ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ : ವೈದ್ಯರ ನೇಮಕಕ್ಕೆ ಭರವಸೆ – ಹೋರಾಟ ಮುಂದುವರಿಸಲು ಗ್ರಾಮಸ್ಥರ ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...

ಸುಳ್ಯ: ಯು.ಟಿ. ಖಾದರ್ ಗೆ ಸಾರ್ವಜನಿಕ ಸನ್ಮಾನ | ಜನರ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಶಕ್ತಿ; ಸಚಿವ ಯು.ಟಿ. ಖಾದರ್

ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...
Ad Widget

ಜು. 11ರಂದು ರಾಷ್ಟ್ರವ್ಯಾಪಿ ಲೋಕ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಸುಳ್ಯ, ಜು. 4: ರಾಷ್ಟ್ರಾದ್ಯಂತ ಜು. 11ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದರು. ಅವರು...

“ದ.ಕ.ಗೌಡ ಸಮುದಾಯದ ಬಗ್ಗೆ ಎಸ್. ಆರ್.ವಿಶ್ವನಾಥ್ ಹೇಳಿಕೆ ಖಂಡನೀಯ” – ಹೇಳಿಕೆ ಹಿಂಪಡೆಯುವಂತೆ ಸುಳ್ಯ ಗೌಡರ ಯುವಸೇವಾ ಸಂಘ ಆಗ್ರಹ

“ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕರ್ನಾಟಕ ರಾಜ್ಯದ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಗೌಡ ಸಮುದಾಯದವರು ಒಕ್ಕಲಿಗರಲ್ಲ ಎಂದು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅದನ್ನು ತಕ್ಷಣ ಹಿಂಪಡೆಯಬೇಕು” ಎಂದು ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಆಗ್ರಹಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕುಮಾರ ಪರ್ವತ ಚಾರಣಕ್ಕೆ ಟ್ರೆಕ್ಕಿಂಗ್ ಗೈಡ್‌ಗಳ ನೇಮಕಾತಿ ; ಆಸಕ್ತ ಅಭ್ಯರ್ಥಿಗಳ ನೋಂದಣಿಗೆ ಆಹ್ವಾನ

ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಗ್ರಾಮದಲ್ಲಿರುವ ಪುಷ್ಪಗಿರಿ ವನ್ಯಜೀವಿ ವಲಯ ವ್ಯಾಪ್ತಿಗೆ ಒಳಪಡುವ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವ ಪ್ರವಾಸಿಗರಿಗೆ ಸುರಕ್ಷಿತ, ಶಿಸ್ತುಬದ್ಧ ಹಾಗೂ ಗುಣಮಟ್ಟದ ಟ್ರೆಕ್ಕಿಂಗ್ ಅನುಭವ ಒದಗಿಸುವ ಉದ್ದೇಶದಿಂದ ಟ್ರೆಕ್ಕಿಂಗ್ ಗೈಡ್ ಗಳ ಅವಶ್ಯಕತೆಯಿದ್ದು, ಟ್ರೆಕ್ಕಿಂಗ್ ಗೈಡ್ ಗಳಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಆಹ್ವಾನಿಸಲಾಗಿದ್ದು, ಪ್ರಕೃತಿ ಮತ್ತು ಟ್ರೆಕ್ಕಿಂಗ್ ಚಟುವಟಿಕೆಗಳಲ್ಲಿ...

ಕುಕ್ಕೆ ಸುಬ್ರಹ್ಮಣ್ಯ : 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನ

ಸುಬ್ರಹ್ಮಣ್ಯ ಜೂನ್ 27 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂ.27 ಶನಿವಾರದಂದು 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನವಾಗಿದೆ. ಶುಕ್ರವಾರ ರಂಜಾನ್ ರಜೆ, ಶನಿವಾರ ನಾಲ್ಕನೇ ಶನಿವಾರ ರಜೆ ಹಾಗೂ ಆದಿತ್ಯವಾರ ರಜೆಯಾಗಿ ಸರಣಿ ರಜೆಗಳು ಬಂದ ಕಾರಣ ಸರಕಾರಿ ಕಚೇರಿಗಳು ಇನ್ನಿತರ ಸಂಘ-ಸಂಸ್ಥೆಗಳ...

