ಆ.03: ಬಿಜೆಪಿಯಿಂದ ಮೈಸೂರು ಚಲೋ ಯಾತ್ರೆ – ಭಾಗವಹಿಸಲು ತೆರಳಿದ ದ.ಕ.ಯುವಮೋರ್ಚಾ ತಂಡ

ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
Ad Widget

ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ – ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್‌ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...

ದಕ್ಷಿಣ ಕನ್ನಡ ಕೈ ಹಿಡಿಯದ ಜಾತಿ ಲೆಕ್ಕಾಚಾರ – ಒಂದು ಲಕ್ಷಕ್ಕೂ ಅಧಿಕ ಮುನ್ನಡೆ ಕಾಯ್ದುಕೊಂಡ ಕ್ಯಾಪ್ಟನ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಚಾರದಲ್ಲಿ ಗೆಲುವು ನಿರೀಕ್ಷಿಸಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಇದೀಗ ಎಣೆಸಿದ 10 ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಭಾರಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಕೊನೆಯ ಸುತ್ತು ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಲೆಕ್ಕಚಾರದಂತೆ ಎರಡು ಲಕ್ಷವನ್ನು ದಾಟಿದರು ಅಚ್ಚರಿಪಡಬೇಕಿಲ್ಲ

ಮೊದಲ ಬಾರಿಗೆ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ – ಎರಡು ಸ್ಥಾನಗಳನ್ನು ತೆಕ್ಕೆಗೆ ಹಾಕಿಕೊಳ್ಳುವ ಸನಿಹದಲ್ಲಿ ಬಿಜೆಪಿ

ಸ್ವಾತಂತ್ರ್ಯದ ಬಳಿಕ ಕೇರಳ ರಾಜ್ಯದ ಇತಿಹಾಸದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ತನ್ನ ನೆಲೆಯನ್ನು ಕಾಣಲು ಅಸಾಧ್ಯವಾಗಿತ್ತು. ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ಚಿತ್ರನಟ ಬಿಜೆಪಿ ನಾಯಕ ಸುರೇಶ್ ಗೋಪಿ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದೀಗ ಗೆಲುವಿನ ಸನಿಹದಲ್ಲಿದ್ದು ಮೊದಲ ಸುತ್ತಿನಿಂದ ಈ ಕ್ಷಣದವರೆಗೆ ಮೊದಲ ಸ್ಥಾನದಲ್ಲಿಯೇ ಮುಂದಡಿಯಿಡುತ್ತಿದ್ದು ಗೆಲವು ನಿಚ್ಚಳವಾಗಿ...

ಉಡುಪಿ : ಕೋಟ ಶ್ರೀನಿವಾಸ್ ಪೂಜಾರಿ ಲಕ್ಷಕ್ಕೂ ಮಿಕ್ಕಿ ಮುನ್ನಡೆ

ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ಹದಿನೇಳು ಸಾವಿರದ ಏಳುನೂರು ತೊಂಬತ್ತು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ಸನಿಹದಲ್ಲಿ ಕಾಣಿಸುತ್ತಿದಾರೆ.

ಹಾಸನದಲ್ಲಿ ಮತ್ತೆ ಹಾವು ಏಣಿ ಆಟ ಮುಂದುವರಿಕೆ..

ಹಾಸನ: ಹಾಸನ ಲೋಕಸಭಾ ಅಭ್ಯರ್ಥಿಗಳಲ್ಲಿ ಹಾವು ಏಣಿ ಆಟ ಮುಂದುವರೆದಿದ್ದು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇದೀಗ ಎಸ್ ಐ ಟಿ ವಶದಲ್ಲಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಫೈಟ್ ನಡೆಯುತ್ತಿದ್ದು ಇಲ್ಲಿ ಭಾರಿ ಕುತೂಹಲ ಮೂಡಿಸಿದ್ದು ಹಾವು ಏಣಿ ಆಟ ಮುಂದುವರೆದಿದೆ.

ಲೋಕಸಭಾ ಚುನಾವಣೆ ಫಲಿತಾಂಶ : ಎನ್ ಡಿ ಎ ಗೆ ತೀವ್ರ ಸ್ಪರ್ಧೆ ನೀಡುತ್ತಿರುವ ಇಂಡಿಯಾ

ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತ ಎಕ್ಸಿಟ್ ಪೋಲ್ ಗಳಿಗೆ  ಒಂದು ರೀತಿಯಲ್ಲಿ ವ್ಯತಿರಿಕ್ತ ಫಲಿತಾಂಶ ಬರುತ್ತಿದ್ದು ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಸುತ್ತಿನಿಂದಲೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಕೇರಳದಲ್ಲಿ ಒಂದು ಖಾತೆಯನ್ನು ಬಿಜೆಪಿ ತೆರೆಯುವ...

ನಾಳೆ (ಎ.10) ದ್ವಿತೀಯ ಪಿಯುಸಿ ಫಲಿತಾಂಶ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಎ.10 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯನ್ನು ನಡೆಸಲಿದೆ ನಂತರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳ್ಳಾರೆಯಲ್ಲಿ ಸಾರ್ವಜನಿಕ ರುದ್ರಭೂಮಿ ನಿರ್ಮಿಸಲು ಜನರ ಆಗ್ರಹ – ಸರಕಾರದಿಂದ ಮಂಜೂರಾದ 30 ಲಕ್ಷ ಅನುದಾನಕ್ಕೆ ಅಡ್ಡಗಾಲು – ಲಕ್ಷಾಂತರ ಹಣ ದುರುಪಯೋಗ ಆಗಿದೆಯೇ?

ಸುಳ್ಯ ತಾಲೂಕಿನಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಪೇಟೆಗಳಲ್ಲಿ ಬೆಳ್ಳಾರೆಯೂ ಒಂದು. ಇಲ್ಲಿ ವ್ಯವಸ್ಥಿತ ರುದ್ರಭೂಮಿ ಮರೀಚಿಕೆಯಾಗಿಯೇ ಉಳಿದಿದ್ದು, ಆಡಳಿತ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆ ಕಂದಾಯ ಇಲಾಖೆಯು ಸುಮಾರು 84 ಸೆಂಟ್ಸ್ ಜಾಗ ಮಂಜೂರು ಗೊಳಿಸಿದ್ದು ಇದರ ಅಭಿವೃದ್ಧಿಗಾಗಿ ಈಗಾಗಲೇ ಲಕ್ಷಾಂತರ ಹಣ ವ್ಯಯಿಸಲಾಗಿದೆ. ಲಕ್ಷಾಂತರ ಖರ್ಚು ಮಾಡಿ ಅವೈಜ್ಞಾನಿಕ ರೀತಿಯಲ್ಲಿ...
Loading posts...

All posts loaded

No more posts

error: Content is protected !!