ಸುಬ್ರಹ್ಮಣ್ಯದಲ್ಲಿ 24×7 ತುರ್ತು ಚಿಕಿತ್ಸಾ ಘಟಕಕ್ಕಾಗಿ ಆರೋಗ್ಯ ಸಚಿವರಿಗೆ ಮನವಿಯೊಂದಿಗೆ ಒತ್ತಾಯ

ಸುಬ್ರಹ್ಮಣ್ಯ ಏಪ್ರಿಲ್ 19 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದು ಇಲ್ಲಿಯ ಅತ್ಯುನ್ನತ ಸೇವೆಗಳಾದ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮುಂತಾದ ಸೇವೆಗಳನ್ನು ಪೂರೈಸಿ ತೆರಳುತ್ತಾರೆ. ಆದರೆ ಇಲ್ಲಿ ಅನಾರೋಗ್ಯಕ್ಕೆ ತುತ್ತಾದ ಭಕ್ತರಿಗೆ...

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಗುತ್ತಿಗಾರಿನಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು...
Ad Widget

“ನಾರಿಶಕ್ತಿ ವಂದನ ಕಾಯ್ದೆಯನ್ವಯ ಮಹಿಳೆಯರಿಗೆ ಮೀಸಲಾತಿಯಲ್ಲಿ 33% ಹೆಚ್ಚಳಕ್ಕೆ ನಿರ್ಧಾರ – ಕೇಂದ್ರ ಸರ್ಕಾರದ ಈ ನಿರ್ಧಾರ ಹೊಸ ಯುಗದ ಉದಯ” : ಶಾಸಕಿ ಭಾಗೀರಥಿ ಮುರುಳ್ಯ ; ಪತ್ರಿಕಾಗೋಷ್ಠಿ ನಡೆಸಿ ಕಾಯ್ದೆ ಸ್ವಾಗತಿಸಿದ ಸುಳ್ಯದ ಬಿಜೆಪಿ ಮಹಿಳಾ ಮೋರ್ಚಾ

“ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು(33%) ಮೀಸಲಾತಿ ನೀಡುವ ನಾರಿಶಕ್ತಿ ವಂದನಾ ಕಾಯ್ದೆಯು ಲೋಕಸಭೆಯಲ್ಲಿ ಮಂಡನೆಗೊಳ್ಳಲಿದ್ದು, ಇದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಹೊಸ ಯುಗದ ಉದಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಎ.16ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ...

ನಾಳೆ(ಏ.09) ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...

ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಮುಂದೂಡಲಾಗಿದೆ.ಚುನಾವಣಾ ನೀತಿಸಂಹಿತೆ ಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಅಮರ ಸುದ್ದಿ ವಿಶೇಷ ವರದಿ ; ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮ ; ಸ್ವಾವಲಂಬಿ ಮಹಿಳೆಯರಿಗೆ ಸ್ಫೂರ್ತಿ ತುಂಬಿದ “ಸಂಜೀವಿನಿ ಮಾಸಿಕ ಸಂತೆ”

ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...

ಏ.01 ರಿಂದ ಜನಗಣತಿ ಪ್ರಾರಂಭ ; ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ – ಸಾರ್ವಜನಿಕರಿಗೆ ಸ್ವಯಂ ಗಣತಿಗೆ ಅವಕಾಶ

ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್‌ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...

“ಅಮರ ಸುದ್ದಿ ವಿಶೇಷ ವರದಿ” ; ಸುಳ್ಯ ತಾಲೂಕಿನ ಬಾಳುಗೋಡು, ಮಡಪ್ಪಾಡಿ, ಅರಂತೋಡು, ಶಾಂತಿನಗರ, ಜಾಲ್ಸೂರು ಹಾಗೂ ಅಜ್ಜಾವರ ಸೇರಿದಂತೆ ಹಲವು ಕಡೆಗಳಲ್ಲಿ ಕಂಡುಬರುತ್ತಿವೆ “ಮತದಾನ ಬಹಿಷ್ಕಾರದ ಬ್ಯಾನರ್ ಗಳು” – “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಮತದಾರರು

ಉಲ್ಲಾಸ್ ಕಜ್ಜೋಡಿಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಇನ್ನಿತರ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ “ಮತದಾನ ಬಹಿಷ್ಕಾರದ ಕೂಗು” ಕೇಳಿಬರುತ್ತಿದ್ದು, ಜನಪ್ರತಿನಿಧಿಗಳ ವಿರುದ್ಧ ಮತದಾರರು “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು “ಮತದಾನ ಬಹಿಷ್ಕಾರದ ಬ್ಯಾನರ್” ಗಳನ್ನು ಅಳವಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಹರಿಹರ ಪಳ್ಳತ್ತಡ್ಕ ಗ್ರಾಮದ...

1ನೇ ತರಗತಿ ದಾಖಲಾತಿಗೆ ವಯಸ್ಸಿನ ಮಿತಿ ಸಡಿಲಿಕೆಗೆ ನಿರ್ಧರಿಸಿದ ಸರ್ಕಾರ ; ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ ಸಚಿವ ಮಧು ಬಂಗಾರಪ್ಪ

ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.

ದಾವಣಗೆರೆ ಚುನವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.
Loading posts...

All posts loaded

No more posts

error: Content is protected !!