ಕೊಲ್ಲಮೊಗ್ರು : ಗ್ರಾಮಸ್ಥರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡದೇ ಅರಣ್ಯ ಇಲಾಖೆಯಿಂದ ಸರ್ವೇ ಕಾರ್ಯ ಆರಂಭ ; ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಭೆ – “ಮಾಹಿತಿ ನೀಡಿಯೇ ಸರ್ವೇ ಕಾರ್ಯ ಮುಂದುವರಿಸಬೇಕು” : ಗ್ರಾಮಸ್ಥರ ಆಗ್ರಹ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು ಗ್ರಾಮಸ್ಥರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೇ ಸರ್ವೇ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಗ್ರಾಮಸ್ಥರು ಆಕ್ರೋಶಿತರಾಗಿದ್ದು, ಪ್ರತಿಭಟನೆಗೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ. “ಗ್ರಾಮ ಪಂಚಾಯತ್ ಗೂ ಮಾಹಿತಿ ನೀಡದೇ ಸರ್ವೇ ಕಾರ್ಯ ಮಾಡುತ್ತಿರುವುದರಿಂದ ತಮ್ಮ ಕೃಷಿ ಭೂಮಿಗಳಿಗೆ...

ಬೋರುಗುಡ್ಡೆ ವಾರ್ಡ್ ಕನಿಕರಪಳ್ಳ 2ನೇ ಅಡ್ಡ ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ಸುಳ್ಯ ನಗರ ಪಂಚಾಯತ್ ವಾರ್ಡ್ ಸದಸ್ಯರ ಅನುದಾನದಡಿಯಲ್ಲಿ  ಬೋರುಗುಡ್ಡೆ ವಾರ್ಡ್ ಜಟ್ಟಿಪ್ಪಳ್ಳ ರಸ್ತೆಯ ಬಲ ಬಾಗದ ಕನಿಕರಪಳ್ಳ 2ನೇ ಅಡ್ಡ ರಸ್ತೆಯ ಕಾಂಕ್ರಿಟೀಕರಣ ಪೂರ್ಣಗೊಂಡಿದ್ದು, ಉದ್ಘಾಟನೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಾಫ ಮತ್ತು ನಗರ ಪಂಚಾಯತ್ ನಿಕಟಪೂರ್ವ ಸದಸ್ಯ ಕೆ.ಎಸ್ ಉಮ್ಮರ್ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್.ಉಮ್ಮರ್ “ನಡೆದಾಡಲೂ ಸಾಧ್ಯವಾಗದೆ ದುಸ್ಥಿತಿಯಲ್ಲಿದ್ದ...
Ad Widget

ಚೊಕ್ಕಾಡಿಯಲ್ಲಿ ಸ್ವಚ್ಛತಾ ಜಾಗೃತಿ ಉದ್ದೇಶಕ್ಕಾಗಿ ಕಸದ ಡಬ್ಬಿಗಳ ವಿತರಣೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ಡಿ.10 ರಂದು ಚೊಕ್ಕಾಡಿ ವ್ಯಾಪಾರ ವಲಯದ ವಿವಿಧ ಅಂಗಡಿಗಳಿಗೆ ಸ್ವಚ್ಛತಾ ಜಾಗೃತಿ ಉದ್ದೇಶದ ಕಸದ ಡಬ್ಬಿಗಳನ್ನು ವಿತರಿಸಲಾಯಿತು.ಸ್ವಚ್ಛತೆಯ ಮೇಲಿನ ಜಾಗೃತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂಗಡಿಗಳಿಗೆ ಕಸದ...

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ

ಅರಂತೋಡು : 35ನೇ  ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ  ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ "ಪ್ಲೇಯರ್ ಆಫ್ ದಿ ಮ್ಯಾಚ್" ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ "ಬೆಸ್ಟ್ ಅಟ್ಯಾಕರ್ ಪ್ರಶಸ್ತಿ" ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು...

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಂಚಸಪ್ತತಿ-2025 ರ 75ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದಡಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು. ವತಿಯಿಂದ ನಿರಂತರ 65ನೇ ದಿನದಲ್ಲಿ ಗುತ್ತಿಗಾರು ಪೇಟೆಯ ಮಧ್ಯಭಾಗದಲ್ಲಿ ಕಳೆಗಳನ್ನು ಮಿಷನ್ ಮೂಲಕ ತೆರವುಗೊಳಿಸಿ ಪ್ಯಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು.

