- Wednesday
- July 29th, 2026
“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...
ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....
ಸರ್ವರ್ ಸಮಸ್ಯೆಯಿಂದಾಗಿ ಗ್ಯಾಸ್ ಬುಕ್ಕಿಂಗ್ ಮಾಡಲು ಗ್ರಾಹಕರು ಪರದಾಡುವಂತಾಗಿದೆ. “ಒಮ್ಮೆ ಬುಕ್ ಮಾಡಿದ ಬಳಿಕ ಇನ್ನೊಮ್ಮೆ ಗ್ಯಾಸ್ ಬುಕ್ಕಿಂಗ್ ಮಾಡಲು 30 ಕಳೆದಿರಬೇಕು” ಎಂಬ ಸರಕಾರದ ಆದೇಶ ಹಿನ್ನೆಲೆ ಹಾಗೂ ಗ್ಯಾಸ್ ಕೊರತೆ ಆಗಬಹುದೆಂಬ ಭಯದಿಂದ ಗ್ರಾಹಕರು ಬುಕ್ಕಿಂಗ್ ಮಾಡಲು ಮುಗಿಬಿದ್ದಿರುವುದರಿಂದ ಸರ್ವರ್ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಬುಕ್ಕಿಂಗ್ ಮಾಡಿದವರಿಗೂ ಓಟಿಪಿ ಬಾರದೇ ಸಮಸ್ಯೆಯಾಗಿದ್ದು ಕಂಪೆನಿಗಳು ಈ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾ.07 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾ.08 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾ.09 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ...
ಸುಬ್ರಹ್ಮಣ್ಯ : ಭಾರತ ಸರ್ಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ ದೇವೆಗೌಡರು ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಮತ್ತು ತುಲಾಭಾರ ಸೇವೆ ನೆರವೇರಿಸಿದರು. ಮುಂಜಾನೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ದೇವರ ದರುಶನ ಮಾಡಿದರು. ನಂತರ ಹೊರಾಂಗಣದಲ್ಲಿ ಶ್ರೀ...
ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
ಭಾರತ ಸರಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರು ಮಾ.01 ರವಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4:00 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿ.ವಿ.ಐ.ಪಿ ಅತಿಥಿಗೃಹಕ್ಕೆ ಬಂದರು. ಈ ಸಂಧರ್ಭದಲ್ಲಿ ಶ್ರೀ ದೇವಳದ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಾ.01 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.ಮಾ.01 ರಂದು ಸಂಜೆ ದೇವಸ್ಥಾನಕ್ಕೆ ಕುಟುಂಬದೊಂದಿಗೆ ಆಗಮಿಸಲಿದ್ದು ಮಾ.02 ರಂದು ಬೆಳಿಗ್ಗೆ 6 ಗಂಟೆಗೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...
“ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2047ರ ವಿಕಸಿತ ಭಾರತ ಕಲ್ಪನೆಗೆ ಪೂರಕವಾಗಿ ಉದ್ಯೋಗ ಖಾತರಿ ಯೋಜನೆಯ ಹೆಸರು ಬದಲಾಯಿಸಿ ವಿಬ್ ಜಿ ರಾಮ್ ಜಿ ಯೋಜನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಇದರ ಸತ್ಯಾಸತ್ಯತೆಯನ್ನು ಅರಿಯದೇ, ಜನರ ದಿಕ್ಕಿ ತಪ್ಪಿಸುವ ನಿಟ್ಟಿನಲ್ಲಿ ಪಾದಯಾತ್ರೆ ಮಾಡುತ್ತಿದೆ. ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ಸೋತು ಕಂಗಾಲಾಗಿರುವ ಕಾಂಗ್ರೆಸ್ ಹತಾಶ ಮನೋಭಾವದಿಂದ ಕೇಂದ್ರದಲ್ಲಿ...
Loading posts...
All posts loaded
No more posts
