ಬೆಳ್ಳಾರೆ : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025 ಸಮಾರೋಪ ಸಮಾರಂಭ ;   “ಗ್ರಂಥಾಲಯಗಳು ಜ್ಞಾನ ಕೇಂದ್ರಗಳಾಗಲಿ” : ಬಿ.ವಿ ಸೂರ್ಯನಾರಾಯಣ

“ಓದಿನಿಂದ ಮಾತ್ರ ಮನುಷ್ಯ ಪರಿಪೂರ್ಣನಾಗುತ್ತಾನೆ. ಪ್ರತಿಯೊಂದು ಗ್ರಂಥಾಲಯಗಳು ಜ್ಞಾನ ಪಸರಿಸುವ ಕೇಂದ್ರಗಳಾಗಲಿ” ಎಂದು ವಿಶ್ರಾಂತ ಪ್ರಾಂಶುಪಾಲರಾದ ಬಿ.ವಿ ಸೂರ್ಯನಾರಾಯಣ ಹೇಳಿದರು. ಅವರು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ  ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ...

ಬೆಳ್ಳಾರೆ : ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ಶುಭಾರಂಭ

ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ಸುನಿಲ್ ಕುಮಾರ್ ಆಲಂಕಾರು ಮಾಲಕತ್ವದ ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ನ.27 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರದ ಲೈವ್ ಜ್ಯೂಸ್ ಐಟಂಗಳು ಮತ್ತು ದಿನಬಳಕೆಯ ವಸ್ತುಗಳು ದೊರೆಯುತ್ತವೆ ಎಂದು ಮ್ಹಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
Ad Widget

ಡಿ.01 ರಂದು ನಾವೂರಿನಲ್ಲಿ ಭಟ್ಸ್ ಕ್ಯಾಂಟೀನ್ ಶುಭಾರಂಭ

ಸುಳ್ಯ ಗಾಂಧಿನಗರದ ನಾವೂರು ರಸ್ತೆಯ ಬಯಂಬು ಕಾಂಪ್ಲೆಕ್ಸ್ ನಲ್ಲಿ  ಭಟ್ಸ್ ಕ್ಯಾಟರರ್ಸ್‌ ರವರ  ಭಟ್ಸ್ ಕ್ಯಾಂಟೀನ್(ಸಸ್ಯಾಹಾರಿ) ಡಿ.01 ರಂದು ಶುಭಾರಂಭಗೊಳ್ಳಲಿದೆ ಎಂದು  ಕೆ.ಹರೀಶ್ ಭಟ್ (ನಿವೃತ್ತ ಮೈನಿಂಗ್ ಇಂಜಿನಿಯರ್)  ತಿಳಿಸಿದ್ದಾರೆ. ಶುದ್ಧ ಸಸ್ಯಹಾರಿ ಕ್ಯಾಟರಿಂಗ್ ವ್ಯವಸ್ಥೆಗಾಗಿ  9544414805, 7034610444 ಸಂಪರ್ಕಿಸಬಹುದು.

ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ. ತರಗತಿ ಆರಂಭ

ಸಂಪಾಜೆ ಗ್ರಾಮದ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಕೇಂದ್ರದಲ್ಲಿ ಐ ಸಿ.ಡಿ.ಎಸ್ ಯೋಜನೆಯಡಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳಿಗೆ ಪುಸ್ತಕವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ ಹಮೀದ್ ಗೂನಡ್ಕ ವಿತರಿಸಿದರು. ಪಂಚಾಯತ್ ಉಪಾಧ್ಯಕ್ಷರಾದ ಎಸ್.ಕೆ ಹನೀಫ್ ಸಂಪಾಜೆ ಸ್ಮಾರ್ಟ್...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ನ. 26ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಕ್ಯಾಬಿನೆಟ್ ಸಚಿವಾಲಯದ ಸೂಚನೆಯ ಅನುಸಾರ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಭಾರತೀಯ ಸಂವಿಧಾನ ಪ್ರತಿಜ್ಞೆಯನ್ನು ಬೋಧಿಸಲಾಯಿತು.18ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿಯನ್ನು ಎನ್.ಎಸ್.ಎಸ್ ವಿದ್ಯಾರ್ಥಿಯಾದ...