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ; “ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ವಿಕಸನ ಸಾಧ್ಯ” :  ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

“ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಕೂಟಗಳು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ವಿಕಸನಕ್ಕೆ ಪೂರಕ” ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ  ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ  ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು.ಅವರು ಶನಿವಾರ ನಡೆದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ  ಚಾಲನೆ ನೀಡಿ ಮಾತನಾಡಿದರು.ಅಧ್ಯಕ್ಷತೆಯನ್ನು  ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆ...

“ರೈತರಿಗೆ ಸರಿಯಾದ ಬೆಳೆ ವಿಮೆ ಕೂಡಲೇ ಪಾವತಿಸಿ ವಿಳಂಬವಾದಲ್ಲಿ ಉಗ್ರ ಪ್ರತಿಭಟನೆಗೆ ಸಜ್ಜು” : ಕಿಶೋರ್ ಶಿರಾಡಿ

ಸುಬ್ರಹ್ಮಣ್ಯ ಡಿಸೆಂಬರ್ 12 : “ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ಈ ಭಾಗದ ಸಣ್ಣ, ಅತಿ ಸಣ್ಣ ರೈತರು ಇಂದು ಕೃಷಿಗೆ ಬಂದಿರತಕ್ಕಂತ ಎಲೆ ಚುಕ್ಕಿರೋಗ, ಕೊಳೆರೋಗ ಇತ್ಯಾದಿಗಳಿಂದ ಮಾನಸಿಕವಾಗಿ  ಕುಗ್ಗಿರುವುದೊಂದಿಗೆ ದಿವಾಳಿ ಕೂಡ ಆಗಿರುತ್ತಾರೆ. ಇದಕ್ಕಾಗಿ ಈ ಹಿಂದಿನ ವರ್ಷಗಳಲ್ಲಿ ಬೆಳೆ ವಿಮೆ ಕಟ್ಟಿ ಸರಿಯಾದ ವಿಮಾ ಪರಿಹಾರ ಕೂಡ...

ಜಯನಗರ ಗಜಾನನ ಭಜನಾ ಮಂದಿರದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ಮೊತ್ತದ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಒಂದು ಲಕ್ಷ ಮೊತ್ತದ ಚೆಕ್ ವಿತರಣೆಯನ್ನು ಡಿ.12 ರಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿ ಕ್ಷೇತ್ರದ ಇತಿಹಾಸದ ಬಗ್ಗೆ ಕ್ಷೇತ್ರದ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಭಿವೃದ್ಧಿ...

ಪಂಚಸಪ್ತತಿ ರಸಪ್ರಶ್ನೆ ಕಾರ್ಯಕ್ರಮದ 6ನೇ ಸುತ್ತಿನ ಅದೃಷ್ಟಶಾಲಿಗಳ ಆಯ್ಕೆ

ಚೈತ್ರಯುವತಿ ಮಂಡಲ(ರಿ.) ಅಜ್ಜಾ ವರ, ಪ್ರತಾಪ ಯುವಕ ಮಂಡಲ(ರಿ.) ಅಜ್ಜಾವರ ಇದರ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಇದರ ಅಂಗವಾಗಿ ನಡೆಯುತ್ತಿರುವ ರಸಪ್ರಶ್ನೆ ಕಾರ್ಯಕ್ರಮದ ಅದೃಷ್ಟಶಾಲಿಗಳ ಆಯ್ಕೆ ಶ್ರೀ ಶಾಸ್ತಾವೇಶ್ವರ ಸಭಾಭವನ ಕರ್ಲಪ್ಪಾಡಿಯಲ್ಲಿ ನಡೆಯಿತು. ನೆಹರು ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿ ಶ್ರೀಮತಿ ಚಿತ್ರಲೇಖ ಕೆ.ಎಸ್  ಹಾಗೂ ಶ್ರೀ ಶಾಸ್ತಾವೇಶ್ವರ ...

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪದಗ್ರಹಣ ಸಮಾರಂಭ ; ಅಧ್ಯಕ್ಷರಾಗಿ ನವೀನ್ ರೈ, ಕಾರ್ಯದರ್ಶಿಯಾಗಿ ಅಜಯ್ ಕುಮಾರ್, ಸಂಚಾಲಕರಾಗಿ ಗೋಪಾಲ್

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್(ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಇದರ 2025-27ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳೂರಿನ ಕದ್ರಿ ಛಾಯಾಭವನದಲ್ಲಿ ಮಂಗಳವಾರ ನಡೆಯಿತು.ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಪುತ್ತೂರು, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಮಂಗಳೂರು, ಜಿಲ್ಲಾ ಸಂಚಾಲಕರಾಗಿ ಗೋಪಾಲ ಸುಳ್ಯ,...
Loading posts...

All posts loaded

No more posts

error: Content is protected !!