ವಿದ್ಯುತ್ ಖಾಸಗೀಕರಣ ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ಸರಕಾರಕ್ಕೆ ಮನವಿ

ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ. ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ...

ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸುಳ್ಯದ ಗುತ್ತಿಗೆದಾರರ ಸಂಘ ಭಾಗಿ

ಕ.ರಾ.ಅ.ಪ.ವಿ.ಗು.ಸಂಘ(ರಿ.) ಬೆಂಗಳೂರು.ದ.ಕ ಜಿಲ್ಲಾ ಸಮಿತಿ, ದ.ಕ.ಜಿಲ್ಲಾ ಸಮಿತಿ-ಉಪಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರರ ಉಳಿವಿಗಾಗಿ ಹೋರಾಟ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಬ್ರಹತ್ ಪ್ರತಿಭಟನೆ ಜೂ.22ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಿತು.  ಈ ಪ್ರತಿಭಟನೆಯಲ್ಲಿ ಸುಳ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಉಪಾಧ್ಯಕ್ಷರಾದ ದಾಮೋದರ ಮಂಚಿ, ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್,...

ಅಮರ ಸುದ್ದಿ ವಿಶೇಷ ವರದಿ – ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇನ್ನೂ ಬಂದಿಲ್ಲ ಖಾಯಂ ವೈದ್ಯಾಧಿಕಾರಿಗಳು..!! – ವೈದ್ಯಾಧಿಕಾರಿಗಳಿಲ್ಲದೇ ಅನಾಥವಾಗಿರುವ ಆರೋಗ್ಯ ಕೇಂದ್ರಕ್ಕೆ ಔಷಧಿ ನೀಡುವವರು ಬೇಕಾಗಿದ್ದಾರೆ..!? – ವರದಿ : ಉಲ್ಲಾಸ್ ಕಜ್ಜೋಡಿ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೇ ಇರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳು ಕೂಡ ಸರಿಯಾದ ರೀತಿಯಲ್ಲಿ ವೇತನ ಪಾವತಿ ಆಗದೇ ಇರುವ ಕಾರಣ ರಾಜೀನಾಮೆ ನೀಡಿ ತೆರಳಿರುವ ಬಗ್ಗೆ ಕಳೆದ ಐದು ತಿಂಗಳುಗಳ ಹಿಂದೆ ಅಂದರೆ ಜನವರಿ ತಿಂಗಳಿನಲ್ಲಿ “ಅಮರ ಸುದ್ದಿ ಪತ್ರಿಕೆ”...

ಪುತ್ತೂರು: ರಕ್ತದಾನಿಗಳ ದಿನಾಚರಣೆ – ರೋಟರಿ ಕ್ಲಬ್ ವತಿಯಿಂದ 109 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ

ಪುತ್ತೂರು ರೋಟರಿ ಬ್ಲಡ್ ಸೆಂಟರ್ ಹಾಗೂ ರೋಟರಿ ಕ್ಲಬ್ ವತಿಯಿಂದ ರೋಟರಿ ಜಿ.ಎಲ್.ಸಭಾಭವನದಲ್ಲಿ ಜೂ.14 ರಂದು ರಕ್ತ ದಾನಿಗಳ ದಿನಾಚರಣೆ ಹಾಗೂ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.‌ ಅತೀ ಹೆಚ್ಚು ಬಾರಿ ರಕ್ತದಾನ ಮಾಡುವುದರೊಂದಿಗೆ, ರಕ್ತದಾನ ಶಿಬಿರ ವನ್ನು ಸಂಘಟಿಸಿದ ದೇವಚಳ್ಳ ಗ್ರಾ.ಪಂ.ಮಾಜಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅವರನ್ನು ಸನ್ಮಾನಿಸಿದರು....
Loading posts...

All posts loaded

No more posts

error: Content is protected !!