತು.

ಪೆರಾಜೆಯಲ್ಲಿ ರಬ್ಬರ್ ಕಳವು ಪ್ರಕರಣದ ಆರೋಪಿಗಳ ಬಂಧನ

ರಬ್ಬರ್ ಶೀಟ್ ಮತ್ತು ಸ್ಕ್ರಾಪ್ ಕಳವು ಮಾಡಿದ್ದ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರುಯಶಸ್ವಿಯಾಗಿದ್ದಾರೆ   ಮಡಿಕೇರಿ ತಾಲ್ಲೂಕು ಪಿ.ಪೆರಾಜೆ ಗ್ರಾಮದ ನಿವಾಸಿ ಆರ್.ಎ ಶರತ್ ಎಂಬುವವರು ಅವರ ರಬ್ಬರ್ ತೋಟದಿಂದ ಟ್ಯಾಪಿಂಗ್ ಮಾಡಿ ಸಂಗ್ರಹಿಸಿ ಇಟ್ಟಿದ್ದ 2,10,000 ರೂ ಬೆಲೆಬಾಳುವ 1300 ಕೆ.ಜಿ ರಬ್ಬರ್ ಶೀಟ್ ಮತ್ತು 900...

ಜೂನ್ 7 ರಂದು ಡಿಕೆಶಿ ಪದಗ್ರಹಣ -6500 ಪ್ರದೇಶಗಳಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....

ಬಹರೈನ್ ನಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ನೆರವವು ನೀಡಿ ಮಾನವೀಯತೆ ಮೆರೆದ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್

ಅರಬ್ ರಾಷ್ಟ್ರವಾದ ಬಹರೈನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದೆ. ಕೋವಿಡ್ 19 ನಿಂದ ನಮ್ಮ ದೇಶ ಮಾತ್ರವಲ್ಲ ವಿದೇಶಗಳು ಕೂಡ ಕಷ್ಟಕ್ಕೀಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಅದರಲ್ಲೂ ವಿದೇಶದಲ್ಲಿ ಕಷ್ಟಕ್ಕೀಡಾಗಿರುವ ಭಾರತೀಯರಲ್ಲಿ ಹಲವರ ಪರಿಸ್ಥಿತಿ ಕೇಳಿದರೆ ಕಣ್ಣೀರು ಬರುವ...

ಮಂಗಳೂರಿನಲ್ಲಿ ಉಳಿದಿದ್ದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ

ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...
Loading posts...

All posts loaded

No more posts

error: Content is protected !!