ರಂಜಾನ್ ಹಬ್ಬವಿರುವುದರಿಂದ ವಿದ್ಯುತ್ ಕಡಿತಗೊಳಿಸದಂತೆ ಮನವಿ- ಸ್ಪಂದಿಸಿದ ಕಾರ್ಯನಿರ್ವಾಹಕ ಇಂಜಿನಿಯರ್ ನರಸಿಂಹ

ಮೆಸ್ಕಾಂ ಇಲಾಖೆಯಿಂದ ಮೇ 23 ಶನಿವಾರದಂದು ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ವಿದ್ಯುತ್ ಲೈನ್ ಗಳಲ್ಲಿ ಕೆಲಸಕಾರ್ಯಗಳು ನಡೆಯುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ ಉಂಟಾಗುವ ಸಂಭವವಿತ್ತು. ಈ ಮಾಹಿತಿಯನ್ನು ಆಧರಿಸಿ ಮುಸಲ್ಮಾನ ಬಾಂಧವರ ಪವಿತ್ರ ರಂಜಾನ್ ಹಬ್ಬದ ಒಂದು ದಿನ ಮೊದಲು ಈ ರೀತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದಲ್ಲಿ ಹಲವಾರು ಸಮಸ್ಯೆಗಳು ಮುಸಲ್ಮಾನ...

ಕೊರೊನ ಸಂಕಷ್ಟದಲ್ಲಿರುವ ಜನತೆಗೆ ಕರೆಂಟ್ ಶಾಕ್ ನೀಡಿದ ಮೆಸ್ಕಾಂ : ಬಿಲ್ ಮನ್ನಾ ಮಾಡಲು ಒತ್ತಾಯ

ಕೊರೊನ ವೈರಸ್ ಮಹಾಮಾರಿ ಹಿನ್ನೆಲೆ ಭಾರತದ ಲಾಕ್ ಡೌನ್ ಗೊಂಡಿದ್ದು ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿ ಜನತೆಯ ಸಹಾಯಕ್ಕೆ ಮುಂದಾಗಿದ್ದವು. ಆದರೆ ಇದೀಗ ಅದೇ ಸಹಾಯ ಮುಳ್ಳಾಗಿ ಚುಚ್ಚಲು ಪ್ರಾರಂಭಿಸಿದಂತೆ ಗೋಚರಿಸುತ್ತಿದೆ. ಜನಸಾಮಾನ್ಯರು ಕೂಲಿಕಾರ್ಮಿಕರು ಕೆಲಸಕಾರ್ಯಗಳು ಇಲ್ಲದೆ ಮನೆಯಲ್ಲಿಯೇ ಕಾಲ...
Ad Widget

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗೆ ವರೆಗೆ ಕರ್ಫ್ಯೂ ಜಾರಿ ದ.ಕ. ಜಿಲ್ಲಾಧಿಕಾರಿ ಸೂಚನೆ

ಕರೋನ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 23ರಂದು ಶನಿವಾರ ಸಂಜೆ 7 ಗಂಟೆಯಿಂದ ಮೇ 25 ಸೋಮವಾರ ಮುಂಜಾನೆ ೭ ಗಂಟೆಯವರೆಗೆ ದಕ್ಷಿಣಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳಾದ ಹಾಲು ,ತರಕಾರಿ, ಪತ್ರಿಕೆ, ಔಷಧಿ ,ಮುಂತಾದ ಅಗತ್ಯ...

ಆದಿತ್ಯವಾರ ಈದುಲ್ ಪಿತ್ರ್ ಹಬ್ಬ ಆಚರಣೆ

ಇಂದು ಚಂದ್ರದರ್ಶನ ವಾಗದ್ದರಿಂದ ನಾಳೆ ಮೇ 23 ಶನಿವಾರ ಉಪವಾಸ ನಡೆಯಲಿದೆ. ಪಝಲ್ ಕೋಯಮ್ಮ ತಂಙಲ್ ಕೂರತ್ ಹಾಗೂ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಮಂಗಳೂರುಸಂಯುಕ್ತ ಖಾಝಿಗಳು ದಕ್ಷಿಣ ಕನ್ನಡ ಹಾಗೂ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲಸಂಯುಕ್ತ ಖಾಝಿಗಳು ಉಡುಪಿ, ಹಾಸನ, ಚಿಕ್ಕಮಂಗಳೂರು ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು...

ದ ಕ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ರಾಜ್ಯದಲ್ಲಿ 105 ಪ್ರಕರಣ ಪತ್ತೆ

ಕೊರೋಣವೈರಸ್ ಮಹಾಮಾರಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಿಡದೆ ಕಾಡುತ್ತಿದ್ದು ಇಂದು ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ 29ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಯುವತಿಯು ಮುಂಬೈಯಿಂದ ಬೆಳ್ತಂಗಡಿಗೆ ಬಂದಿರುವುದಾಗಿ ತಿಳಿದು ಬಂದಿದೆ.ಇದರೊಂದಿಗೆ ರಾಜ್ಯದಲ್ಲಿ ಇಂದಿನ ಸೋಂಕಿತರ ಸಂಖ್ಯೆ 105 ದಾಖಲಾಗಿರುತ್ತದೆ. ಇದರೊಂದಿಗೆ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ 62ಕ್ಕೆ ಏರಿದೆ.

