ಕೆ.ಯು.ಡ.ಬ್ಲ್ಯೂ.ಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆ.ಯು.ಡ.ಬ್ಲ್ಯೂ.ಜೆ )ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್(ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ...

ಪುತ್ತೂರಿನ ವಿದ್ಯಾಮಾತಾದಲ್ಲಿ “ಬೇಸಿಗೆ ಕೌಶಲ ಸಂಭ್ರಮ 26” ಕ್ಕೆ ಚಾಲನೆ – “ವಿದ್ಯಾಮಾತಾದ ಕೌಶಲ್ಯಯುಕ್ತ ತರಬೇತಿಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿದೆ” : ಶ್ರೀಮತಿ ರಾಜೇಶ್ವರಿ ಆಚಾರ್ ; ತುಂಬಿ ತುಳುಕಿದ ಕೌಶಲ ಸಂಭ್ರಮದ ತರಗತಿಗಳು

“ಹೆಸರಾಂತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲೇ ಬೇಸಿಗೆಯ ರಜಾ ಅವಧಿಯಲ್ಲಿ ವಿಶೇಷ ಕೌಶಲ ಸಂಭ್ರಮದ ಅಡಿಯಲ್ಲಿ ಹಲವು ಕೌಶಲ್ಯಭರಿತ ತರಬೇತಿಯನ್ನು ವಿವಿಧ ಆಯಾಮದಲ್ಲಿ ನೀಡಿ ಭವಿಷ್ಯದ ಅಧಿಕಾರಿಗಳನ್ನು ಸೃಷ್ಟಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ” ಎಂದು ರೋಟರಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಆಚಾರ್...
Ad Widget

ಮೌರ್ಯ ದೊಡ್ಡಮನೆ ಶೇಣಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ರನ್ನರ್‌ಅಪ್

ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ಏ.20ರಂದು ನಡೆದ ಪ್ರಿನ್ಸೆಸ್ & ಪ್ರಿನ್ಸ್ ಆಫ್ ದಕ್ಷಿಣ ಕನ್ನಡ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ದೊಡ್ಡಮನೆ ಶೇಣಿಯ ಮೌರ್ಯ.ಎಸ್ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಬೆಳ್ಳಾರೆಯ ಕೆ.ಪಿ.ಎಸ್ ನಲ್ಲಿ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇವರು ಅಮರ ಪಡ್ನೂರು ಗ್ರಾಮದ ಶೇಣಿ ದೊಡ್ಡಮನೆ ಡಿ.ಕೆ ಸುರೇಶ್ ರವರ ಪುತ್ರ.

ಸುಬ್ರಹ್ಮಣ್ಯ : ಅಂತರ್ ಕಾಲೇಜು ಪುರುಷರು ಮತ್ತು ಮಹಿಳಾ ವಿಭಾಗದ ಹಗ್ಗಜಗ್ಗಾಟ ; “ಹಗ್ಗಜಗ್ಗಾಟ ಸ್ಪರ್ಧೆಗೆ ಶಕ್ತಿ ಪ್ರಧಾನ ಅಲ್ಲ, ಯುಕ್ತಿ ಸೇರಿದರಷ್ಟೇ ಇಲ್ಲಿ ಗೆಲುವು ಸಾಧ್ಯ” : ನಿತ್ಯಾನಂದ ಮುಂಡೋಡಿ