ಹರಿಹರ ಪಳ್ಳತ್ತಡ್ಕ : ಕಳೆದ ಕೆಲವು ತಿಂಗಳುಗಳಿಂದ ಸಾರ್ವಜನಿಕ ಶೌಚಾಲಯದಲ್ಲಿ ನೀರಿನ ಸಮಸ್ಯೆ – ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ; ಸ್ಥಳೀಯರಿಂದ ತಾತ್ಕಾಲಿಕ ನೀರಿನ ವ್ಯವಸ್ಥೆ ; ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಆಗ್ರಹ – ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ ಗ್ರಾಮ ಪಂಚಾಯತ್

(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಮುಖ್ಯ ಪೇಟೆಯಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನೀರಿನ ಸಮಸ್ಯೆ ಇದ್ದು, ಇದರಿಂದಾಗಿ ಪ್ರತಿನಿತ್ಯ ಪೇಟೆಗೆ ಬರುವ ಜನರಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, “ಸುಸಜ್ಜಿತ ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಇದ್ದರೂ ಕೂಡ ನೀರಿನ ಸಮಸ್ಯೆಯಿಂದಾಗಿ ನಿರಂತರ ತೊಂದರೆ ಉಂಟಾಗುತ್ತಿದ್ದು,...

ಶುಭ ವಿವಾಹ : ಲತೀಶ್ ಅಲೆಂಗಾರ – ನಮಿತಾ

ಎಣ್ಮೂರು ಗ್ರಾಮದ ಅಲೆಂಗಾರ ಶ್ರೀಮತಿ ಪಾರ್ವತಿ ಮತ್ತು ಮೋನಪ್ಪ ಗೌಡರ ಪುತ್ರ ಲತೀಶ್ ಅವರ ವಿವಾಹವು ಪೆರುವಾಜೆ ಗ್ರಾಮದ ಅಡ್ಯತಕಂಡ ಶ್ರೀಮತಿ ಸಾವಿತ್ರಿ ಮತ್ತು  ಚೆನ್ನಪ್ಪ ಗೌಡರ ಪುತ್ರಿ ನಮಿತಾ ರೊಂದಿಗೆ ನ.27 ರಂದು ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಆತ್ಮಿಕಾ ಜಯನಗರ ತಂಡ ದ್ವಿತೀಯ ಸ್ಥಾನ

ಉಡುಪಿ: ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಇಲ್ಲಿಯ ಪತ್ರಿಕೋದ್ಯಮ ವಿಭಾಗದ ಅಂತಿಮ ವಿಭಾಗದ ವಿದ್ಯಾರ್ಥಿಗಳಾದ ಆತ್ಮಿಕಾ.ಜಿ ಜಯನಗರ ಅವರ ತಂಡಕ್ಕೆ ಕ್ಷೇತ್ರದ ಶಾಸಕರಾದ...

ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ – ಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ  ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ...

ಕುಕ್ಕೆ ಸುಬ್ರಹ್ಮಣ್ಯ :  ಮಹಿಳೆಯ ಮಾಂಗಲ್ಯ ಸರ ಕಳವು – ದೂರು ದಾಖಲು

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾಮಹೋತ್ಸವಕ್ಕೆ ಬಂದಿದ್ದ ಮಹಿಳೆಯೊಬ್ಬರು ಮಾಂಗಲ್ಯ ಸರ ಕಳವಾದ ಘಟನೆ ನ.26 ರಂದು ನಡೆದಿದ್ದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಾತ್ರಾ ಸಂದರ್ಭದಲ್ಲಿ ಜನದಟ್ಟಣೆಯ ಮಧ್ಯೆ ಮಾಂಗಲ್ಯ ಸರ ಕಳವಾಗಿದೆ ಎನ್ಬಲಾಗುತ್ತಿದ್ದು, ಅಂದಾಜು 100 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ ಆರು ಲಕ್ಷ ರೂಪಾಯಿ ಎಂದು ಮಹಿಳೆ  ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ನೀಡಿದ...
Loading posts...

All posts loaded

No more posts

error: Content is protected !!