ದ್ವಿತೀಯ ಪಿ.ಯು ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಥಮ ಪಿಯು ಉತ್ತೀರ್ಣರಾಗಿ ದ್ವಿತೀಯ ಪಿಯು ಪ್ರವೇಶ ಪಡೆಯಲಿರುವ ವಿಜ್ಞಾನ ,ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್ ಪ್ರಾರಂಭಗೊಂಡಿದೆ. ಇದು ಕೇವಲ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.ತರಗತಿ...

ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿ

ಮಲ್ಪೆ: ಸಮುದ್ರದಿಂದ ತೀರಕ್ಕೆ ಸಮೀಪಿಸುತ್ತಿದ್ದ ಬೋಟ್ ಒಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.ಇದು ಮೀನುಗಾರಿಕೆಗೆ ತೆರಳಿದ್ದ ಬೋಟ್ ಆಗಿತ್ತು ಎಂದು ತಿಳಿದುಬಂದಿದೆ. ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿದೆ. ಗಾಳಿ ಜೋರಾಗಿ ಬೀಸಿದ್ದರ ಪರಿಣಾಮವಾಗಿ ಬೋಟ್ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದಿದೆ.

ದ.ಕ.‌ ಜಿಲ್ಲಾಧಿಕಾರಿ ವರ್ಗಾವಣೆಗೆ ಷಡ್ಯಂತ್ರ

ಕೊರೊನಾ ವಿಪತ್ತು ನಿರ್ವಹಣೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳ ವಿರುದ್ಧ ವಿಫಲರಾಗಿದ್ದಾರೆ ಎನ್ನುವ ಆರೋಪ ಹೆಣೆಯುವ ಮೂಲಕ ಈ ಷಡ್ಯಂತ್ರ ನಡೆಯುತ್ತಿದೆ.ಸ್ವತ ಅಧಿಕಾರಿಗಳಿಂದಲೇ ಈ ರೀತಿಯ ವ್ಯವಸ್ಥಿತ ಸಂಚು ನಡೆಯುತ್ತಿದೆ ಎನ್ನುವ ಆರೋಪ ಇದೀಗ ಕೇಳಿ ಬರಲಾರಂಭಿಸಿದೆ. ಸಿಂಧು ಬಿ ರೂಪೇಶ್ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೊರೊನಾ ಮಹಾಮಾರಿಯಂತ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಅನಿವಾರ್ಯ...

ಬಾಳೆಕೋಡಿ ಶಶಿಕಾಂತಮಣಿ ಸ್ವಾಮೀಜಿ ವಿಧಿವಶ

ಬಾಳೆ ಕೋಡಿಮಠದ ಮಠಾಧೀಶರಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರು ಮೇ. 18 ರಂದು ರಾತ್ರಿ ಇಹಲೋಕ ತ್ಯಜಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮುರ ಬಾಳೆ ಕೋಡಿಮಠದ ಮಠಾಧೀಶರಾದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಸಾಹಿತ್ಯ ಪ್ರೇಮಿಗಳು, ಅನೇಕ ಪ್ರಶಸ್ತಿ ಪುರಸ್ಕೃತರು, ಗೌರವ ಡಾಕ್ಟರೇಟ್ ಪದವಿಧರರು, ಮಠದ ಮೂಲಕ ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು...

ಮಡಿಕೇರಿಯಿಂದ ಮಂಗಳೂರಿಗೆ ಕಾಲ್ನಡಿಗೆಯಲ್ಲಿ ಹೊರಟ ಕಾರ್ಮಿಕ : ಸುಳ್ಯದಲ್ಲಿ ಅಸ್ವಸ್ಥಗೊಂಡಾಗ ಉಪಚರಿಸಿದ ಸ್ಥಳೀಯರು

ಸುಳ್ಯದ ಕೆಲವು ಯುವಕರು ಮಾನವೀಯತೆ ಮೆರೆದು ಕಾಲ್ನಡಿಗೆಯಲ್ಲಿ ಹೊರಟಿದ್ದ ವ್ಯಕ್ತಿ ಅಸ್ವಸ್ಥಗೊಂಡು ಸುಳ್ಯದಲ್ಲಿ ಬಿದ್ದ ವ್ಯಕ್ತಿಯನ್ನು ಉಪಚರಿಸಿ ಸ್ವಗ್ರಾಮಕ್ಕೆ ತೆರಳಲು ವ್ಯವಸ್ಥೆ ಮಾಡಿದ ಘಟನೆ ಮೇ ೧೭ ನಡೆದಿದೆ. ಮಂಗಳೂರಿನ ಕಟೀಲು ನಿವಾಸಿ ನಾರಾಯಣ ರೈ ಯವರು ಮಡಿಕೇರಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ದೇಶದಾದ್ಯಂತ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ ಇತ್ತ ಊರಿಗೂ ತೆರಳಲಾಗದೆ...
Loading posts...

All posts loaded

No more posts

error: Content is protected !!