- Thursday
- April 23rd, 2026
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. 25 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಮಹಮ್ಮದ್ ಸಫ್ವಾನ್ 568 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಹರಿಹರ ಪಳ್ಳತ್ತಡ್ಕದ ಸರ್ಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 02 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಧೀರಜ್ 455, ಶ್ರಾವಣಿ 397 ಅಂಕ ಪಡೆದಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಇಲ್ಲಿನ ವಿದ್ಯಾರ್ಥಿನಿ ನೇಹಾ.ಸಿ.ಪಿ 612 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಪರೀಕ್ಷೆಗೆ 19 ವಿದ್ಯಾರ್ಥಿಗಳು ಹಾಜರಾಗಿ 12 ವಿದ್ಯಾರ್ಥಿಯರು ವಿಶಿಷ್ಟ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಎಲಿಮಲೆಯ ಜ್ಞಾನದೀಪ ವಿದ್ಯಾ ಸಂಸ್ಥೆ 100% ಫಲಿತಾಂಶ ದಾಖಲಿಸಿಕೊಂಡಿದೆ. ಪರೀಕ್ಷೆ ಬರೆದ 23 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾದರೆ ಉಳಿದೆಲ್ಲ ವಿದ್ಯಾರ್ಥಿಗಳು 67% ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ತೃಷಾ. ಎಮ್. ಸಿ. 588 ಅಂಕ ಗಳಿಸಿರುತ್ತಾರೆ.
“ಹೆಸರಾಂತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲೇ ಬೇಸಿಗೆಯ ರಜಾ ಅವಧಿಯಲ್ಲಿ ವಿಶೇಷ ಕೌಶಲ ಸಂಭ್ರಮದ ಅಡಿಯಲ್ಲಿ ಹಲವು ಕೌಶಲ್ಯಭರಿತ ತರಬೇತಿಯನ್ನು ವಿವಿಧ ಆಯಾಮದಲ್ಲಿ ನೀಡಿ ಭವಿಷ್ಯದ ಅಧಿಕಾರಿಗಳನ್ನು ಸೃಷ್ಟಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ” ಎಂದು ರೋಟರಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ನಿಕಟ ಪೂರ್ವ ಅಧ್ಯಕ್ಷೆ ಶ್ರೀಮತಿ ರಾಜೇಶ್ವರಿ ಆಚಾರ್...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ ಏ.25 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಎ.21ರಂದು ಡಾ. ಅಂಬೇಡ್ಕರ್ ಸಭಾಭವನದಲ್ಲಿ “ಅರೆಭಾಷೆ ಐಸಿರಿ - ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮ” ನಡೆಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ...
ದಿನಾಂಕ : 23 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೈದರಬಾದ್ನ ಉದ್ಯಮಿ ರಾಸನ್ ಗ್ರೂಪ್ನ ಚೇರ್ಮೆನ್ ಕಣ್ನಕರ್ ರವೀಂದ್ರ ರೆಡ್ಡಿ ಅವರು ವಜ್ರಖಚಿತ ಚಿನ್ನದ ಸರವನ್ನು ಬುಧವಾರ ಸಮರ್ಪಿಸಿದರು. ಸುಮಾರು ರೂ.12 ಲಕ್ಷದ 44 ಸಾವಿರ ರೂಪಾಯಿ ಮೌಲ್ಯದ ಸರವನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ...
Loading posts...
All posts loaded
No more posts