ಸುಬ್ರಹ್ಮಣ್ಯ : “ಹಗ್ಗಜಗ್ಗಾಟ ಸ್ಪರ್ಧೆಗೆ ಶಕ್ತಿ ಪ್ರಧಾನ ಅಲ್ಲ. ಯುಕ್ತಿ ಸೇರಿದರಷ್ಟೇ ಇಲ್ಲಿ ಗೆಲುವು ಸಾಧ್ಯವಿದೆ. ಶಕ್ತಿ ಮತ್ತು ಯುಕ್ತಿ ಮಿಳಿತವಾಗುವ ಸ್ಪರ್ಧೆಯನ್ನು ಅತ್ಯಂತ ಯಶಸ್ವಿ ರೀತಿಯಲ್ಲಿ ಇಲ್ಲಿ ಆಯೋಜಿಸಿದ ಸಂಘಟಕರ ಪ್ರಯತ್ನ ಶ್ಲಾಘನೀಯವಾದದು” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ಸುಬ್ರಹ್ಮಣ್ಯದಲ್ಲಿ 24×7 ತುರ್ತು ಚಿಕಿತ್ಸಾ ಘಟಕಕ್ಕಾಗಿ ಆರೋಗ್ಯ ಸಚಿವರಿಗೆ ಮನವಿಯೊಂದಿಗೆ ಒತ್ತಾಯ

ಸುಬ್ರಹ್ಮಣ್ಯ ಏಪ್ರಿಲ್ 19 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದು ಇಲ್ಲಿಯ ಅತ್ಯುನ್ನತ ಸೇವೆಗಳಾದ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮುಂತಾದ ಸೇವೆಗಳನ್ನು ಪೂರೈಸಿ ತೆರಳುತ್ತಾರೆ. ಆದರೆ ಇಲ್ಲಿ ಅನಾರೋಗ್ಯಕ್ಕೆ ತುತ್ತಾದ ಭಕ್ತರಿಗೆ...

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಫಾತಿಮಾತ್ ಶಹ್ಲಾ ರನ್ನು ಸನ್ಮಾನಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವರು

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಪರ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಫಾತಿಮಾತ್ ಶಹ್ಲಾ ರನ್ನು ಕರ್ನಾಟಕ ರಾಜ್ಯದ...

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಗುತ್ತಿಗಾರಿನಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ; ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದ ಅಪಾರ ಭಕ್ತವೃಂದ – ಜನಮನ ರಂಜಿಸಿದ ಪುತ್ತೂರು ಬೆಡಿ ; ಇಂದು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ಸವಾರಿ

ಹತ್ತೂರ ಒಡೆಯ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ವರ್ಷಾವಧಿ ಜಾತ್ರೋತ್ಸವವು ಭಕ್ತಿ ವಿಜೃಂಭಣೆಯಿಂದ ಜರುಗುತ್ತಿದ್ದು, ಎ.17ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಉತ್ಸವವು ಸೇರಿದ ಅಪಾರ ಮಂದಿ ಭಕ್ತವೃಂದದ ಸಮ್ಮುಖದಲ್ಲಿ ನೆರವೇರಿತು.ಎ.17ರಂದು ಬೆಳಿಗ್ಗೆ ಉತ್ಸವ ಬಲಿ, ವಸಂತಕಟ್ಟೆಪೂಜೆ, ದೇವರ ದರ್ಶನಬಲಿ, ಬಟ್ಟಲುಕಾಣಿಕೆ ನಡೆಯಿತು. ಮಧ್ಯಾಹ್ನ ಬ್ರಹ್ಮರಥದ ದಾನಿ ದಿ.ನೆಟ್ಟಾಳ...

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20 ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದ್ದು, ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/- ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ...

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆ

48 ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಸ್ಥಾಪನೆಯಾದ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು ರವರು ಆಯ್ಕೆಯಾಗಿದ್ದಾರೆ.ಏ.14ರಂದು ಮಂಗಳೂರಿನಲ್ಲಿ ನಡೆದ ಸಂಘದ ನೂತನ ನಿರ್ದೇಶಕರ ಸಭೆಯಲ್ಲಿ ಕಿರಣ್ ಬುಡ್ಲೆಗುತ್ತು ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಸಂಘದ ಕಾರ್ಯದರ್ಶಿಯಾಗಿ ನವೀನ್ ಚಂದ್ರ ಭೋಜಾರ, ಉಪಾಧ್ಯಕ್ಷರಾಗಿ...
Loading posts...

All posts loaded

No more posts

error: Content is protected !!