ವಿಮಾನಯಾನ ಸೇವೆ ಇಂದಿನಿಂದ ಆರಂಭ- ಶಾಂತವಾಗಿದ್ದ ಆಕಾಶದಲ್ಲಿ ಮತ್ತೆ ಆರ್ಭಟಿಸಲಿವೇ

ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....

ಕೇಂದ್ರ ಸಚಿವ ಸದಾನಂದ ಗೌಡ ರಿಗೆ ಜಾಲತಾಣದಲ್ಲಿ ಅವಹೇಳನ- ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣದಲ್ಲಿ ಗೌರವಾನ್ವಿತ ಕೇಂದ್ರ ಮಂತ್ರಿಯವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವ ಜೊತೆಗೆ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು...
Ad Widget

ಆಯುರ್ವೇದ ಔಷಧಿ ಜನರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕೊರೊನದ ವಿರುದ್ಧ ದೇಹವನ್ನು ಅಣಿಗೊಳಿಸುತ್ತದೆ- ಕಟೀಲ್

ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...

ರಾಜ್ಯದಲ್ಲಿ ಇಂದು ೧೯೬ ಸೋಂಕಿತರು- ಕರಾವಳಿಯಲ್ಲೂ ಹೆಚ್ಚಿದ ಆತಂಕ

ಮೇ ೨೩ : ಕರ್ನಾಟಕ ರಾಜ್ಯದಲ್ಲಿ ಇಂದು ಒಟ್ಟು ೧೯೬ ಸೋಂಕಿತರು ಪತ್ತೆಯಾಗಿದ್ದು ಆತಂಕ ಹೆಚ್ಚಾಗಿದೆ. ಕರಾವಳಿ ಪ್ರದೇಶದಲ್ಲಿ ಮುಂದುವರೆದ ಕೊರೊನ ಅಟ್ಟಹಾಸದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನ ಪ್ರಕರಣ ದೃಢವಾಗಿ ದಕ್ಷಿಣದಲ್ಲಿ ಎರಡು ಉಡುಪಿಯಲ್ಲಿ ಐದು ಪ್ರಕರಣ ದಾಖಲಾಗಿದೆ.ಉಸಿರಾಟದ ಸಮಸ್ಯೆ ಇದ್ದ ಬೆಳ್ತಂಗಡಿ ಶಿರ್ಲಾಲು ಮೂಲದ 41 ವರ್ಷದ ಮಹಿಳೆ ಮತ್ತು...

ಈ ಬಾರಿಯು ಕುಕ್ಕೆ ಆದಾಯ ಶತಕೋಟಿ ಸಮೀಪ..!

ರಾಜ್ಯದ ಆರ್ಥಿಕತೆಗೆ ಅತೀಹೆಚ್ಚು ಕೊಡುಗೆ ನೀಡುತ್ತಿರುವ ದೇವಾಲಯಗಳ ಪಟ್ಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊದಲ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ 98,92,24,193.34 ರೂ. ಆದಾಯ ಗಳಿಸಿ ಈ ಬಾರಿಯೂ ಮೊದಲ ಸ್ಥಾನ ಗಳಿಸಿದೆ. ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು...

ಎಸ್ ಎಸ್ ಎಲ್ ಸಿ ಪರೀಕ್ಷೆ ಜೂ ೨೫ ರಿಂದ ಆರಂಭ

ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಡಿ.ಸಿ.ಯಿಂದ ಆಡಳಿತ ಮಂಡಳಿ ನೇಮಕ

ಕೊರೊನ ವೈರಸ್ ಭೀತಿಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 6012 ಗ್ರಾಮ ಪಂಚಾಯತ್ ಗಳಿದ್ದು ಇದರಲ್ಲಿ ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿ ಉಳಿದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರದ ಅವಧಿ ಜೂನ್ -ಜುಲೈರೊಳಗೆ ಅಂತ್ಯಗೊಳ್ಳಲಿದೆ. ಆದರೆ ಕೊರೊನ...

ಇಂದಿನಿಂದ KSRTC ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು :ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ. ಹೊರ ರಾಜ್ಯದ ಪ್ರಯಾಣಿಕರಿಗೆ ಆನ್ ಲೈನ್ ಬುಕ್ಕಿಂಗ್ ಆರಂಭಿಸಿರುವ ಕೆ ಎಸ್ ಆರ್ ಟಿ ಸಿ ಇನ್ನು ಓಡಾಟವನ್ನು ಆರಂಭಿಸಲಿದೆ. ಸೇವಾ ಸಿಂಧು ವೆಬ್ ಸೈಟ್ ಮೂಲಕ ಹೊರ ರಾಜ್ಯಗಳಿಗೆ ತೆರಳುವವರಿಗಾಗಿ ಈ ಸೇವೆಯನ್ನು...
error: Content is protected !!