- Saturday
- March 7th, 2026
ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್...
ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...
ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...
ಐಐಟಿ ಮುಂಬಯಿ, ಎಐಸಿಟಿಇ ಮತ್ತು ಇಸ್ರೋ ಸಂಸ್ಥೆಗಳು ಜಂಟಿಯಾಗಿ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿರುವ ಮ್ಯಾಪಥಾನ್ 2020-21 (ರಾಷ್ಟ್ರೀಯ ಮಟ್ಟದ ಸಹಕಾರಿ ಭಾರತೀಯ ಮ್ಯಾಪಿಂಗ್ ಈವೆಂಟ್) ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಬಡಗ ಮಿಜಾರು ಇಲ್ಲಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ (ಎಂಐಟಿಐ) ಇದರ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ...
ಮಂಗಳೂರಿನ ಪ್ರತಿಷ್ಠಿತ ಸ್ವರ್ಣೋದ್ಯಮಿ, ಸತ್ಯ, ಶುದ್ಧ ಮನಸ್ಸಿನ ಸನ್ಮಾನ್ಯ ಶ್ರೀ ರಮೇಶ್ ಕೃಷ್ಣ ಶೇಟ್ ರವರ ಶೈಕ್ಷಣಿಕ, ಧಾರ್ಮಿಕ ಸಮಾಜಸೇವೆಯನ್ನು ಪರಿಗಣಿಸಿ ಅಮೇರಿಕಾದ 'ಐಸ್ಟೀನ್' ವಿಶ್ವವಿದ್ಯಾನಿಲಯವು 2 ವರ್ಷಗಳ ಹಿಂದೆ ಗೌರವ ಡಾಕ್ಟರೇಟ್ ಗೆ ಆಯ್ಕೆಮಾಡಿದ್ದು, ಅವರ ಅನಾರೋಗ್ಯ ಹಾಗೂ ಕೋವಿಡ್ ನಿಬಂಧನೆಯ ಹಿನ್ನೆಲೆಯಿಂದ ಕಾರ್ಯಕ್ರಮಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಸದ್ಯ ಅವರ ಗೌರವ ಡಾಕ್ಟರೇಟ್ ನ್ನು...
ಕರುನಾಡು ಸಾಹಿತ್ಯ ಪರಿಷತ್ತು,ತಾಲ್ಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಯಲ್ಲಿ 1ರಿಂದ 5 ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಯ 5ನೇ ತರಗತಿಯ ಮನುಜ್ಞ ಯು.ಬಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ ಭಾಜನರಾಗಿದ್ದಾರೆ....
ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಂಗಿನ ಎಣ್ಣೆಯ ಮಿಲ್ ಆರಂಭಿಸಿ ಯಶಸ್ವಿಯಾಗಿ ಉದ್ಯಮ ನಡೆಸಿಕೊಂಡು, ಸಮಾಜಸೇವಕರಾಗಿ ಜನಾನುರಾಗಿಯಾಗಿದ್ದ ಗುರುಪ್ರಸಾದ್ ಪಂಜರವರು ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ನವೀಮುಂಬೈಯ ನೆರುಲ್ ನಲ್ಲಿ ಬಾಲಾಜಿ ಕೊಬ್ಬರಿ ಎಣ್ಣೆಮಿಲ್ ವ್ಯಾಪಾರವನ್ನು ಪ್ರಾರಂಭಿಸಿದ್ದಾರೆ. ಸುಳ್ಯದ ಉತ್ಪನ್ನವನ್ನು ಮುಂಬೈಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ಲೋಕಲ್ ಉತ್ಪನ್ನವನ್ನು ಗ್ಲೋಬಲ್ ಉತ್ತನ್ನವಾಗಿರಿಸುವ ಆತ್ಮನಿರ್ಭರ ಬಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸುತ್ತ ಪ್ರಯತ್ನ ನಡೆಸಿದ್ದಾರೆ....
ಬಿ.ಎಸ್ ಯಡಿಯೂರಪ್ಪ ನೇತ್ರತ್ವದ ರಾಜ್ಯ ಸರ್ಕಾರವು ಒಂದು ವರ್ಷದ ಅವಧಿ ಪೂರೈಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸುವ ಸಾಧ್ಯತೆ ಇದ್ದು, ಸುಳ್ಯ ಶಾಸಕ ಎಸ್.ಅಂಗಾರರು ಸಚಿವರಾಗುವ ಸಾಧ್ಯತೆ ನಿಚ್ಚಳವಾಗಿದೆ. ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಇಲಾಖೆ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕೈ ಬಿಟ್ಟು ಇವರ ಬದಲಿಗೆ ಅಂಗಾರರನ್ನು ಮಂತ್ರಿ ಸ್ಥಾನಕ್ಕೆ...
ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ...
Loading posts...
All posts loaded
No more posts
