ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಜಾಲತಾಣದಲ್ಲಿ ಅವಹೇಳನ – ಪೈಕ ಬೂತ್ ಸಮಿತಿ ಖಂಡನೆ

ಜನಪ್ರಿಯ ಶಾಸಕಿ ಕು.‌ಭಾಗೀರಥಿ ಮುರುಳ್ಯ ಇವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ  ಅಸಭ್ಯವಾದ ಪೋಸ್ಟ್ ಗಳನ್ನು ಹಾಕಿರುವುದನ್ನು ಗುತ್ತಿಗಾರು-ಪೈಕ 124 ನೇ ಬೂತ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಒಬ್ಬ ಜನಪ್ರತಿನಿಧಿಯ ವೈಯಕ್ತಿಕ ನಿಂದನೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಕ್ಕೆ ಮಾಡಿರುವ ದ್ರೋಹ ಆಗಿರುತ್ತದೆ. ಹಾಗೂ ತಾಲೂಕಿನ ಎಲ್ಲಾ ಸಮುದಾಯದ ಜನರಿಗೆ ದೊರಕುವ ಹಾಗೂ ಕಷ್ಟಗಳಿಗೆ ಸ್ಪಂದಿಸುವ ಕ್ಷೇತ್ರದ ಅಭಿವೃಧ್ಧಿಗೆ...

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತೀವ್ರ ಖಂಡನೆ

ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, " ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ...
Ad Widget

ವಾಹನ ಕಳವು ವಿಮೆ ಕ್ಲೈಮ್ ನಿರಾಕರಣೆ : ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಗೆ ವಾಹನದ ಮೌಲ್ಯ, ದಂಡ ಮತ್ತು ಬಡ್ಡಿ ಸೇರಿಸಿ ಪರಿಹಾರ ನೀಡಲು ಆದೇಶಿಸಿದ ದ.ಕ ಜಿಲ್ಲಾ ಗ್ರಾಹಕರ ನ್ಯಾಯಾಲಯ

ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ  ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು, ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ. ಮಂಗಳೂರಿನ ಸಾಂತಪ್ಪ.ಯು ಎಂಬವರು...

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಲ್ಲ ಖಾಯಂ ವೈದ್ಯಾಧಿಕಾರಿಗಳು – ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸದ ಸರ್ಕಾರ, ಸಮಸ್ಯೆ ಅನುಭವಿಸುತ್ತಿರುವ ಸಾರ್ವಜನಿಕರು ; ಸಮಾಲೋಚನಾ ಸಭೆ ನಡೆಸಲು ನಿರ್ಧರಿಸಿದ ಗ್ರಾಮಸ್ಥರು ; ✍️ಉಲ್ಲಾಸ್ ಕಜ್ಜೋಡಿ

“ಊರಿನಲ್ಲೊಂದು ಸರ್ಕಾರಿ ಆರೋಗ್ಯ ಕೇಂದ್ರವಿರಬೇಕು, ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವರಕ್ಷಣೆಗೆ ಅದು  ಸಹಕಾರಿಯಾಗಬೇಕು” ಆದರೆ ಕೊಲ್ಲಮೊಗ್ರದಲ್ಲಿ ಕಲ್ಮಕಾರು, ಹರಿಹರ ಪಳ್ಳತ್ತಡ್ಕ, ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳಿಗೆ ಸಹಕಾರಿಯಾಗುವಂತೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ಹಾಗೂ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ; ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ...

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ “ಬ್ಯಾಕ್‌ ಟು ಊರು” ಪರಿಕಲ್ಪನೆಗೆ  ಬಿ.ವೈ ವಿಜಯೇಂದ್ರ ಮೆಚ್ಚುಗೆ ; “ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ”

ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌...

ಮಂಗಳೂರು : ನಾಳೆ(ಡಿ.27) ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ “9ನೇ ವರ್ಷದ ಮಂಗಳೂರು ಕಂಬಳ”

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ...

“ಅಮರ ಸುದ್ದಿ ವಿಶೇಷ ವರದಿ” ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕುಂಠಿತವಾಗುತ್ತಿದೆ ಅಡಿಕೆ ಫಸಲು – ಹಂತಹಂತವಾಗಿ ನಾಶವಾಗುತ್ತಿದೆ ಅಡಿಕೆ ಕೃಷಿ…!! ; ಭವಿಷ್ಯದಲ್ಲಿ ಸಂಪೂರ್ಣ ಅಡಿಕೆ ಕೃಷಿ ನಾಶವಾದರೆ ಜಿಲ್ಲೆಯ ಅರ್ಥವ್ಯವಸ್ಥೆಗೆ ಬೀಳಬಹುದೇ ಬಹುದೊಡ್ಡ ಹೊಡೆತ…!? ; ಅಪಾಯ ಸಂಭವಿಸುವ ಮೊದಲೇ ಎಲ್ಲರೂ ಒಂದಾಗಿ ಎಚ್ಚೆತ್ತುಕೊಂಡರೆ ಒಳಿತಲ್ಲವೇ…!? – ✍️ಉಲ್ಲಾಸ್ ಕಜ್ಜೋಡಿ

ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮಿಯರನ್ನು ಆಹ್ವಾನಿಸಿರುವುನ್ನು ಖಂಡಿಸಿ ಪ್ರತಿಭಟನೆ – ಮನವಿ ಸಲ್ಲಿಕೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಕಿರುಷಷ್ಠಿ ಮಹೋತ್ಸವದ  ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.      ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...

ಥಲಸ್ಸೆಮಿಯಾ ಖಾಯಿಲೆಗೆ ಹೊಸ ಚಿಕಿತ್ಸೆಯಾದ ನಾವೆಲ್ ಥೆರಪಿಗೆ ಅನುಮೋದನೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ  ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು.  ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...
Loading posts...

All posts loaded

No more posts

error: Content is protected !!